ಎಷ್ಟು ಕಾಡತಾವ ಕಬ್ಬಕ್ಕೀ....

Author : ರಾಘವೇಂದ್ರ ಪಾಟೀಲ

Pages 152

₹ 130.00




Year of Publication: 2015
Published by: ಮನೋಹರ ಗ್ರಂಥ ಮಾಲಾ
Address: ಸುಭಾಶ್ ರಸ್ತೆ, ಧಾರವಾಡ.
Phone: +91 9845447002

Synopsys

ರಾಘವೇಂದ್ರ ಪಾಟೀಲರ ‘ಮತ್ತೊಬ್ಬ ಮಾಯಿ’ ಮತ್ತು ‘ಎಷ್ಟು ಕಾಡತಾವ ಕಬ್ಬಕ್ಕೀ…’ ಓದುವಾಗ ನಾವು ಬದುಕಿನೊಂದಿಗೇ, ಅದರ ನಿಷ್ಠುರ ಅನಿಯತಿಯೊಂದಿಗೇ ಹೊಕ್ಕಾಡುವ ಅನುಭವವಾಗುತ್ತದೆ. ಕಥೆಯನ್ನೂ ಅದೊಂದು ಬದುಕು ಎನ್ನುವಂತೆ ಬೆಳೆದುಕೊಳ್ಳುವುದು ಅಸಾಮಾನ್ಯ ಕತೆಗಾರನಿಗೆ ಮಾತ್ರ ಸಾಧ್ಯ. ಕಥೆಗಾಗಿ ಬದುಕು ಇರುವುದಿಲ್ಲ. ಲೇಖಕ ಎಂಬ ಹುಲುಮಾನವನು, ತಾನು ಕಂಡುಂಡು ಕಳವಳಿಸಿದ ಬದುಕನ್ನು ಅದರ ಎಲ್ಲ ವೈರುಧ್ಯ, ತೀವ್ರತೆ, ಅತಾರ್ಕಿಕತೆಯೊಂದಿಗೆ ಭಾಷೆಯ ಪಾದಯಾತ್ರೆಯಲ್ಲಿ ಹಿಡಿಯಲು ಸಾಧ್ಯವೇ ಎಂದು, ಪಾಟೀಲರ ಕಥೆಗಳು ಪರಮ ವಿನಯದಲ್ಲಿ ಪ್ರಯತ್ನ ಮಾಡುತ್ತವೆ. ಪಾಟೀಲರ ಹೊಸ ಸಂಗ್ರಹದಲ್ಲಿ ನಾವು ನೋಡುತ್ತಿರುವುದು ಅಂಥ ಕಥೆಗಳನ್ನು. ಬದುಕಿನ ನಿಬಿಡತೆಯನ್ನು ಯಾವ ಸಂವಿಧಾನದಲ್ಲಿ ಮಂಡಿಸಿದಾಗ ದರ್ಶನದ ಹೊಳಹೊಂದು ಫಳಕ್ಕನೆ ಮಿಂಚುವುದು ಎಂಬ ಸಂಗತಿಯು ಹಗಲೆಚ್ಚರಕ್ಕೆ ಏನು ಗೊತ್ತು? ಚಾರಣವೇ ತುದಿಗುರಿಯೆಂಬಂತೆ ಪಾಟೀಲ ತಮ್ಮ ಕಥೆಗಳನ್ನು ಬರೆಯುತ್ತಾರೆ. ಅದೇ ಅವರ ಅನನ್ಯತೆ.

About the Author

ರಾಘವೇಂದ್ರ ಪಾಟೀಲ
(16 April 1951)

ಕನ್ನಡದ ಸೃಜನಶೀಲ ಬರಹಗಾರ ರಾಘವೇಂದ್ರ ಪಾಟೀಲರು ಮೂಲತಃ ಬೆಳಗಾವಿ ಜಿಲ್ಲೆಯ ಗೋಕಾಕ ತಾಲ್ಲೂಕಿನವರು. ಪ್ರಾಣಿಶಾಸ್ತ್ರದಲ್ಲಿ ಸ್ನಾತಕೋತ್ತರ ಪದವೀಧರರು. ಅಧ್ಯಾಪಕ, ಪ್ರಾಂಶುಪಾಲರಾಗಿಯೂ ದುಡಿದವರು. ಬಾಲ್ಯದಿಂದಲೂ ಬರೆಹದ ತುಡಿತವಿದ್ದ ಅವರು ಕಥಾರಚನೆಯಿಂದ ಕಾದಂಬರಿ, ಪ್ರವಾಸಸಾಹಿತ್ಯ, ವಿಮರ್ಶೆ ಇನ್ನಿತರ ಪ್ರಕಾರಗಳತ್ತ ವಿಸ್ತಾರಗೊಂಡು ಹಲವು ಕೃತಿಗಳನ್ನು ರಚಿಸಿದ್ದಾರೆ.  ‘ಒಡಪುಗಳು, ಪ್ರತಿಮೆಗಳು, ಮಾಯಿಯ ಮುಖಗಳು, ದೇಸಗತಿ’ ಅವರ ಕತಾ ಸಂಕಲನಗಳಾದರೆ ‘ಬಾಳವ್ವನ ಕನಸುಗಳು, ತೇರು’ ಕಾದಂಬರಿಗಳು. ಜೊತೆಗೆ ಆನಂದಕಂದರ ಬದುಕು-ಬರಹ, ವಾಗ್ವಾದ ಅವರ ವಿಮರ್ಶಾಕೃತಿಗಳು. ಕಥೆಯ ಹುಚ್ಚಿನ ಕರಿಟೊಪಿಗಿಯರಾಯ, ತುದಿಯೆಂಬ ತುದಿಯಿಲ್ಲ ಪಾಟೀಲರ  ನಾಟಕಗಳು, ಇವರ ತೇರು ಕಾದಂಬರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸಂದಿದೆ.  ಮಲ್ಲಾಡಿಹಳ್ಳಿಯ ಅನಾಥ ಸೇವಾಶ್ರಮದ ...

READ MORE

Related Books