ಘಟನೆಗಳಲ್ಲಿ ಗಾಂಧೀಜಿ

Author : ಜಿ.ಎಸ್. ಜಯದೇವ

Pages 100

₹ 67.00




Year of Publication: 2023
Published by: ಎಂ.ಎಂ ಪಬ್ಲೀಕೇಷನ್‌
Address: 'ಬಸವಕಿರಣ' ಮಾಸ್ತಮ್ಮ ಲೇಔಟ್ ,ಚಿತ್ರದುರ್ಗ
Phone: 9449421858

Synopsys

"ಘಟನೆಗಳಲ್ಲಿ ಗಾಂಧೀಜಿ" ಜಯದೇವ ಜಿ.ಎಸ್‌ ಅವರ ಕೃತಿಯಾಗಿದೆ. ಸತ್ಯ ಅಹಿಂಸೆ ಈ ಭಾವಗಳು ಪರ್ವತಗಳಷ್ಟೇ ಪುರಾತನವಾದವು. ನನ್ನ ಶಕ್ತಿಗೆ ಸಾಧ್ಯವಾದಷ್ಟು ವಿಪುಲ ಪ್ರಮಾಣದಲ್ಲಿ ಅವೆರಡರಲ್ಲೂ ಪ್ರಯೋಗಗಳನ್ನು ನಡೆಸಿರುವುದಷ್ಟೇ ನನ್ನ ಕೆಲಸ. ಹಾಗೆ ಮಾಡುವಾಗ ಕೆಲವು ಸಲ ತಪ್ಪು ಮಾಡಿದ್ದೇನೆ! ಆ ತಪ್ಪುಗಳಿಂದ ಪಾಠ ಕಲಿತಿದ್ದೇನೆ. ಹೀಗೆ ಜೀವನ ಮತ್ತು ಅದರ ಸಮಸ್ಯೆಗಳು ಸತ್ಯ ಅಹಿಂಸೆಗಳು ಅನುಷ್ಠಾನಗಳಲ್ಲಿ ನಡೆಸಿರುವ ಅನೇಕ ಪ್ರಯೋಗಗಳಾಗಿವೆ. ಗಾಂಧೀ ಪಂಥವೆನ್ನುವುದು ದೋಷದ ಪ್ರತೀಕವಾಗಿರುವುದಾದರೆ ಅದು ನಾಶ ಹೊಂದಲಿ. ಸತ್ಯ ಅಹಿಂಸೆಗಳು ಅಜರಾಮರ. ಆದರೆ ಗಾಂಧೀಪಂಥ ಎಂಬುದು ಪಂಥಾಭಿಮಾನಕ್ಕೆ ಮತ್ತೊಂದು ಹೆಸರಾದರೆ ಅದು ವಿನಾಶ ಯೋಗ್ಯವೇ ನಿಜ. ತಾನು ಗಾಂಧೀಜಿಯ ಅನುಯಾಯಿ ಎಂದು ಯಾರೊಬ್ಬರೂ ಹೇಳದಿರಲಿ. ನಾನು ನನ್ನನ್ನು ಅನುಸರಿಸಿದರೆ ಸಾಕು. ಅದರಲ್ಲೂ ನಾನು ಎಂತಹ ಅಸಮರ್ಪಕ ಅನುಯಾಯಿ ಎಂಬುದನ್ನು ನಾನು ಬಲ್ಲೆ! ಯಾವ ತತ್ವಗಳಿಗಾಗಿ ನಾನು ನಿಂತಿದ್ದೇನೆಯೋ ಅವುಗಳಿಗೆ ತಕ್ಕಂತೆ ನಾನು ಬಾಳುತ್ತಿಲ್ಲ. ನೀವು ಅನುಯಾಯಿಗಳಲ್ಲ! ಸಹವಿದ್ಯಾರ್ಥಿಗಳು, ಸಹಯಾತ್ರಿಕರು, ಸಹಅನ್ವೇಷಕರು, ಸಹಉದ್ಯೋಗಿಗಳು. –  ಗಾಂಧಿ.

About the Author

ಜಿ.ಎಸ್. ಜಯದೇವ

ಚಾಮರಾಜನಗರದಲ್ಲಿ ನೆಲೆಸಿರುವ ಜಿ.ಎಸ್‌.ಜಯದೇವ ಅವರು 'ದೀನಬಂಧು' ಎಂಬ ಸಂಸ್ಥೆ ಪ್ರಾರಂಭಿಸಿದ್ದಾರೆ. 1992 ರಲ್ಲಿ ಆರಂಭವಾದ ಸಂಸ್ಥೆಯು ಸರ್ಕಾರಿ ಶಾಲೆಯ ಮಕ್ಕಳನ್ನು ದತ್ತು ಪಡೆದು, ಅವರಿಗೆ ವಸತಿ, ಊಟ, ಮತ್ತು ಬಟ್ಟೆಯನ್ನು ಪೂರೈಸುವ ಕಾರ್ಯ ಮಾಡುತ್ತಿದೆ. ಪ್ರಾಧ್ಯಾಪಕರಾಗಿದ್ದ ಅವರು ಸ್ವಯಂ ನಿವೃತ್ತಿ ಪಡೆದಿದ್ದಾರೆ. ಮೈಸೂರಿನಲ್ಲಿರುವ ಮಹಿಳಾ ಪುನರ್ವಸತಿ ಕೇಂದ್ರವಾದ 'ಶಕ್ತಿಧಾಮ'ದಲ್ಲಿ ಮತ್ತು ಬಿಳಿಗಿರಿರಂಗನ ಬೆಟ್ಟದಲ್ಲಿರುವ ವಿವೇಕಾನಂದ ಗಿರಿಜನ ಕಲ್ಯಾಣ ಕೇಂದ್ರದಲ್ಲಿಯೂ ಸೇವೆ ಸಲ್ಲಿಸಿದ್ದಾರೆ. ಜಯದೇವ ಅವರು ರಾಷ್ಟ್ರಕವಿ ಡಾ. ಜಿ.ಎಸ್.ಶಿವರುದ್ರಪ್ಪ ಅವರ ಮಗ. ಪ್ರಜಾವಾಣಿಯಲ್ಲಿ ’ಹಳ್ಳಿ ಹಾದಿ’ ಎಂಬ ಅಂಕಣ ಬರೆಯುತ್ತಿದ್ದರು. ಅದು ಪುಸ್ತಕ ರೂಪದಲ್ಲಿ ಪ್ರಕಟವಾಗಿದೆ. ...

READ MORE

Related Books