ಗಂಟಿಚೋರ್

Author : ಮಲ್ಲಿಕಾರ್ಜುನ ಬಿ. ಮಾನ್ಪಡೆ

Pages 240

₹ 120.00




Year of Publication: 2017
Published by: ಕನ್ನಡ ಪುಸ್ತಕ ಪ್ರಾಧಿಕಾರ
Address: ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002
Phone: 080-22107704

Synopsys

ಬ್ರಿಟಿಷ್ ಸರ್ಕಾರವು 1871ರಲ್ಲಿ ಜಾರಿಗೆ ತಂದ ಅಪರಾಧಿ ಬುಡಕಟ್ಟು ಕಾಯ್ದೆಯಿಂದಾಗಿ ಬಹಳಷ್ಟು ಅಲೆಮಾರಿ ಸಮುದಾಯಗಳು ಸಂಕಷ್ಟಕ್ಕೆ ತುತ್ತಾಗಿದ್ದು, ತಮ್ಮದಲ್ಲದ ತಪ್ಪಿಗೆ ಶಿಕ್ಷೆ ಅನುಭವಿಸುವಂತಾಗಿದ್ದು ಇತಿಹಾಸದ ವಿಪರ್ಯಾಸವೇ ಸರಿ. ಇಂತಹ ವಿಪರ್ಯಾಸಕ್ಕೆ ತುತ್ತಾದ ಹಲವು ಸಮುದಾಯಗಳಲ್ಲಿ ಗಂಟಿಚೋರ್ ಸಮುದಾಯವೂ ಕೂಡ ಒಂದು. 1952ರಲ್ಲಿ ಈ ಕಳಂಕಿತ ಕಾಯ್ದೆ ರದ್ದಾಯಿತಾದರು ಅದು ಉಳಿಸಿ ಹೋದ ಪಾರಂಪರಿಕ ಅಪರಾಧಿ ಕಳಂಕ ಮಾತ್ರ ಈ ಗಂಟಿಚೋರ್ ಸಮುದಾಯವನ್ನು ಇದುವರೆಗೆ ಬಾಧಿಸುತ್ತಲೇ ಬಂದಿದೆ. ಈ ಸಮುದಾಯವು ಇಂದಿಗೂ ಅವಮಾನದಿಂದಲೇ ಅತಂತ್ರ ಬದುಕು ನಡೆಸುತ್ತಿದೆ. ಈ ಸಮುದಾಯದ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಮತ್ತು ರಾಜಕೀಯ ಹೀನ ಸ್ಥಿತಿಯನ್ನು, ಪ್ರಸ್ತುತ ಪರಿಸ್ಥಿತಿ ಡಾ. ಮಲ್ಲಿಕಾರ್ಜುನ ಬಿ. ಮಾನ್ಪಡೆಯವರು ಅಂಕಿ ಅಂಶಗಳ ಅಧಿಕೃತ ಮಾಹಿತಿಗಳ ಸಮೇತ ಬಿಡಿಬಿಡಿಯಾಗಿ ಈ ಕೃತಿಯಲ್ಲಿ ಬಿಚ್ಚಿಟ್ಟಿದ್ದಾರೆ.

About the Author

ಮಲ್ಲಿಕಾರ್ಜುನ ಬಿ. ಮಾನ್ಪಡೆ

ಡಾ. ಮಲ್ಲಿಕಾರ್ಜುನ ಬಿ. ಮಾನ್ಪಡೆ ಅವರು ಮೂಲತಃ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಬೇವಿನಹಳ್ಳಿ(ಜೆ) ಗ್ರಾಮದವರು. ಕಲಬುರಗಿಯ ಗುಲಬರ್ಗಾ ವಿಶ್ವವಿದ್ಯಾಲಯಲ್ಲಿ ಸಮಾಜಶಾಸ್ತ್ರದಲ್ಲಿ ಎಂ.ಎ ಪದವಿ ಪೂರ್ಣಗೊಳಿಸಿದ ಅವರು ಹಂಪಿಯ ಕನ್ನಡ ವಿಶ್ವವಿದ್ಯಾಲಯದಲ್ಲಿ  ‘ವಿಮುಕ್ತ ಬುಡಕಟ್ಟುಗಳ ಸಾಮಾಜಿಕ ಅಧ್ಯಯನ ಮತ್ತು ಹೈದರಬಾದ ಕರ್ನಾಟಕದ ಅಲೆಮಾರಿಗಳ ಸಮಾಜೋ- ಆರ್ಥಿಕ ಸ್ಥಿತಿಗತಿಗಳ ಅಧ್ಯಯನ’ ಎಂಬ ವಿಷಯದಲ್ಲಿ ಸಂಶೋಧನೆ ನಡೆಸಿ ಪಿಎಚ್.ಡಿ ಮತ್ತು ಪಿಡಿಎಫ್ ಪದವಿ ಪಡೆದಿದ್ದಾರೆ.ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ಸಮಾಜಶಾಸ್ತ್ರ ಅಧ್ಯಯನ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿರುವ ಅವರು ಎನ್.ಎಸ್.ಎಸ್ ಸಂಯೋಜನಾಧಿಕಾರಿಗಳಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. ತಮ್ಮ ಓದು ಮತ್ತು ಸಂಶೋಧನೆಗಳ ಕೃಷಿಯನ್ನು ...

READ MORE

Related Books