ಅವಿಭಜಿತ ಧಾರವಾಡ ಜಿಲ್ಲೆಯಲ್ಲಿ ಒಟ್ಟು 1915 ಗ್ರಾಮಗಳಿವೆ. ಅವುಗಳಲ್ಲಿ 546 ಗ್ರಾಮಗಳಲ್ಲಿ ಒಟ್ಟು 2139 ಶಾಸನಗಳು ದೊರೆತಿವೆ. ಇವುಗಳಲ್ಲಿ 947 ಶಾಸನಗಳು ಪ್ರಕಟಿತ. ಧಾರವಾಡ ಜಿಲ್ಲೆಯ 16 ತಾಲೂಕುಗಳಲ್ಲಿ ಸಮೀಕ್ಷಾ ಕಾರ್ಯ ನಡೆಸಿ ಎಂ.ಎಂ. ಕಲಬುರ್ಗಿ ಕೃತಿಯನ್ನು ಹೊರತಂದಿದ್ದಾರೆ. ಪ್ರಕಟಿತ ಮತ್ತು ಅಪ್ರಕಟಿತ ಎರಡೂ ಬಗೆಯ ಶಾಸನಗಳ ವಿವರ ಗ್ರಂಥದಲ್ಲಿ ದೊರೆಯುತ್ತದೆ. ಶಾಸನ ದೊರೆತ ಗ್ರಾಮ, ಸ್ಥಳ, ಬರೆಯಿಸಿದ ಅರಸ, ಶಾಸನಗಳ ಸ್ವರೂಪ, ಉದ್ದೇಶ, ಹಿನ್ನೆಲೆ, ಭಾಷೆ ಇತ್ಯಾದಿ ವಿವರಗಳನ್ನು ಕೃತಿಯಲ್ಲಿ ನೀಡಲಾಗಿದೆ.
ಕರ್ನಾಟಕದಲ್ಲಿ ಸಂಶೋಧನಾ ಕ್ಷೇತ್ರದ ಪ್ರಮುಖ ಹೆಸರು ಎಂ.ಎಂ. ಕಲಬುರ್ಗಿ. ಶಾಸನಶಾಸ್ತ್ರ, ಸಾಹಿತ್ಯ ಚರಿತ್ರೆ, ಛಂದಸ್ಸು, ಇತಿಹಾಸ, ವಾಸ್ತುಶಿಲ್ಪ, ಗ್ರಂಥಸಂಪಾದನೆ, ಹಸ್ತಪ್ರತಿಶಾಸ್ತ್ರ, ಜಾನಪದ, ಸ್ಥಳನಾಮಗಳ ಅಧ್ಯಯನ, ಸಾಹಿತ್ಯ ವಿಮರ್ಶೆ ಕ್ಷೇತ್ರಗಳಲ್ಲಿ ಹರಡಿಕೊಂಡಿವೆ. ಮಲ್ಲೇಶಪ್ಪ ಮಡಿವಾಳಪ್ಪ ಕಲಬುರ್ಗಿಯವರು ಬಿಜಾಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಯರಗಲ್ಲ ಗ್ರಾಮದಲ್ಲಿ 1938ರ ನವೆಂಬರ್ 28ರಂದು ಜನಿಸಿದರು. ತಾಯಿ ಗುರಮ್ಮ; ತಂದೆ ಮಡಿವಾಳಪ್ಪ. ಕಲಬುರ್ಗಿಯವರು ಕರ್ನಾಟಕ ವಿಶ್ವವಿದ್ಯಾಲಯದಿಂದ ಬಿ.ಎ (1960) ಮತ್ತು ಎಂ.ಎ (1962) ಪದವಿ ಪಡೆದ ಅವರು ಸಲ್ಲಿಸಿದ ‘ಕವಿರಾಜಮಾರ್ಗ ಪರಿಸರದ ಕನ್ನಡ ಸಾಹಿತ್ಯ’ (1968) ಎಂಬ ಮಹಾಪ್ರಬಂಧಕ್ಕೆ ಪಿ.ಎಚ್.ಡಿ. ಪದವಿ ಸಂದಿತ್ತು. ಕರ್ನಾಟಕ ಕಾಲೇಜಿನಲ್ಲಿ ...
READ MORE