ಎನ್ನ ಭವದ ಕೇಡು

Author : ಎಸ್. ಸುರೇಂದ್ರನಾಥ್

Pages 236

₹ 75.00




Year of Publication: 2007
Published by: ಛಂದ ಪುಸ್ತಕ
Address: ಐ- 004, ಮಂತ್ರಿ ಪ್ಯಾರಡೈಸ್, ಬನ್ನೇರುಘಟ್ಟ ರಸ್ತೆ, ಬೆಂಗಳೂರು – 76
Phone: 9844422782

Synopsys

ನಾಟಕಕಾರರೂ, ಬರಹಗಾರರೂ ಆದ ಎಸ್. ಸುರೇಂದ್ರನಾಥ್ ಅವರ ಕಾದಂಬರಿ ’ಎನ್ನ ಭವದ ಕೇಡು’.

ಕಥೆ ಕಟ್ಟುತ್ತಾ ಸಾಗುವ ಲೇಖಕರು ಕತೆಯಲ್ಲಿನ ನಿರೂಪಕರಾಗದೇ ತಂತಾನೇ ಕಥೆ ಸಾಗುವ , ಓದುಗರಿಗೆ ಸಾಗಿಸಿಕೊಂಡು ಹೋಗುವ ನಿಲುವಿಗೆ ಎನ್ನ ಭವದ ಕೇಡು ಕಾದಂಬರಿ ಚಲಿಸುತ್ತದೆ.

ಓದುಗರ ಜೊತೆಯಲ್ಲೇ ನಿರಂತರವಾಗಿ ಸಾಗುವ ಕಾದಂಬರಿಯ ಪಾತ್ರ, ಊರಿನ ಚಿತ್ರಣ, ಜನ, ಅವರ ತಲ್ಲಣಗಳು, ಆತಂಕಗಳು, ಹೀಗೆ ಅನೇಕ ಸಂಗತಿಗಳು ಓದುಗರ ಅನುಭವದ ಭಾಗವಾಗುತ್ತದೆ. ಕಾದಂಬರಿ ಸಾಗುತ್ತಾ ಓದುಗರ ನಡುವಿನ ಚರಿತ್ರೆಯಾದಂತೆ ಮನದಲ್ಲಿ ಬೇರೂರಿ ನಿಲ್ಲುತ್ತದೆ.

ಎನ್ನ ಭವದ ಕೇಡು ಕಾದಂಬರಿಯ ಮುಖ್ಯ ಪಾತ್ರಧಾರಿ ಮಾಮಿಯ ಬದುಕಿನ ಅನಾವರಣ ಇಲ್ಲಿ ಪ್ರಮುಖ ಪಾತ್ರ ವಹಿಸಿದೆ.  ಪಾತ್ರದಲ್ಲಿನ ವ್ಯಕ್ತಿತ್ವ, ಮತ್ತು ಅವರ ಬದುಕಿನೊಳಗೆ ಮುಖಾಮುಖಿಗೊಳ್ಳುವ ಅನೇಕ ಸಹಜ ಬದುಕಿನ ಗೊಂದಲ, ವಿಸ್ಮಯ, ತಲ್ಲಣಗಳನ್ನು ಈ ಕಾದಂಬರಿ ತೆರೆದಿಡುತ್ತದೆ.

About the Author

ಎಸ್. ಸುರೇಂದ್ರನಾಥ್

ಸುರೇಂದ್ರನಾಥ್ ಅವರು ಹುಟ್ಟಿದ್ದು ಮೂಡಬಿದರೆಯ ಸಮೀಪದ ಒಂದು ಹಳ್ಳಿಯಲ್ಲಿ. ಓದಿದ್ದು ಬೆಳೆದಿದ್ದು ದಾವಣಗೆರೆಯಲ್ಲಿ. ಓದಿನ ಸಮಯದಲ್ಲೇ ಸಾಹಿತ್ಯ, ನಾಟಕದ ಗೀಳು ಹತ್ತಿಸಿಕೊಂಡ ಅವರು ದೆಹಲಿಯ ನ್ಯಾಷನಲ್ ಸ್ಕೂಲ್ ಆಫ್ ಡ್ರಾಮಾದಲ್ಲಿ ನಾಟಕದ ತರಬೇತಿ ಪಡೆದರು. ಹೊಟ್ಟೆಪಾಡಿಗಾಗಿ ಒಂದಿಷ್ಟು ವರ್ಷಗಳು ಹಲವಾರು ಪತ್ರಿಕೆಗಳಲ್ಲಿ, ಜಾಹೀರಾತು ಕಂಪೆನಿಗಳಲ್ಲಿ ದುಡಿದಿದ್ದಾರೆ. ಬೆಂಗಳೂರಿನ ಸಂಕೇತ್ ತಂಡದಲ್ಲಿ ಸೇರಿ ಹಲವು ನಾಟಕಗಳನ್ನು ನಿರ್ದೇಶಿಸಿದ್ದಾರೆ. ಆನಂತರ ಈಟಿವಿ ಸಂಸ್ಥೆಯನ್ನು ಸೇರಿದ ಅವರು ಹದಿಮೂರು ವರ್ಷಗಳ ಕಾಲ ಹೈದರಾಬಾದಿನಲ್ಲಿ ಕಾರ್ಯನಿರ್ವಹಿಸಿದ್ದಾರೆ. ವೃತ್ತಿ, ರಂಗಭೂಮಿ ಒಡನಾಟಗಳೊಂದಿಗೆ ಸಾಹಿತ್ಯ ಕ್ಷೇತ್ರದಲ್ಲೂ ಛಾಪು ಮೂಡಿಸಿರುವ ಸುರೇಂದ್ರನಾಥ್ ಎರಡು ಕಥಾಸಂಕಲನಗಳು - ಕಟ್ಟು ...

READ MORE

Related Books