ದಿನಕರ ದೇಸಾಯಿ ನೂರು: ನೆನಪು

Author : ಅಮರೇಶ ನುಗಡೋಣಿ

Pages 136

₹ 80.00




Year of Publication: 2011
Published by: ಪ್ರಸಾರಾಂಗ
Address: ಕನ್ನಡ ವಿಶ್ವವಿದ್ಯಾಲಯ, ಹಂಪಿ
Phone: 08022372388

Synopsys

ಆಧುನಿಕ ಕನ್ನಡ ಸಾಹಿತ್ಯದ ಮೊದಲ ತಲೆಮಾರಿನ ಲೇಖಕರಲ್ಲಿ ಮುಖ್ಯರಾದ ದಿನಕರ ದೇಸಾಯಿ ಅವರು ವಿಶಿಷ್ಟ ತಾತ್ವಿಕ ನೆಲೆಯಿಂದ, ಪ್ರಗತಿಪರ ಚಿಂತನೆಗಳಿಂದ ದೀನ ದಲಿತರ ಪರವಾಗಿ ಹೋರಾಟವನ್ನು ರೂಢಿಸಿಕೊಂಡಿದ್ದವರು. ಜನಪರ ಹೋರಾಟ ಮತ್ತು ಅದರ ಭಾಗವಾಗಿ ಸಾಹಿತ್ಯ ರಚನೆಯಿಂದ ಕನ್ನಡ ಸಾಹಿತ್ಯದಲ್ಲಿ ಪರಿಚಿತರಾದವರು. ಇವರ ಬದುಕು, ಹೋರಾಟನಿರತ ಸಾಹಿತ್ಯ ಕುರಿತು ಅಮರೇಶ ನುಗಡೋಣಿ ಅವರು ಕೃತಿಯಲ್ಲಿ ವಿವರಿಸಿದ್ದಾರೆ.

About the Author

ಅಮರೇಶ ನುಗಡೋಣಿ
(02 June 1969)

ರಾಯಚೂರು ಜಿಲ್ಲೆಯ ಮಾನವಿ ತಾಲೂಕಿನ ನುಗಡೋಣಿಯಲ್ಲಿ 1960 ರಲ್ಲಿ ಜನಿಸಿದ ಅಮರೇಶ ನುಗಡೋಣಿಯವರು ಹಂಪಿಯ ಕನ್ನಡ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ದೇವನೂರು ಮಹಾದೇವರ ನಂತರದ ಲೇಖಕರಲ್ಲಿ ಶೋಷಣಾವ್ಯವಸ್ಥೆಯ ವಿವಿಧ ಮುಖಗಳನ್ನು ನುಗಡೋಣಿಯವರಷ್ಟು ಸಮರ್ಥವಾಗಿ ಚಿತ್ರಿಸಿದ ಲೇಖಕರು ಇನ್ನೊಬ್ಬರಿಲ್ಲ ಎಂದು ಹೇಳಬಹುದು. ಸಾಹಿತ್ಯದ ಹಲವು ಮಜಲುಗಳಲ್ಲಿ ಕೆಲಸ ಮಾಡಿರುವ ಅವರು ಅನೇಕ ಕೃತಿಗಳನ್ನು ರಚಿಸಿದ್ದಾರೆ. ಅವರ ಕವನ ಸಂಕಲನಗಳು- ನೀನು, ಅವನು, ಪರಿಸರ. ಕಥಾ ಸಂಕಲನ- ಮಣ್ಣು ಸೇರಿತು ಬೀಜ, ಅರಿವು (ನವಸಾಕ್ಷರರಿಗಾಗಿ), ತಮಂಧದ ಕೇಡು, ಮುಸ್ಸಂಜೆಯ ಕಥಾನಕಗಳು, ಸವಾರಿ, ಹಾಗೂ ವ್ಯಕ್ತಿ ಪರಿಚಯ ಕೃತಿಯಲ್ಲಿ ಶ್ರೀಕೃಷ್ಣ ಆಲನಹಳ್ಳಿ (ಬದುಕು ...

READ MORE

Related Books