ಡಾ. ಸಿದ್ಧಲಿಂಗಯ್ಯ ಸಮಗ್ರ ಸಾಹಿತ್ಯ ಸಂಪುಟ-6

Author : ಸಿದ್ಧಲಿಂಗಯ್ಯ

Pages 410

₹ 380.00




Year of Publication: 2018
Published by: ಕನ್ನಡ ಪುಸ್ತಕ ಪ್ರಾಧಿಕಾರ
Address: ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು
Phone: 08022107704

Synopsys

ಕನ್ನಡ ಪುಸ್ತಕ ಪ್ರಾಧಿಕಾರ ಪ್ರಕಟಿಸುತ್ತಿರುವ ಡಾ. ಸಿದ್ಧಲಿಂಗಯ್ಯ ಸಮಗ್ರ ಸಾಹಿತ್ಯ ಸಂಪುಟ ೬ರಲ್ಲಿ ಊರುಕೇರಿಯ ಮೂರನೇ ಭಾಗ ಹಾಗೂ ಸಂದರ್ಶನಗಳಿವೆ. 

ಕನ್ನಡದ ಆತ್ಮಕತೆ ಪ್ರಕಾರದಲ್ಲಿಯೇ ’ಊರುಕೇರಿ’ಗೆ ವಿಶಿಷ್ಟ ಸ್ಥಾನವಿದೆ. ದಲಿತ ಸಮುದಾಯಕ್ಕೆ ಸೇರಿದ ಕವಿಯೊಬ್ಬನ ಆತ್ಮಕತೆ ಎಂಬ ಚೌಕಟ್ಟಿಗೆ ಸಿಲುಕದೆ ವಿಶಿಷ್ಟ ನಿರೂಪಣೆಯೊಂದಿಗೆ ಗಮನ ಸೆಳೆಯುತ್ತದೆ ಕೃತಿ.

ವಿವಿಧ ಪತ್ರಿಕೆಗಳಿಗೆ ನೀಡಿದ ಸಂದರ್ಶನಗಳು ಅಲ್ಲದೆ ಅವರೇ ಸಂದರ್ಶಿಸಿದ ಕೆಲವು ವ್ಯಕ್ತಿಗಳನ್ನು ಸಂಪುಟದಲ್ಲಿ ಕಾಣಬಹುದು. 

About the Author

ಸಿದ್ಧಲಿಂಗಯ್ಯ
(03 February 1954)

ದಲಿತ ಕವಿ ಎಂದು ಗುರುತಿಸಲಾಗುವ ಡಾ. ಸಿದ್ಧಲಿಂಗಯ್ಯ ಅವರು ದಲಿತ-ಬಂಡಾಯ ಸಾಹಿತ್ಯ ಚಳುವಳಿಯ ಪ್ರಮುಖ ಕವಿ-ಹೋರಾಟಗಾರ. ಮಾಗಡಿಯಲ್ಲಿ 1954ರ ಫೆಬ್ರುವರಿ 3ರಂದು ಜನಿಸಿದರು. ತಾಯಿ ವೆಂಕಮ್ಮ- ತಂದೆ ದೇವಯ್ಯ. ಬಡತನದಲ್ಲಿಯೇ ಗ್ರಾಮೀಣ ಭಾಗದ ಶಾಲೆಗಳಲ್ಲಿ ತಮ್ಮ ಪ್ರಾರಂಭಿಕ ಶಾಲಾ ವಿದ್ಯಾಭ್ಯಾಸ ಮಾಡಿ ಎಂ.ಎ. ಪದವಿಗಳಿಸಿ ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಅಧ್ಯಾಪಕರಾಗಿ, ನಿರ್ದೇಶಕರಾಗಿ, ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ಡಾ. ಅಂಬೇಡ್ಕರ್ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದಲ್ಲಿ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದಲ್ಲಿ ಸೇವೆ ಸಲ್ಲಿಸಿದ ನಂತರ ಸಿದ್ಧಲಿಂಗಯ್ಯನವರು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾಗಿದ್ದರು. ನಡೆದ ಅಖಿಲ ಕರ್ನಾಟಕ ...

READ MORE

Related Books