ಗೋಪಾಲಕೃಷ್ಣ ಅಡಿಗ

Author : ಬಾಲಸುಬ್ರಹ್ಮಣ್ಯ ಕಂಜರ್ಪಣೆ

Pages 112

₹ 80.00




Year of Publication: 2012
Published by: ನವಕರ್ನಾಟಕ ಪ್ರಕಾಶನ
Address: 101, ಎಂಬೆಸಿ ಸೆಂಟರ್, ಕ್ರೆಸೆಂಟ್ ರಸ್ತೆ, ಕುಮಾರ ಪಾರ್ಕ್ ಪೂರ್ವ, ಬೆಂಗಳೂರು-560001
Phone: 7353530805 / 080 - 20161913

Synopsys

’ಮೋಹನ ಮುರಲಿ’, ’ಭೂಮಿಗೀತ’, ’ಧೂಮಲೀಲೆ’ ಮೂಲಕ ಪ್ರಸಿದ್ಧರಾದ ಗೋಪಾಲಕೃಷ್ಣ ಅಡಿಗರು ಕನ್ನಡ ನವ್ಯಕಾವ್ಯದ ಪ್ರವರ್ತಕರು.  ಆಧುನಿಕ ಕನ್ನಡ ವಿಮರ್ಶೆಯನ್ನು ಬೆಳೆಸುವಲ್ಲಿ ಅವರು ಸಲ್ಲಿಸಿರುವ ಸೇವೆ ಅವಿಸ್ಮರಣೀಯ. ಸೃಜನಶೀಲ ಲೇಖಕರಾಗಿ, ಅನುವಾದಕರಾಗಿ ಅವರು ಕನ್ನಡವನ್ನು ಬೆಳೆಸಿದ್ದಾರೆ, ಪೋಷಿಸಿದ್ದಾರೆ. ಒಂದು ಸಾಹಿತ್ಯ ಪಂಥದ ಅವಿಸ್ಮರಣೀಯ  ಭಾಗವಾಗಿದ್ದು ಹಾಗೂ ಆ ಪಂಥ ಬೆಳೆದು ನಿಲ್ಲುವಲ್ಲಿ ಮಹತ್ವದ ಪ್ರಭಾವ ಬೀರಿದ್ದು ಅಡಿಗರ ಪ್ರಮುಖ ಸಾಧನೆ. ಅವರ ’ವರ್ಧಮಾನ’ ಕವನ ಸಂಕಲನ 1974ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕಾರಕ್ಕೆ ಪಾತ್ರವಾಯಿತು. 

ಪ್ರಸ್ತುತ ಕೃತಿಯಲ್ಲಿ ಗೋಪಾಲಕೃಷ್ಣ ಅಡಿಗರ ಜೀವನ ಮತ್ತು ಸಾಧನೆಯನ್ನು ವಿವರಿಸಲಾಗಿದ್ದು, ಬಾಲಸುಬ್ರಹ್ಮಣ್ಯ ಕಂಜರ್ಪಣೆ ಕೃತಿ ರಚಿಸಿದ್ದಾರೆ. 

About the Author

ಬಾಲಸುