ಎಲ್ಲರಿಗೂ ಶಿಕ್ಷಣದ ಕನಸು

Author : ಮಹಾಬಲೇಶ್ವರ ರಾವ್

₹ 85.00




Published by: ಕ್ರಿಯಾ ಪುಸ್ತಕ

Synopsys

ಲೇಖಕ ಮಹಾಬಲೇಶ್ವರ ರಾವ್ ಅವರ ಸಂಪಾದಕತ್ವದಲ್ಲಿ ಮೂಡಿಬಂದ ಮಾಹಿತಿಪೂರ್ಣ ಕೃತಿ ‘ಎಲ್ಲರಿಗೂ ಶಿಕ್ಷಣದ ಕನಸು’. ಈ ಪ್ರಸ್ತುತ ಪುಸ್ತಕದಲ್ಲಿ ಮಕ್ಕಳ ಶಿಕ್ಷಣದ ಅವಶ್ಯಕತೆ ಹಾಗು ಅನಿರ್ವಾಯತೆ, ಶಿಕ್ಷಣದ ಸಾರ್ವತ್ರಿಕರಣದ ಅಗತ್ಯವನ್ನು ಇಲ್ಲಿ ವಿವರಿಸಿದ್ದಾರೆ.ಪ್ರೊ. ಅನಿಲ್ ಸದ್ಗೋಪಾಲ್, ಪ್ರೊ. ಅಮಿಯ ಕುಮಾರ್ ಬಾಗ್ಚಿ, ಡಾ. ಮಹಾಬಲೇಶ್ವರ ರಾವ್ ಬರಹಗಳ ಸಂಗ್ರಹ ಈ ಕೃತಿಯಲ್ಲಿದೆ.

About the Author

ಮಹಾಬಲೇಶ್ವರ ರಾವ್

ಮಹಾಬಲೇಶ್ವರ ರಾವ್ ಅವರು 1952ರಲ್ಲಿ ಉಡುಪಿ ಜಿಲ್ಲೆಯ ಮಣೂರಿನಲ್ಲಿ ಜನಿಸಿದರು. ಎಂ.ಎ., ಎಂ.ಎಡ್ ಮತ್ತು ಪಿಎಚ್.ಡಿ. ಪದವೀಧರರಾದ ಅವರು ಆರು ವರ್ಷ ಪ್ರೌಢಶಾಲಾ ಕನ್ನಡ ಶಿಕ್ಷಕರಾಗಿ, ಮೂರು ವರ್ಷ ಆಕಾಶವಾಣಿಯ ಭದ್ರಾವತಿ ಹಾಗೂ ಮಂಗಳೂರು ಕೇಂದ್ರಗಳಲ್ಲಿ ಪ್ರಸಾರಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ಮಹಾಬಲೇಶ್ವರ ರಾವ್‌ ಕಳೆದ ನಾಲ್ಕು ದಶಕಗಳಿಂದ ಕನ್ನಡ ಭಾಷಾ ಬೋಧನೆ, ಬರವಣಿಗೆ, ಭಾಷಣ, ಸಾಹಿತ್ಯ ಮೊದಲಾದ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಲೇಖಕರಾಗಿ, ಅನುವಾದಕರಾಗಿ, ಅಂಕಣಕಾರರಾಗಿ ತಮ್ಮದೇ ಛಾಪು ಮೂಡಿಸಿರುವ ಅವರು 14ವರ್ಷ ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸಿದ್ದಾರೆ.  ’ಉದಯವಾಣಿ’, ’ಪ್ರಜಾವಾಣಿ’, ’ತರಂಗ’, ’ಹೊಸತು’ ಮೊದಲಾದ ಕನಡ ದಿನಪತ್ರಿಕೆ, ಮ್ಯಾಗಸೈನ್‌ಗಳಲ್ಲಿ ಅವರ ನೂರಾರು ಲೇಖನಗಳನ್ನು ಪ್ರಕಟಣೆ ಕಂಡಿವೆ.  ...

READ MORE

Related Books