ಗಿಳಿ ಪಂಜರದೊಳಿಲ್ಲ

Author : ಭಾರತೀಸುತ (ಶಾನಭಾಗ ರಾಮಯ್ಯ ನಾರಾಯಣರಾವ್)

Pages 344

₹ 225.00




Year of Publication: 2017
Published by: ಗೀತಾಂಜಲಿ ಪಬ್ಲಿಕೇಶನ್ಸ್‌
Address: #60, 2ನೇ ಡಿ ಅಡ್ಡರಸ್ತೆ, 3 ನೇ ಬ್ಲಾಕ್, ನಾಗರಬಾವಿ 2ನೇ ಹಂತ ಬೆಂಗಳೂರು-560072

Synopsys

ಸಾಹಿತಿ ಭಾರತೀಸುತ (ಶಾನಭಾಗ ರಾಮಯ್ಯ ನಾರಾಯಣರಾವ್) ಅವರು ಬರೆದ ಕಾದಂಬರಿ. ಲೇಖಕರ ಶತಮಾನೋತ್ಸವದ ನನೆಪಿಗಾಗಿ ಈ ಕೃತಿಯನ್ನು ಪ್ರಕಟಿಸಿದ್ದು, ಗ್ರಾಮೀಣ ಪರಿಸರ ಹಿನ್ನೆಲೆಯ ಹಾಗೂ ಮಗನ ಸಾವಿನ ಹಿನ್ನೆಲೆಯಲ್ಲಿ ಗಿಳಿಯು ಪಂಜರದೊಳಿಲ್ಲ ಎಂಬ ಅನಾಥ ಪ್ರಜ್ಞೆಯ, ನಿರಾಶಾದಾಯಕ ವಿಷಯ ವಸ್ತುವಿನ ಕಾದಂಬರಿ ಇದು. ಲೇಖಕರ ವಿಶಿಷ್ಟ್ಯ ಶೈಲಿಯು ಓದುಗರ ಗಮನ ಸೆಳೆಯುತ್ತದೆ. ಕನ್ನಡ ಸಾಹಿತ್ಯ ವಲಯದ ಅತ್ತುತ್ತಮ ಕಾದಂಬರಿಗಳ ಪೈಕಿ ‘ಗಿಳಿ ಪಂಜರದೊಳಿಲ್ಲ’ ಎಂಬುದು ಒಂದು. 

About the Author

ಭಾರತೀಸುತ (ಶಾನಭಾಗ ರಾಮಯ್ಯ ನಾರಾಯಣರಾವ್)
(15 May 1915 - 04 April 1976)

ಕೊಡಗು ಜಿಲ್ಲೆಯ ಬಿಳಿಗೇರಿಯಲ್ಲಿ ಜನಿಸಿದ ಶಾನಭಾಗ ರಾಮಯ್ಯ ನಾರಾಯಣರಾವ್ ಅವರು 'ಭಾರತೀಸುತ' ಎಂಬ ಹೆಸರಿನಲ್ಲಿ ಸಾಹಿತ್ಯ ಕೃತಿಗಳನ್ನು ರಚಿಸಿದ್ದಾರೆ. ರಾಷ್ಟ್ರೀಯ ಚಳವಳಿಯಲ್ಲಿ ಭಾಗವಹಿಸಿ ಕೆಲಕಾಲ ಸೆರೆಮನೆ ವಾಸ ಅನುಭವಿಸಿದ್ದ ಅವರು ಬಿಡುಗಡೆಯ ನಂತರ ಕಾದಂಬರಿ- ಸಾಹಿತ್ಯ ರಚನೆ ಆರಂಭಿಸಿದರು. ಪತ್ರಿಕೋದ್ಯಮದಲ್ಲಿ ಆಸಕ್ತರಾಗಿದ್ದ ಅವರು ಕೆಲಕಾಲ 'ರಾಷ್ಟಬಂಧು' ಮತ್ತು 'ಗುರುವಾಣಿ' ಎಂಬ ಪತ್ರಿಕೆ ನಡೆಸಿದರು. ನಂತರ ಶಿಕ್ಷಕ ವೃತ್ತಿ ಆರಂಭಿಸಿದ ಅವರು ಕಥೆ-ಕಾದಂಬರಿಗಳ ರಚನೆಯಲ್ಲಿ ತೊಡಗಿಸಿಕೊಂಡರು. ಅವರು ರಚಿಸಿದ ’ಎಡಕಲ್ಲು ಗುಡ್ಡದ ಮೇಲೆ’, ’ಹುಲಿಯ ಹಾಲಿನ ಮೇವು’, ’ಗಿರಿಕನ್ನಿಕೆ’, ’ಬಯಲುದಾರಿ’ ಕಾದಂಬರಿಗಳು ಚಲಚಿತ್ರಗಳಾಗಿ ಯಶಸ್ವಿಯಾದವು.  ಸಂತಾನಭಿಕ್ಷೆ ಇಳಿದು ಬಾ ತಾಯಿ, ಬೆಂಕಿಯ ಮಳೆ, ವಕ್ರ ರೇಖೆ, ಸಾಧನ ಕುಟೀರ, ಹುಲಿಬೋನು, ಗಿಳಿಯು ಪಂಜರದೊಳಿಲ್ಲ, ...

READ MORE

Related Books