ಧರ್ಮಶ್ರೀ

Author : ಎಸ್.ಎಲ್. ಭೈರಪ್ಪ

Pages 264

₹ 245.00

Buy Now


Year of Publication: 1961
Published by: ಸಾಹಿತ್ಯ ಭಂಡಾರ
Address: ಶಾಪ್ ನಂ.8, ಜೆಎಂ ಲೇನ್, ಬಳೆಪೇಟೆ, ಬೆಂಗಳೂರು ಕರ್ನಾಟಕ 560053
Phone: 080 2287 7618

Synopsys

ಪ್ರಮುಖ ಕಾದಂಬರಿಕಾರ ಎಸ್. ಎಲ್. ಭೈರಪ್ಪನವರ ’ಧರ್ಮಶ್ರೀ’ ಕಾದಂಬರಿಯು ಪಾಶ್ಚಿಮಾತ್ಯರ ಮತಾಂತರಗಳನ್ನು ಕುರಿತು ಚರ್ಚಿಸುತ್ತದೆ. ಆರ್‍ ಎಸ್ ಎಸ್ ಮತ್ತು ಸಂಘ ಪರಿವಾರ ಮತಾಂತರ ಚರ್ಚೆಗಳನ್ನು ಕೈಗೆತ್ತಿಕೊಂಡು ದೇಶದಾದ್ಯಂತ ದ್ವೇಷ ಭಾವನೆಯನ್ನು ಬಿತ್ತುತ್ತಿರುವ ಸಂದರ್ಭದಲ್ಲಿ ’ಧರ್ಮಶ್ರೀ’ ಕೃತಿ ರಚನೆಯಾಯಿತು.

ಹಿಂದೂಸ್ಥಾನಕ್ಕೆ ಹೊರಗಿನಿಂದ ಅಲೆಯಲೆಯಾಗಿ ಬಂದ ಜನಕ್ಕೆ ಲೆಕ್ಕವಿಲ್ಲವಾದರೂ ಅವರಲ್ಲಿ ಬಹುಭಾಗ ಜನರು ಸಾಂಸ್ಕೃತಿಕವಾಗಿ ಇಲ್ಲಿಯವರೇ ಆದರು. ರಾಷ್ಟ್ರಕ್ಕೆ ಹೊರಗಿನಿಂದ ಬಂದ ಮತಪ್ರಚಾರಕರು ಮಾತ್ರ ಇಲ್ಲಿಯ ಸಂಸ್ಕೃತಿಗೆ ತದ್ವಿರುದ್ಧವಾದ ಬೇರೊಂದು ಸಂಸ್ಕೃತಿಯನ್ನು ಬಿತ್ತಲು ಪ್ರಯತ್ನಿಸಿದರು. ಮತಾಂತರವು ಕೆಲವು ವ್ಯಕ್ತಿಗಳ ಜೀವನದಲ್ಲಿ ಆಕಸ್ಮಿಕವಾಗಿ ನಡೆಯುವ ಘಟನೆಯಲ್ಲ. ಅದೊಂದು ಸಾಂಸ್ಕೃತಿಕ ಘರ್ಷಣೆ. ಭಾರತೀಯ ಪರಂಪರೆಯಲ್ಲಿ ಧರ್ಮ, ಸಂಸ್ಕೃತಿ, ಎರಡೂ ಅವಿಭಿನ್ನವಾದ ರೂಪಗಳು. ಮತಾಂತರದಿಂದ ಸಂಭವಿಸುವ ಸಾಂಸ್ಕೃತಿಕ ಘರ್ಷಣೆಯ ಸ್ವರೂಪವೆಂತಹುದು ಎಂಬುದೇಧರ್ಮಶ್ರೀ ವಸ್ತು. ನಾಯಕನ ಜೀವನ ಮತ್ತು ಸಮಸ್ಯೆ , ಎರಡೂ ಒಂದೇ ಗಿರುವುದರ ಬಗ್ಗೆ ಈ ಕಾದಂಬರಿ ಪ್ರಸ್ತಾಪಿಸುತ್ತದೆ.

 

About the Author

ಎಸ್.ಎಲ್. ಭೈರಪ್ಪ
(20 August 1931)

ಜನಪ್ರಿಯ ಕಾದಂಬರಿಕಾರ ಎಸ್.ಎಲ್. ಭೈರಪ್ಪ ಅವರು ಮೀಮಾಂಸಕರೂ ಹೌದು. ಹಾಸನ ಜಿಲ್ಲೆ ಚೆನ್ನರಾಯಪಟ್ಟಣದ ಸಂತೇಶಿವರ ಗ್ರಾಮದಲ್ಲಿ 1931ರ ಆಗಸ್ಟ್ 20ರಂದು ಜನಿಸಿದರು. ತಂದೆ ಲಿಂಗಣ್ಣಯ್ಯ- ತಾಯಿ ಗೌರಮ್ಮ. ತಮ್ಮ ಹುಟ್ಟೂರಿನ ಸುತ್ತಮುತ್ತಲ ಶಾಲೆಗಳಲ್ಲಿ ಪ್ರಾಥಮಿಕ ವಿದ್ಯಾಭ್ಯಾಸ ಮುಗಿಸಿ ಮೈಸೂರಿಗೆ ಬಂದು ಶಾರದಾವಿಲಾಸ ಪ್ರೌಢಶಾಲೆಯಲ್ಲಿ ಓದಿ, ಮಹಾರಾಜ ಕಾಲೇಜಿನಲ್ಲಿ ಬಿ.ಎ. ಮಾಡಿ, ಮೈಸೂರು ವಿಶ್ವವಿದ್ಯಾನಿಲಯದಿಂದ ಎಂ.ಎ. ಪದವಿ ಗಳಿಸಿದರು. ಅನಂತರ ಹುಬ್ಬಳ್ಳಿಯ ಕಾಡುಸಿದ್ಧೇಶ್ವರ ಕಾಲೇಜಿನಲ್ಲಿ ಅಧ್ಯಾಪಕ (1958-60), ಗುಜರಾತಿನ ಸರ್ದಾರ್ ಪಟೇಲ್ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸಕ (1960-66), ದೆಹಲಿಯ ರಾಷ್ಟ್ರೀಯ ಶಿಕ್ಷಣ ಮತ್ತು ತರಬೇತಿ ಶಿಕ್ಷಣ ಸಂಸ್ಥೆಯಲ್ಲಿ ಉಪಪ್ರಾಧ್ಯಾಪಕ (1967-1971) ...

READ MORE

Related Books