ಡಾ. ವಾಸು ಬಿ. ಪುತ್ರನ್

Author : ವಿಶ್ವನಾಥ ಕಾರ್ನಾಡ್

Pages 56

₹ 45.00




Year of Publication: 2017
Published by: ಕನ್ನಡ ಸಂಘ, ಕಾಂತಾವರ
Address: ಕೆ.ಬಿ. ಜಿನರಾಜ ಹೆಗ್ಡೆ ಸ್ಮಾರಕ ಕನ್ನಡ ಭವನ, ಕಾಂತಾವರ, ಅಂಚೆ-ಕಾಂತಾವರ-574129, ಕಾರ್ಕಳ ತಾಲ್ಲೂಕು, ಉಡುಪಿ ಜಿಲ್ಲೆ
Phone: 8548933733

Synopsys

'ನಾಡಿಗೆ ನಮಸ್ಕಾರ ಸಾಹಿತ್ಯ ಸಂಸ್ಕೃತಿ ಚಿಂತನ ಗ್ರಂಥಮಾಲೆಯ 217 ನೇ ಪುಸ್ತಕ. ದಕ್ಷಿಣ ಕನ್ನಡ ಜಿಲ್ಲೆಯ ಇನ್ನ ಗ್ರಾಮದವರಾದ ವಾಸು ಬಿ. ಪುತ್ರನ್‌ ಅವರು ಮುಂಬೈಗೆ ತೆರಳಿ ಅಲ್ಲಿಯೇ ಇದ್ದು ಅನುವಾದ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ್ದಾರೆ. ಬಸವರಾಜ ಕಟ್ಟಿಮನಿ ಅವರ ’ಜೀವನ ಮತ್ತು ಕಲೆ’ ಕತೆಯ ಮೂಲಕ ಹಿಂದಿಗೆ ಅನುವಾದಿಸುವ ಕಾರ್ಯ ಆರಂಭಿಸಿದ ಅವರು ನಂತರ ಚಿತ್ತಾಲ, ಮಾಸ್ತಿ, ಆನಂದ, ಗೀತಾ ಕುಲಕರ್ಣಿ ಅವರ ಕತೆಗಳನ್ನು ಅನುವಾದಿಸಿದರು. ಎಸ್‌.ಎಲ್‌. ಭೈರಪ್ಪನವರ ’ಧರ್ಮಶ್ರೀ’ಯಿಂದ ’ಪರ್ವ’ದ ವರೆಗಿನ ಕಾದಂಬರಿಗಳನ್ನು ಅನುವಾದಿಸಿ ಪ್ರಕಟಿಸಿದ್ದಾರೆ. ವಾಸು ಬಿ. ಪುತ್ರನ್‌ ಅವರ ಬದುಕು-ಬರಹ ಕುರಿತು ವಿವರ ಒದಗಿಸುವ ಕೃತಿಯಿದು.

About the Author

ವಿಶ್ವನಾಥ ಕಾರ್ನಾಡ್

ತುಳುನಾಡಿನ ಮುಲ್ಕಿ ಸಮೀಪದ ಕಾರ್ನಾಡಿನಲ್ಲಿ ಹುಟ್ಟಿದ  ಡಾ. ಕೆ. ವಿಶ್ವನಾಥ ಕಾರ್ನಾಡರು (1940) ಓದಿಗೆ ಮತ್ತು ಉದ್ಯೋಗಕ್ಕಾಗಿ ಮುಂಬೈ ನಗರ ಸೇರಿದರು.  ಕನ್ನಡ, ಇಂಗ್ಲಿಷ್ ಮತ್ತು ಇತಿಹಾಸ ಮೂರು ವಿಷಯಗಳಲ್ಲಿ ಎಂ.ಎ. ಮಾಡಿ, ಎಲ್. ಎಲ್.ಬಿ, ಬಿ.ಎಡ್.ಪದವಿ ಹಾಗೂ ಪಿಹೆಚ್.ಡಿ. ಪದವಿ ಪಡೆದಿದ್ದಾರೆ. ಮುಂಬೈಯ ಮಹರ್ಷಿ ದಯಾನಂದ ಕಾಲೇಜಿನಲ್ಲಿ ಕನ್ನಡ ಮತ್ತು ಇಂಗ್ಲಿಷ್ ಪ್ರಾಧ್ಯಾಪಕರಾಗಿ ಮೂವತ್ತೈದು ವರ್ಷಗಳ ಕಾಲ ದುಡಿದು ನಿವೃತ್ತರಾಗಿದ್ದಾರೆ. ಮುಂಬಯಿ ವಿಶ್ವವಿದ್ಯಾನಿಲಯದಲ್ಲಿ ಪ್ರಾಧ್ಯಾಪಕ, ಎಂ.ಫಿಲ್ ಹಾಗೂ ಪಿಹೆಚ್.ಡಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಿದ್ದಾರೆ. 'ತುಳುವರ ಮುಂಬಯಿ ವಲಸೆ-ಸಾಂಸ್ಕೃತಿಕ ಅಧ್ಯಯನ' ಎಂಬ ಸಂಶೋಧನಾ ಕೃತಿಯೂ ಸೇರಿದಂತೆ ಒಂಬತ್ತು ಕಥಾ ...

READ MORE

Related Books