ದೂರ ಸರಿದರು

Author : ಎಸ್.ಎಲ್. ಭೈರಪ್ಪ

Pages 254

₹ 245.00

Buy Now


Year of Publication: 2014
Published by: ಸಾಹಿತ್ಯ ಭಂಡಾರ
Address: ಶಾಪ್ ನಂ.8, ಜೆಎಂ ಲೇನ್, ಬಳೆಪೇಟೆ, ಬೆಂಗಳೂರು ಕರ್ನಾಟಕ 560053
Phone: 080 2287 7618

Synopsys

’ದೂರ ಸರಿದರು’ ಕನ್ನಡದ ಹೆಸರಾಂತ ಕಾದಂಬರಿಗಾರರಾದ ಎಸ್.ಎಲ್. ಭೈರಪ್ಪನವರು ೧೯೬೨ರಲ್ಲಿ ರಚಿಸಿದ ಒಂದು ಕಾದಂಬರಿಯಾಗಿದೆ.

ಮೈಸೂರಿನ ಒಂದು ಕಾಲೇಜಿನ ಸಾಹಿತ್ಯ ಹಾಗೂ ತತ್ವಶಾಸ್ತ್ರ ವಿದ್ಯಾರ್ಥಿಗಳ ಪ್ರೇಮಕಥೆಗಳನ್ನು ಒಳಗೊಂಡ ಕಾದಂಬರಿ ಇದಾಗಿದೆ. ಸಂಬಂಧದಲ್ಲಿ ಹೇಗೆ ಹೆಣ್ಣು- ಗಂಡಿನ ಸಮಾನತೆ, ಸಾಹಿತ್ಯ, ತತ್ವ ಮುಂತಾದವು ಪಾತ್ರ ವಹಿಸುತ್ತವೆ ಎಂಬುದು ಕಾದಂಬರಿಯ ಮುಖ್ಯ ವಸ್ತುವಾಗಿದೆ. ಪ್ರೇಮವನ್ನು ಸಾಹಿತ್ಯ , ತತ್ವದ ವಿದ್ಯಾರ್ಥಿಗಳು ವಿಭಿನ್ನವಾಗಿ ಅರ್ಥೈಸಿಕೊಳ್ಳುತ್ತಾರೆ ಎಂಬುದು ಭೈರಪ್ಪನವರ ಪ್ರತಿಪಾದನೆಯಾಗಿದೆ. ಸಚ್ಚಿದಾನಂದ, ವಸಂತ, ಉಮಾ, ರಮಾ, ವಿನತಾ ಈ ಕಾದಂಬರಿಯ ಮುಖ್ಯ ಪಾತ್ರ ವರ್ಗ.

ಗಂಡುಹೆಣ್ಣಿನ ಸಂಬಂಧದ ವಿಶ್ಲೇಷಣೆಯು ಪ್ರಪಂಚದ ಎಲ್ಲ ಪ್ರಮುಖ ಸಾಹಿತ್ಯ ಕೃತಿಗಳಲ್ಲೂ ಒಂದಲ್ಲ ಒಂದು ರೀತಿಯಲ್ಲಿ ಕಾಣಿಸಿಕೊಳ್ಳುತ್ತದೆ.ನಲವತ್ತೆಂಟು ವರ್ಷ ಕಳೆದರೂ ಪದೇ ಪದೇ ಮರುಮುದ್ರಣ ಕಾಣುತ್ತಾ ಸಾಗಿರುವ ಕೃತಿಯ ಸಶಕ್ತ ಸನ್ನಿವೇಶ, ಜೀವಂತ ಪಾತ್ರ ಚಿತ್ರಣ ಮೊದಲಾದ ಗುಣಗಳಿಂದ ಓದುಗರ ನೆನಪಿನಲ್ಲಿ ಮುಳುಗಿಸುತ್ತದೆ.

About the Author

ಎಸ್.ಎಲ್. ಭೈರಪ್ಪ
(20 August 1931)

ಜನಪ್ರಿಯ ಕಾದಂಬರಿಕಾರ ಎಸ್.ಎಲ್. ಭೈರಪ್ಪ ಅವರು ಮೀಮಾಂಸಕರೂ ಹೌದು. ಹಾಸನ ಜಿಲ್ಲೆ ಚೆನ್ನರಾಯಪಟ್ಟಣದ ಸಂತೇಶಿವರ ಗ್ರಾಮದಲ್ಲಿ 1931ರ ಆಗಸ್ಟ್ 20ರಂದು ಜನಿಸಿದರು. ತಂದೆ ಲಿಂಗಣ್ಣಯ್ಯ- ತಾಯಿ ಗೌರಮ್ಮ. ತಮ್ಮ ಹುಟ್ಟೂರಿನ ಸುತ್ತಮುತ್ತಲ ಶಾಲೆಗಳಲ್ಲಿ ಪ್ರಾಥಮಿಕ ವಿದ್ಯಾಭ್ಯಾಸ ಮುಗಿಸಿ ಮೈಸೂರಿಗೆ ಬಂದು ಶಾರದಾವಿಲಾಸ ಪ್ರೌಢಶಾಲೆಯಲ್ಲಿ ಓದಿ, ಮಹಾರಾಜ ಕಾಲೇಜಿನಲ್ಲಿ ಬಿ.ಎ. ಮಾಡಿ, ಮೈಸೂರು ವಿಶ್ವವಿದ್ಯಾನಿಲಯದಿಂದ ಎಂ.ಎ. ಪದವಿ ಗಳಿಸಿದರು. ಅನಂತರ ಹುಬ್ಬಳ್ಳಿಯ ಕಾಡುಸಿದ್ಧೇಶ್ವರ ಕಾಲೇಜಿನಲ್ಲಿ ಅಧ್ಯಾಪಕ (1958-60), ಗುಜರಾತಿನ ಸರ್ದಾರ್ ಪಟೇಲ್ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸಕ (1960-66), ದೆಹಲಿಯ ರಾಷ್ಟ್ರೀಯ ಶಿಕ್ಷಣ ಮತ್ತು ತರಬೇತಿ ಶಿಕ್ಷಣ ಸಂಸ್ಥೆಯಲ್ಲಿ ಉಪಪ್ರಾಧ್ಯಾಪಕ (1967-1971) ...

READ MORE

Related Books