ದೌರ್ಗಂಧಿಕಾಪಹರಣ

Author : ಬಿ.ಜಿ.ಎಲ್. ಸ್ವಾಮಿ

Pages 68

₹ 45.00

Buy Now


Year of Publication: 2019
Published by: ವಸಂತ ಪ್ರಕಾಶನ
Address: ನಂ 360, 10ನೇ ಬಿ- ಮುಖ್ಯರಸ್ತೆ, 3ನೇ ಅಡ್ಡರಸ್ತೆ, ಜಯನಗರ, ಬೆಂಗಳೂರು-11

Synopsys

ಬಿ ಜಿ ಎಲ್ ಸ್ವಾಮಿಯವರು ಬರೆದ ಪುಸ್ತಕ-ದೌರ್ಗಂಧಿಕಾಪಹರಣ . ವೈಜ್ಞಾನಿಕ ವಿಷಯದೊಂದಿಗೆ ಹಾಸ್ಯಮಯ ಸನ್ನಿವೇಶಗಳು ಇಲ್ಲಿವೆ. ಇವು ಅನುಭವ ಕಥನಗಳೂ ಆಗಿವೆ. ತಮ್ಮ ಓದು, ಬೋಧನೆಯ ಸಮಯದಲ್ಲಿ ಸಸ್ಯಗಳ ಸಂಶೋಧನೆಗೆ ಹೊರಟಾಗಿನ ಕೆಲವು ಕೆಟ್ಟ ಅನುಭವಗಳನ್ನುಇಲ್ಲಿ ದಾಖಲಿಸಿದ್ದಾರೆ. ಲೇಖಕರೇ ಬಿಡಿಸಿದ ಚಿತ್ರಗಳು ಲೇಖನಗಳಿಗೆ ಮತ್ತಷ್ಟು ಮೆರಗು ನೀಡಿವೆ. ಲೇಖಕರು “ಜನಸಾಮಾನ್ಯರನ್ನು ಗುರಿಯಾಗಿಟ್ಟುಕೊಂಡು ವಿಜ್ಞಾನ ವಿಷಯಗಳನ್ನು ಪ್ರಸ್ತಾವಿಸುವ ಬರವಣಿಗೆ” ಎಂದು ಪೀಠಿಕೆಯಲ್ಲಿ ಬರೆದಿದ್ದಾರೆ. ಆದರೆ, ಈ ಪುಸ್ತಕವು ನವಿರಾದ ಹಾಸ್ಯವನ್ನೂ ಒಳಗೊಂಡಿದ್ದನ್ನು ತಳ್ಳಿ ಹಾಕುವಂತಿಲ್ಲ.

About the Author

ಬಿ.ಜಿ.ಎಲ್. ಸ್ವಾಮಿ
(05 February 1916 - 02 November 1980)

ಬಿ. ಜಿ. ಎಲ್. ಸ್ವಾಮಿ ಅಂತರ್‌ರಾಷ್ಟ್ರೀಯ ಮಟ್ಟದ ಸಸ್ಯವಿಜ್ಞಾನಿ, ಹಿರಿಯ ವಿದ್ವಾಂಸ, ಸಾಹಿತಿ, ಚಿಂತನಶೀಲ ಬರಹಗಾರ ಡಾ. ಬಿ.ಜಿ.ಎಲ್‌. ಸ್ವಾಮಿ.  `ಶ್ರೇಷ್ಠ ವಿಜ್ಞಾನಿ' ಎಂದು ಹೆಸರಾಗಿದ್ದ ಖ್ಯಾತ ಸಂಶೋಧಕ ಸ್ವಾಮಿ ಅವರ ಪೂರ್ಣ ಹೆಸರು ’ಬೆಂಗಳೂರು ಗುಂಡಪ್ಪ ಲಕ್ಷ್ಮೀನಾರಾಯಣಸ್ವಾಮಿ’. ಕನ್ನಡದ ಹಿರಿಯ ಸಾಹಿತಿ ಡಿವಿಜಿಯವರ ಪುತ್ರ. 1916ರ ಫೆಬ್ರುವರಿ ಐದರಂದು ಜನಿಸಿದ ಅವರು ಬಾಲ್ಯದಲ್ಲಿಯೇ ತಾಯಿಯನ್ನು ಕಳೆದುಕೊಂಡರು. ತಂದೆಯ ಗುಂಡಪ್ಪ ಹಾಗೂ ಅವರ ಗ್ರಂಥ ಭಂಡಾರದಿಂದ ಪ್ರತಿಭಾನ್ವಿತರಾದ ವ್ಯಕ್ತಿ. ಪ್ರಾಥಮಿಕದಿಂದ ಪದವಿಯವರೆಗೆ ಬೆಂಗಳೂರಿನಲ್ಲಿ ವ್ಯಾಸಂಗ ಮಾಡಿದ ಅವರು ಸೆಂಟ್ರಲ್ ಕಾಲೇಜಿನಲ್ಲಿ ಸಸ್ಯಶಾಸ್ತ್ರದ ವಿದ್ಯಾರ್ಥಿ ಆಗಿರುವಾಗ ಕರ್ನಾಟಕ ಸಂಘದ ಕಾರೈದರ್ಶಿ ...

READ MORE

Related Books