ಗೀತಾರ್ಥ ಸ್ವಾಧ್ಯಾಯ ಮಾರ್ಗದರ್ಶಿನೀ

Author : ಕೆ.ಎಸ್‍. ನಾರಾಯಣಾಚಾರ್ಯ

Pages 248

₹ 293.00

Buy Now


Year of Publication: 2017
Published by: ಸಾಹಿತ್ಯ ಪ್ರಕಾಶನ,
Address: ಕೊಪ್ಪೀಕರ್ ಬೀದಿ, ಹುಬ್ಬಳ್ಳಿ- 580020
Phone: 08362367676

Synopsys

ಧಾರ್ಮಿಕ ಚಿಂತಕ ಪ್ರೊ. ಕೆ.ಎಸ್. ನಾರಾಯಣಾಚಾರ್ಯರು ಬರೆದ ಕೃತಿ ಗೀತಾರ್ಥ ಸ್ವಾಧ್ಯಾಯ ಮಾರ್ಗದರ್ಶಿನೀ. ಭಾರತೀಯ ಸನಾತನ ಸಂಸ್ಕೃತಿಯಲ್ಲಿ ಭಗವದ್ಗೀತೆಗೆ ವಿಶಿಷ್ಟ ಸ್ಥಾನವಿದೆ. ಗೀತೆಯ ಅಧ್ಯಯನ ಹಾಗೂ ಅದರ ಮನನ-ಚಿಂತನ-ಮಂಥನದಿಂದ ಆಗುವ ದರ್ಶನವೂ ಭಕ್ತ ಸಮೂಹದಲ್ಲಿ ಮನೋಪ್ರಫುಲ್ಲತೆಯನ್ನು ನೀಡುತ್ತದೆ. ಭಗವದ್ಗೀತೆ ಪಾರಾಯಣದಿಂದ ಇಂತಹ ಪವಾಡ ಸಾಧ್ಯ ಎಂಬ ನಂಬಿಕೆಯೂ ಜನ ಮಾನಸದಲ್ಲಿ ನೆಲೆಸಿದೆ. ಅದಕ್ಕೆ ಪೂರಕವಾಗಿ ಈ ಗ್ರಂಥವು ಉತ್ತಮ ಮಾರ್ಗದರ್ಶಿಯಾಗಿ ಓದುಗರ ನೆರವಿಗೆ ಬರುವಂತೆ, ಸರಳವಾಗಿ, ಸುಂದರವಾಗಿ ಬರೆಯಲಾಗಿದೆ.

About the Author

ಕೆ.ಎಸ್‍. ನಾರಾಯಣಾಚಾರ್ಯ
(31 October 1933 - 26 November 2021)

ಹಿರಿಯ ವಿದ್ವಾಂಸ ಹಾಗೂ ಪ್ರವಚನಕಾರರೂ ಆಗಿರುವ ಪ್ರೊ. ಕೆ.ಎಸ್. ನಾರಾಯಣಾಚಾರ್ಯರು ಮೂಲತಃ ಬೆಂಗಳೂರು ಜಿಲ್ಲೆಯ  (ಈಗಿನ ಕನಕಪುರ) ಕನಕನಹಳ್ಳಿಯವರು. ತಂದೆ ಕೆ.ಎನ್. ಶ್ರೀನಿವಾಸ ದೇಶಿಕಾಚಾರ್. ತಾಯಿ ರಂಗನಾಯಕಮ್ಮ. ವೈದಿಕ ವಿದ್ವಾಂಸರ ಕುಟುಂಬ ಇವರದು.ಮೈಸೂರಿನ ಮಹಾರಾಜ ಕಾಲೇಜಿನಿಂದ ಬಿ.ಎಸ್.ಸಿ. ಪದವೀಧರರು. ನಂತರ ಬಿ.ಎ. ಆನರ್ಸ್‌ ಮಾಡಿ, ಆಧುನಿಕ ಇಂಗ್ಲಿಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಡಬ್ಲ್ಯು.ಬಿ. ಯೇಟ್ಸ್ ಮತ್ತು ಟಿ.ಎಸ್. ಎಲಿಯೆಟ್‌ ಅವರ ಕಾವ್ಯದ ಮೇಲೆ ಭಾರತೀಯ ಸಂಸ್ಕೃತಿಯ ಕುರಿತು ಅಧ್ಯಯನ ನಡೆಸಿ ಪಿಎಚ್.ಡಿ. ಪಡೆದರು. ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ ಇಂಗ್ಲಿಷ್ ಅಧ್ಯಾಪಕರಾಗಿ, ಆ ಕಾಲೇಜಿನ ಪ್ರಾಂಶುಪಾಲರಾಗಿ ನಿವೃತ್ತರಾದರು. ಸದ್ಯ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ವೇದಗಳು, ರಾಮಾಯಣ, ...

READ MORE

Related Books