ಐನ್‌ಸ್ಟೀನ್ ಬಾಳಿದರಿಲ್ಲಿ

Author : ಜಿ.ಟಿ. ನಾರಾಯಣರಾವ್

Pages 368

₹ 70.00




Year of Publication: 2009
Address: ಶರಾವತಿ ಕಟ್ಟಡ, ಬಲ್ಮಠ ರೋಡ್, ಮಂಗಳೂರು. 575001
Phone: ಅತ್ರಿ ಬುಕ್ ಸೆಂಟರ

Synopsys

19ನೇ ಶತಮಾನದ ಉದ್ದಾಮ ವಿಜ್ಞಾನಿಗಳು ಕಂಡುಹಿಡಿದ ತಥ್ಯಗಳು ನ್ಯೂಟನ್ ನಿರ್ಮಿಸಿದ 'ವಿಶ್ವ'ವನ್ನು ಕದಲಿಸಿ ಭೌತಶಾಸ್ತ್ರಪ್ರಪಂಚವನ್ನು ಗೊಂದಲದಲ್ಲಿ ಕೆಡಹಿದ್ದಾಗ ಐನ್‌ಸ್ಟೈನರು ಹೊಸದೊಂದು ಕಾಣ್ಕೆಯ ಸೂತ್ರಕ್ಕೆ ವಿಶ್ವವನ್ನು ಒಳಪಡಿಸಿ 'ಅನರ್ಥಗಳಿಗೆ 'ಅರ್ಥ'ದಾನ ಮಾಡಿದರು. ಅವರ ವಿಶೇಷ ಸಾಪೇಕ್ಷತಾ ಸಿದ್ದಾಂತ ಮತ್ತು ಅನಂತರ ರೂಪಿಸಿದ ಸಾರ್ವತ್ರಿಕ ಸಾಪೇಕ್ಷತಾ ಸಿದ್ಧಾಂತವನ್ನು ಎಷ್ಟುಮಟ್ಟಿಗೆ ವಿಜ್ಞಾನವೆಂದು ಹೇಳಬಹುದೋ ಅಷ್ಟೇ ಮಟ್ಟಿಗೆ 'ದರ್ಶನ'ವೆಂದೂ ಕರೆಯಬಹುದು. ಪದಾರ್ಥ ಮತ್ತು ಶಕ್ತಿಯನ್ನು, ಕಾಲ ಮತ್ತು ದೇಶ ವನ್ನು ಒಂದೇ ಮಹಾ'ಋತ'ದ ಅಂಕೆಯಲ್ಲಿ ನೆಲೆಗೊಳಿಸಿದ ಅವರ ಕಾರ್ಯ ಕ್ವಾಂಟಮ್ ಭೌತಶಾಸ್ತ್ರದಿಂದ ಉದ್ಭವಿಸಿದ ಸಮಸ್ಯೆಗಳಿಗೆ ಪರಿಹಾರವೊದಗಿಸಿದ ಬಗೆಯನ್ನು ಲೇಖಕರು ಈ ಪುಸ್ತಕದಲ್ಲಿ ವಿಸ್ತ್ರತವಾಗಿ ವಿವರಿಸಿದ್ದಾರೆ.

About the Author

ಜಿ.ಟಿ. ನಾರಾಯಣರಾವ್
(30 January 1926)

ಜಿ.ಟಿ.ನಾರಾಯಣ ರಾವ್ ಅವರು ಪುತ್ತೂರಿನ ಸಮೀಪದ ಮರಿಕೆ ಗ್ರಾಮದಲ್ಲಿ 30-01-1926ರಂದು ಜನಿಸಿದರು. ಮದ್ರಾಸ್ ವಿಶ್ವವಿದ್ಯಾಲಯದಿಂದ ಗಣಿತದಲ್ಲಿ ಎಂ.ಎ. ಪದವಿ ಪಡೆದಿರುವ ಇವರು ಎನ್.ಸಿ.ಸಿ. ಅಧಿಕಾರಿಯಾಗಿಯೂ ಕರ್ತವ್ಯ ನಿರ್ವಹಿಸಿದ್ದಾರೆ. ಕರ್ನಾಟಕ ಸಂಗೀತ ಹಾಗೂ ಕನ್ನಡ ಅಭಿಜಾತ ವಾಙ್ಙಯ ಕುರಿತು ಅಪಾರ ಆಸಕ್ತಿ ಹೊಂದಿದ್ದಾರೆ, ಸರಕಾರಿ ಕಾಲೇಜುಗಳಲ್ಲಿ ಅಧ್ಯಾಪನ ಮತ್ತೆ ಮೈಸೂರು ವಿಶ್ವವಿದ್ಯಾಲಯದ ಕನ್ನಡ ವಿಶ್ವಕೋಶದ ವಿಜ್ಞಾನ ಸಂಪಾದಕರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. ನೊಬೆಲ್ ಪ್ರಶಸ್ತಿ ಪುರಸ್ಕೃತರಾದ ಸಿ.ವಿ. ರಾಮನ್‌ರನ್ನು ಬೆಂಗಳೂರಿನಲ್ಲಿಯೂ, ಎಸ್. ಚಂದ್ರಶೇಖರ್‌ರನ್ನು ಚಿಕಾಗೋದಲ್ಲಿಯೂ ಭೇಟಿಮಾಡಿ ವೈಜ್ಞಾನಿಕ ಜೀವನ ಚರಿತ್ರೆಗಳನ್ನು ಬರೆದಿದ್ದಾರೆ. ಕನ್ನಡಕ್ಕೆ ವಿಪುಲ ಸ್ವತಂತ್ರ ವೈಜ್ಞಾನಿಕ ಕೃತಿಗಳನ್ನೂ, ಕೆಲವು ...

READ MORE

Related Books