ಗಾಂಧಿ ಕ್ಲಾಸು

Author : ಕುಂ. ವೀರಭದ್ರಪ್ಪ

Pages 390

₹ 280.00




Year of Publication: 2015
Published by: ಸಪ್ನ ಬುಕ್ ಹೌಸ್
Address: 3ನೇ ಮುಖ್ಯ ರಸ್ತೆ, ಗಾಂಧಿನಗರ, ಬೆಂಗಳೂರು - 560 009
Phone: 080-40114455

Synopsys

ಖ್ಯಾತ ಕತೆಗಾರ-ಕಾದಂಬರಿಕಾರ ಕುಂ. ವೀರಭದ್ರಪ್ಪ ಅವರ ಆತ್ಮಕತೆ. ರೋಚಕವಾಗಿ-ರಂಜನೀಯವಾಗಿ ಕತೆ ಹೇಳುವ-ಕಟ್ಟುವ ಕುಂ.ವೀ. ಅವರ ಆತ್ಮಕತೆಯಲ್ಲಿಯೂ ಕತೆಯ ಸೊಗಡು-ಸೊಗಸು ಕೂಡಿಕೊಂಡಿವೆ. ಈ ಆತ್ಮಕತೆಯ ಬಗ್ಗೆ ಹಿರಿಯ ವಿಮರ್ಶಕ ಸಿ.ಎನ್. ರಾಮಚಂದ್ರನ್ ಅವರ ಟಿಪ್ಪಣಿ-

'ಗಾಂಧಿ ಕ್ಲಾಸ್' ಕೃತಿಯನ್ನು ಓದಿದ ನಂತರ ನನಗೆ ಬಂದ ಸಂದೇಹ ಇದು: ಕುಂವೀ ಮರೆತು ಆತ್ಮಕಥೆಯ ಬದಲಿಗೆ ತಾವು ಬರೆದಿರುವ ಹೊಸ ಕಾದಂಬರಿಯೊಂದನ್ನು ನನಗೆ ಕಳಿಸಿದ್ದಾರೆಯೆ? ಇಷ್ಟು ರೋಚಕ ನಿರೂಪಣೆ, ಇಷ್ಟು ರಂಜಕ ಹಾಗೂ ಅಸಾಧಾರಣ ಘಟನೆಗಳು ಕಾದಂಬರಿಯಲ್ಲಲ್ಲದೆ ಆತ್ಮಕಥೆಯಲ್ಲಿರಲು ಸಾಧ್ಯವೆ? ಉದಾಹರಣೆಗೆ: ಕೇವಲ ತನ್ನ ಸುಯೋಧನ-ಛಲದಿಂದಾಗಿ ಸಾಕಷ್ಟಿದ್ದ ಸ್ಥಿರ-ಚರಾಸ್ತಿಗಳನ್ನು ಕಳೆದುಕೊಂಡು ಒದ್ದಾಡುವ ಸ್ಥಿತಿಗೆ ಬಂದ 'ಹೀರೋ' ತಂದೆಯ ಮಗನಾಗಿ, ಅತಿ ಕಷ್ಟದಿಂದ ಎಸ್ ಎಸ್ ಎಲ್ಲಿ ಪಾಸಾಗಿ, ಕೆಲಸವಿಲ್ಲದೆ ಸೈನ್ ಬೋರ್ಡ್ ಪೇಂಟರ್ ಆಗುವ, ರೇಲ್ವೇ ದಿನಗೂಲಿಯಾಗುವ, ಪ್ಲಾಟ್ ಫಾರಂನಲ್ಲಿ ಮೂರು ದಿನ ಹಸಿವೆಯಿಂದ ಸಾಯುವ ಸ್ಥಿತಿ ತಲುಪುವ, ಕೊನೆಗೆ ಶತಮಾನದಷ್ಟು ಹಿಂದುಳಿದಿರುವ ಊರೊಂದರಲ್ಲಿ ಶಾಲಾ ಮಾಸ್ತರನಾಗುವ, ತಿಂಗಳಿಗೊಂದು ಕೊಲೆಯಾಗುವ ಆ ಕುಗ್ರಾಮದಲ್ಲಿ ಧೈರ್ಯದಿಂದ ದಲಿತರನ್ನು ಶಾಲೆಗೆ ಸೇರಿಸಿಕೊಂಡೂ ಬದುಕಿ ಉಳಿಯುವ, 'ಕಪ್ಪು' ಎಂಬ ತನ್ನ ಮೊದಲ ಕಾದಂಬರಿಯ ಕಾರಣದಿಂದ ಎಂದೋ ಕೊಲೆಯಾಗಬಹುದಾಗಿದ, ಸಿನೆಮಾ ಪ್ರಪಂಚದಲ್ಲಿ ಎಲ್ಲರಿಂದ ವಂಚಿಸಲ್ಪಡುವ, ಅಕಾಡೆಮಿ ಪ್ರಶಸ್ತಿ ಪಡೆದ 'ಅರಮನೆ' ಕಾದಂಬರಿಯ ಬ್ಲರ್ಬ್ ತೋರಿಸಿ ಅಮೇರಿಕಾಕ್ಕೆ ವೀಸಾ ಪಡೆಯುವ - ಇಂತಹ ವ್ಯಕ್ತಿ ಕಥಾನಾಯಕನಾಗಿರುವುದು; ಆ ವ್ಯಕ್ತಿಯೇ ಒಂದು ರಾತ್ರಿಯಲ್ಲಿ 15 ಹಾಡು ಬರೆಯುವ, ನೂರಾರು ಕಥೆ ಬರೆದು ಸವೆದ ತನ್ನ ನಡುಬೆರಳನ್ನು 'ಇದೊಂದು ರೂಪಕ' ಎಂದು ಅಭಿಮಾನದಿಂದ ತೋರಿಸುವ, ಪ್ರಕಾಶಕರಿಗೆ ಮಾತು ಕೊಟ್ಟಂತೆ ಮೂರು ವಾರಗಳಲ್ಲಿ 600 ಪುಟಗಳ 'ಶಾಮಣ್ಣ' ಎಂಬ ಕಾದಂಬರಿ ಬರೆಯುವ, 'ಅರಮನೆ' ಎಂಬ 1200 ಪುಟಗಳ ಕಾದಂಬರಿಯನ್ನು 500 ಪುಟಗಳಿಗೆ ತರಲು ಮತ್ತೆ ಮತ್ತೆ ಅದನ್ನು ಮುರಿದು ಕಟ್ಟಿ ಕೊನೆಗೆ ಅದಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆಯುವ, ಈ ಸಾಧನೆಗಳ ನಂತರವೂ ಅಬೋಧ ಬಾಲಕನ ಪ್ರೀತಿ-ವಿಸ್ಮಯತೆಗಳನ್ನು ಉಳಿಸಿಕೊಂಡಿರುವ ಸಾಹಿತಿಯೂ ಆಗಿರುವುದು; ಇವೆಲ್ಲವೂ ಒಂದು ರೋಚಕ ಕಾದಂಬರಿಯಲ್ಲಿ ಮಾತ್ರ ಸಾಧ್ಯ; ಅಥವಾ, ಸೋಮಶೇಖರ ಉರುಫ್ ವೀರಭದ್ರಪ್ಪ ಉರುಫ್ ಕುಂವೀ ಎಂಬ ಅದ್ಭುತ ಪ್ರತಿಭಾಶಾಲಿಯ ಅಸಾಧಾರಣ ಬದುಕಿನಲ್ಲಿ ಮಾತ್ರ ಸಾಧ್ಯ ಎಂದು ಆಶ್ಚರ್ಯ, ಅಭಿಮಾನ, ಅಸೂಯೆಗಳೊಡನೆ ಗ್ರಹಿಸುವಲ್ಲಿಗೆ-ಶಂಭೋ ಶಂಕರ ಮಹಾದೇವ.

