ಡಾ. ಎಸ್. ರಾಧಾಕೃಷ್ಣನ್

Author : ಸಂಗಮೇಶ ತಮ್ಮನಗೌಡ್ರ

Pages 56

₹ 25.00




Year of Publication: 2014
Published by: ಸಿದ್ದೇಶ್ವರ ಪ್ರಕಾಶನ
Address: ಹಳೆ ಸರಾಫ್ ಬಜಾರ್‍, ಶ್ರೀ ಜಗದಂಬಾ ದೇವಿ ದೇವಸ್ಥಾನ ಹತ್ತಿರ, ಗದಗ-01

Synopsys

ಭಾರತದ ರಾಷ್ಟ್ರಪತಿ, ಶಿಕ್ಷಣ ತಜ್ಷಹಾಗೂ ತತ್ವಜ್ಞಾನಿಯೂ ಆದ ಡಾ. ಎಸ್. ರಾಧಾಕೃಷ್ಣನ್ ಅವರ ಕುರಿತು ಲೇಖಕ ಸಂಗಮೇಶ ತಮ್ಮನಗೌಡ್ರ ಅವರು ಬರೆದ ಕೃತಿ. ಡಾ. ಎಸ್. ರಾಧಾಕೃಷ್ಣನ್ ಅವರು ವ್ಯಕ್ತಿ ಹಾಗೂ ಶಕ್ತಿ, ಬೋಧಕರು-ಉಪಕುಲಪತಿಗಳು, ರಾಷ್ಟ್ರಪತಿಗಳಾಗಿ ಸೇವೆ ಹಾಗೂ ಅವರ ಸಾರ್ಥಕ ಬದುಕಿನ ವಿಚಾರ ವೈಶಿಷ್ಟ್ಯ ಹೀಗೆ ವಿವಿಧ ಶೀರ್ಷಿಕೆಗಳಡಿ ಲೇಖಕರು ಎಸ್. ರಾಧಾಕೃಷ್ಣನ್ ಅವರ ಜೀವನದ ಸ್ವರೂಪ ಹಾಗೂ ಸಾಧನೆಯ ಪರಿಚಯವನ್ನು ನೀಡಿದ್ದಾರೆ.

About the Author

ಸಂಗಮೇಶ ತಮ್ಮನಗೌಡ್ರ
(15 January 1970)

ಸಂಗಮೇಶ ತಮ್ಮನಗೌಡ್ರ (ಎಸ್.ವಿ. ತಮ್ಮನಗೌಡ್ರ) ಮೂಲತಃ ಗದಗ ಜಿಲ್ಲೆಯ ಗುಜಮಾಗಡಿ ಗ್ರಾಮದವರು. (ಜನನ: 15-01-1970) ಸದ್ಯ, ರೋಣ ತಾಲೂಕಿನ ಬೂದಿಹಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮಹಾರಾಷ್ಟ್ರದ ಕೊಲ್ಹಾಪುರ ವಿ.ವಿ.ಯಿಂದ ಎಂ.ಎ, ಮಧುರೈ ಕಾಮರಾಜ ವಿವಿಯಿಂದ ಎಂ.ಫಿಲ್ ಹಾಗೂ ಮುಂಬೈ ವಿ.ವಿ.ಯಿಂದ ಪಿಎಚ್ ಡಿ (ವಿಷಯ: ಕನ್ನಡದಲ್ಲಿ ಏಕಾಂಕಗಳು: ಒಂದು ಅಧ್ಯಯನ-1975-95) ಪದವಿ ಪಡೆದರು. ದ.ರಾ. ಬೇಂದ್ರೆ ವೇದಿಕೆ ಸ್ಥಾಪಿಸಿ (2000) ನಿರಂತರವಾಗಿ ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ. ಕೃತಿಗಳು: ಹಂಸ, ಸ್ಫೂರ್ತಿ-ಕವನ ಸಂಕಲನಗಳು, ಮತ್ತೆ ಹುಟ್ಟಿತು ಕವನ-ಭಾವಗೀತೆಗಳ ಸಂಕಲನ, ಪಶ್ಚಾತ್ತಾಪ, ಕರುಳಿನ ಬೆಲೆ, ಖಳನಾಯಕನ ...

READ MORE

Related Books