ಡಾ. ಬಸವರಾಜ ಮಲಶೆಟ್ಟಿ

Author : ಸಿ.ಕೆ ನಾವಲಗಿ

Pages 40

₹ 15.00




Year of Publication: 2010
Published by: ಕರ್ನಾಟಕ ಜಾನಪದ ಪರಿಷತ್ತು
Address: ಪ್ರಿಯದರ್ಶಿನಿ ಲೇಔಟ್‌, ಎಂ.ಎಸ್. ರಾಮಯ್ಯ ಆಸ್ಪತ್ರೆ ಗೇಟ್‌ ಹತ್ತಿರ, ಬಿಇಎಲ್‌ ರಸ್ತೆ, ಬೆಂಗಳೂರು-560054
Phone: 08023605033

Synopsys

ಜಾನಪದ ತಜ್ಞರಾಗಿದ್ದ ಡಾ. ಬಸವರಾಜ ಮಲಶೆಟ್ಟಿ ಅವರು ಉತ್ತರ ಕರ್ನಾಟಕದ ಬಯಲಾಟಕ್ಕೆ ವಿಶಿಷ್ಟ ಸ್ಪರ್ಶ ನೀಡಿದವರು. ರಂಗಭೂಮಿ, ಸಂಗೀತ ಕ್ಷೇತ್ರದಲ್ಲಿ ಅಪಾರ ಪರಿಣಿತಿ ಹೊಂದಿದ್ದ ಮಲಶೆಟ್ಟಿ ಅವರು ಮೂಲತಃ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ತಿಗಡೊಳ್ಳಿಯವರು. ಪ್ರಸ್ತುತ ಕೃತಿಯು ಬಸವರಾಜ ಮಲಶೆಟ್ಟಿ ಅವರ ಬದುಕು ಸಾಧನೆಗಳ ಕುರಿತು ಸಮಗ್ರ ಮಾಹಿತಿ ನೀಡುವ ಕೃತಿಯಾಗಿದೆ. ಮಲಶೆಟ್ಟಿ ಅವರು ವೃತ್ತಿರಂಗಭೂಮಿ, ಬಯಲಾಟ, ಹವ್ಯಾಸಿ ನಾಟಕ ರಂಗಭೂಮಿಗಳಿಗೆ ತಂದ ಸಾಮರಸ್ಯ. ರಂಗಭೂಮಿಯ ನಟರಾಗಿ, ನಿರ್ದೇಶಕರಾಗಿ ಹಲವಾರು ನಾಟಕಗಳ ಪ್ರದರ್ಶನ. ಗಿರಿಜಾಕಲ್ಯಾಣ ದೊಡ್ಡಾಟವನ್ನು ಪರಿಷ್ಕರಿಸಿ ದೇಶ ವಿದೇಶಗಳಲ್ಲಿ ಅದರ ಪ್ರದರ್ಶನ ಏರ್ಪಡಿಸಲು ಕಾರಣರಾದರು. ದಿಲ್ಲಿ, ಮುಂಬಯಿ, ಬೆಂಗಳೂರು ಮುಂತಾದ ನಗರಗಳಲ್ಲಿ, ಪ್ರತಿಷ್ಠಿತ ಸಾಂಸ್ಕೃತಿಕ ಉತ್ಸವಗಳಲ್ಲಿ ಪ್ರದರ್ಶಿಸಿ ಮೆಚ್ಚುಗೆ ಪಡೆದರು. ಹೊಸಪೇಟೆಯಲ್ಲಿ ರಂಗಭೂಮಿ ಚಟುವಟಿಕೆಯ ಜೀವಂತವಾಗಿ ಇರಿಸಿದ್ದರು. ಕರ್ನಾಟಕ ನಾಟಕ ಅಕಾಡಮಿ, ಜಾನಪದ ಪರಿಷತ್‌, ದಕ್ಷಿಣ ಮಧ್ಯ ಸಾಂಸ್ಕೃತಿಕ ಕೇಂದ್ರ – ನಾಗಪುರ, ಉಡುಪಿಯ ರಂಗ ಕಲೆಗಳ ಅಧ್ಯಯನ ಕೇಂದ್ರಗಳ ಸದಸ್ಯರಾಗಿದ್ದರು. ಉತ್ತರ ಕರ್ನಾಟಕದ ರಂಗಗೀತೆಗಳು, ಜನಪದ ವಾದ್ಯಗಳು ಪುಸ್ತಕಗಳನ್ನು ಪ್ರಕಟಿಸಿದ್ದಾರೆ. ಕರ್ನಾಟಕ ಜಾನಪದ ಅಕಾಡಮಿ ಜಾನಪದ ತಜ್ಞ ಪ್ರಶಸ್ತಿ, ಜಾನಪದ ಪರಿಷತ್ತಿನ ವಿಶೇಷ ಪುರಸ್ಕಾರ, ಕಾವ್ಯಾನಂದ ಪ್ರಶಸ್ತಿ ದೊರೆತಿದ್ದವು. ಇವರ ಬದುಕು-ಬರಹ ಕುರಿತು ಸಾಹಿತಿ ಸಿ.ಕೆ. ನಾವಲಗಿ ಅವರು ಸುಂದರ ಚಿತ್ರಣ ನೀಡಿದ್ದಾರೆ.

About the Author

ಸಿ.ಕೆ ನಾವಲಗಿ
(01 August 1956)

ಡಾ. ಸಿ.ಕೆ. ನಾವಲಗಿ ಎಂತಲೇ ಪರಿಚಿತರಾಗಿರುವ ಲೇಖಕ ಚೆನ್ನಬಸಪ್ಪ ಕಲ್ಲಪ್ಪ ನಾವಲಗಿ ಅವರು 1956 ಆಗಸ್ಟ್‌ 1ರಂದು ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲ್ಲೂಕಿನ ಬಸರಕೋಡ ಗ್ರಾಮದಲ್ಲಿ ಜನಿಸಿದರು. ಕನ್ನಡ ಜಾನಪದ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದ ಇವರು ಕನ್ನಡ ಅಧ್ಯಾಪಕರಾಗಿ ವೃತ್ತಿ ಆರಂಭಿಸಿ, ಪಾಚಾರ್ಯರಾಗಿ ನಿವೃತ್ತಿ ಹೊಂದಿದ್ದಾರೆ.  ಇವರು ರಚಿಸಿದ ಪ್ರಮುಖ ಕೃತಿಗಳೆಂದರೆ ಜಾನಪದ ಸ್ಪಂದನ, ಬೇಂದ್ರೆಯವರ ಕಾವ್ಯದ ಮೇಲೆ ಜಾನಪದ ಪ್ರಭಾವ, ಗಾದೆಗಳಲ್ಲಿ ಹಾಸ್ಯ, ಶರಣ ವಿಚಾರವಾಹಿನಿ, ವಚನ ಸಾಹಿತ್ಯ ಮತ್ತು ಜಾನಪದ, ದಿಕ್ಸೂಚಿ, ವಚನ ಸಾಹಿತ್ಯದಲ್ಲಿ ಜಾನಪದ ಅಂಶಗಳು, ಗ್ರಾಮೀಣ ಗ್ರಹಿಕೆ, ಕಥನ ಕವನ ಸಂಚಯ, ...

READ MORE

Related Books