About the Author

ಕುಂ. ವೀರಭದ್ರಪ್ಪ
(01 October 1953)

ಕುಂ.ವೀ. ಎಂದೇ ಜನಪ್ರಿಯರಾಗಿರುವ ಕಾದಂಬರಿಕಾರ, ಕತೆಗಾರ ಕುಂ. ವೀರಭದ್ರಪ್ಪ ಅವರು ಬಳ್ಳಾರಿ ಜಿಲ್ಲೆ ಕೂಡ್ಲಿಗಿ ತಾಲೂಕಿನ ಕೊಟ್ಟೂರಿನವರು. 1953ರ ಅಕ್ಟೋಬರ್ 1ರಂದು ಜನಿಸಿದರು. ‘ಬೇಲಿ ಮತ್ತು ಹೊಲ’ ಕಿರುಕಾದಂಬರಿಯ ಮೂಲಕ ಕನ್ನಡ ಸಾಹಿತ್ಯದ ಶಿಷ್ಟ ಪರಂಪರೆಯ ಬೇಲಿಗಳನ್ನು ಜಿಗಿದ ಕುಂ. ವೀರಭದ್ರಪ್ಪ, ಓದುಗರನ್ನು ಆಕರ್ಷಿಸಿದ್ದು ತಮ್ಮ ವಿಶಿಷ್ಟ ಭಾಷಾ ಪ್ರಯೋಗ ಮತ್ತು ನುಡಿಗಟ್ಟುಗಳಿಂದ. ಅವರ ಕತೆಗಳಲ್ಲಿ ಕಾದಂಬರಿಗಳಲ್ಲಿ ಕಾಣಿಸಿಕೊಂಡ ಭಾಷೆ ಅವರಿಗೆ ಸಾಹಿತ್ಯದಲ್ಲೊಂದು ಪ್ರತ್ಯೇಕ ಸ್ಥಾನ ಕಲ್ಪಿಸಿಕೊಟ್ಟಿತು. ’ಎಲುಗನೆಂಬ ಕೊರಚನೂ ಚವುಡನೆಂಬ ಹಂದಿಯೂ’, ’ಕತ್ತಲಿಗೆ ತ್ರಿಶೂಲ ಹಿಡಿದ ಕತೆ’ಗಳ ಮೂಲಕ ಸಣ್ಣ ಕತೆಯ ದಿಕ್ಕನ್ನು ಬದಲಾಯಿಸಿದರು. ಶಿವರಾಜ್ ...

READ MORE

Related Books