ಗೋಕುಲ ನಿರ್ಗಮನ

Author : ಪು.ತಿ.ನ. (ಪು.ತಿ. ನರಸಿಂಹಾಚಾರ್ )

Pages 75

₹ 1.00




Year of Publication: 1945
Published by: ಕಾವ್ಯಾಲಯ ಪ್ರಕಾಶನ
Address: ಮೈಸೂರು

Synopsys

ಹಿರಿಯ ಕವಿ ಪು.ತಿ. ನರಸಿಂಹಾಚಾರ್ ಅವರು ರಚಿಸಿದ ಗೀತ ರೂಪಕ-ಗೋಕುಲ ನಿರ್ಗಮನ. ಕೃಷ್ಣ, ಬಲರಾಮ, ಅಕ್ರೂರ, ಸುದಾಸ, ಸುಬಲ, ರಾಧೆ, ನಾಗವೇಣಿ, ಗೋಪಿಯರು, ಋಷಿಗಳು, ಕವಿ, ಗೊಲ್ಲರ ಹುಡುಗ-ಹೀಗೆ ಪಾತ್ರಗಳು ಗೀತ ರೂಪಕದ ಆಕರ್ಷಣೆಯನ್ನು ಹೆಚ್ಚಿಸಿವೆ., ಈ ಕೃತಿಯು ನೃತ್ಯ ಪ್ರಧಾನವಾದ ನಾಟಕ.

About the Author

ಪು.ತಿ.ನ. (ಪು.ತಿ. ನರಸಿಂಹಾಚಾರ್ )
(17 March 1905 - 13 October 1998)

ಪುತಿನ ಎಂದು ಚಿರಪರಿಚಿತರಾಗಿದ್ದ ಪುರೋಹಿತ ತಿರುನಾರಾಯಣ ನರಸಿಂಹಾಚಾರ್ ಅವರು ಕನ್ನಡ ನವೋದಯ ಕವಿಗಳಲ್ಲಿ ಪ್ರಮುಖರು. ಮೇಲುಕೋಟೆಯಲ್ಲಿ 1905ರ ಮಾರ್ಚ್ 17ರಂದು ಜನಿಸಿದರು. ತಂದೆ ತಿರುನಾರಾಯಣ ಅಯ್ಯಂಗಾರ್, ತಾಯಿ ಶಾಂತಮ್ಮ.  ಬಾಲ್ಯದ ವಿದ್ಯಾಭ್ಯಾಸವನ್ನು ಮೇಲುಕೋಟೆ ಮತ್ತು ಮೈಸೂರಿನಲ್ಲಿ ಮುಗಿಸಿದ ನಂತರ ಬಿ.ಎ. ಪದವಿಯನ್ನು ಗಳಿಸಿದ ಮೇಲೆ ಗೋರಕ್ಷಕ ಸಮಿತಿಯಲ್ಲಿ ಗುಮಾಸ್ತರಾಗಿ ಕಾರ್ಯನಿರ್ವಹಿಸಿದರು. ಅನಂತರ ಸೈನ್ಯದ ಮುಖ್ಯಾಧಿಕಾರಿಗಳ ಕಚೇರಿಯಲ್ಲಿ ಕೆಲಸಕ್ಕೆ ಸೇರಿದರು. ಅದೇ ಕಚೇರಿಯಲ್ಲಿ 1938ರಲ್ಲಿ ವ್ಯವಸ್ಥಾಪಕರಾಗಿಯೂ 1945ರಲ್ಲಿ ಅಧೀಕ್ಷಕರಾಗಿಯೂ ಕೆಲಸ ಮಾಡಿದ್ದ ಅವರು ಅನಂತರ 1952ರಲ್ಲಿ ಶಾಸನ ಸಭಾ ಕಚೇರಿಯ ಸಂಪಾದಕರೂ ಆಗಿದ್ದರು. ಕನ್ನಡ ವಿಶ್ವಕೋಶದ ಕಚೇರಿಯಲ್ಲಿ ಭಾಷಾಂತರಕಾರ ...

READ MORE

Related Books