ಡಾ. ಸಿದ್ಧಲಿಂಗಯ್ಯ ಸಮಗ್ರ ಸಾಹಿತ್ಯ ಸಂಪುಟ-1 ಕಾವ್ಯ ಮತ್ತು ನಾಟಕಗಳು

Author : ಸಿದ್ಧಲಿಂಗಯ್ಯ

Pages 388

₹ 365.00




Year of Publication: 2018
Published by: ಕನ್ನಡ ಪುಸ್ತಕ ಪ್ರಾಧಿಕಾರ
Address: ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002
Phone: 080-22107704

Synopsys

ಜಡ್ಡುಗಟ್ಟಿದಂತಿದ್ದ ಕನ್ನಡ ಕಾವ್ಯಕ್ಕೆ ಸಿದ್ಧಲಿಂಗಯ್ಯನವರ ಶತಮಾನಗಳ ನೋವು, ಅವಮಾನ, ಹಸಿವುಗಳ ಒಳಸಂಕಟ ಪ್ರತಿಕ್ರಿಯಾತ್ಮಕವಾಗಿ ದನಿಯೆತ್ತುವ ಬಗೆಯ ರಚನೆಗಳು ಹೊಸ ಚುರುಕನ್ನು, ಭಾಷಾ ಪ್ರಯೋಗದ ಹೊಸತನವನ್ನು ಪರಿಚಯಿಸಿದೆ. ಅವರ ನಾಟಕಗಳು ಕನ್ನಡ ರಂಗಭೂಮಿಯಲ್ಲಿ ಹಲವು ಬಾರಿ ಪ್ರದರ್ಶನ ಕಂಡಂತೆ ಜನಪ್ರಿಯತೆ ಪಡೆದಿದ್ದು. ಸಿದ್ಧಲಿಂಗಯ್ಯನವರು ಭಾರತೀಯ ಸಮಾಜೋ ಧಾರ್ಮಿಕ ಹಾಗು ಸಮಾಜೋ ರಾಜಕೀಯ ಸಂಘರ್ಷ ಸೂಕ್ಷ್ಮಗಳನ್ನು ತಮ್ಮ ನಾಟಕಗಳಲ್ಲಿ ಸೂಕ್ಷ್ಮವಾಗಿ ವಿವರಿಸಿದ್ದಾರೆ. ದಲಿತ ಸಂವೇದನೆಯ ಒಳನೋಟಗಳನ್ನು ತುಂಬಿಕೊಂಡಂತೆ ಪುರಾಣ, ಇತಿಹಾಸ ಮತ್ತು ವರ್ತಮಾನವನ್ನು ಮುಖಾಮುಖಿಯಾಗಿಸಿದ ಸಮರ್ಥ ನಾಟಕಗಳನ್ನು ಈ ಕೃತಿಯು ಒಳಗೊಂಡಿದೆ.

About the Author

ಸಿದ್ಧಲಿಂಗಯ್ಯ
(03 February 1954)

ದಲಿತ ಕವಿ ಎಂದು ಗುರುತಿಸಲಾಗುವ ಡಾ. ಸಿದ್ಧಲಿಂಗಯ್ಯ ಅವರು ದಲಿತ-ಬಂಡಾಯ ಸಾಹಿತ್ಯ ಚಳುವಳಿಯ ಪ್ರಮುಖ ಕವಿ-ಹೋರಾಟಗಾರ. ಮಾಗಡಿಯಲ್ಲಿ 1954ರ ಫೆಬ್ರುವರಿ 3ರಂದು ಜನಿಸಿದರು. ತಾಯಿ ವೆಂಕಮ್ಮ- ತಂದೆ ದೇವಯ್ಯ. ಬಡತನದಲ್ಲಿಯೇ ಗ್ರಾಮೀಣ ಭಾಗದ ಶಾಲೆಗಳಲ್ಲಿ ತಮ್ಮ ಪ್ರಾರಂಭಿಕ ಶಾಲಾ ವಿದ್ಯಾಭ್ಯಾಸ ಮಾಡಿ ಎಂ.ಎ. ಪದವಿಗಳಿಸಿ ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಅಧ್ಯಾಪಕರಾಗಿ, ನಿರ್ದೇಶಕರಾಗಿ, ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ಡಾ. ಅಂಬೇಡ್ಕರ್ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದಲ್ಲಿ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದಲ್ಲಿ ಸೇವೆ ಸಲ್ಲಿಸಿದ ನಂತರ ಸಿದ್ಧಲಿಂಗಯ್ಯನವರು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾಗಿದ್ದರು. ನಡೆದ ಅಖಿಲ ಕರ್ನಾಟಕ ...

READ MORE

Related Books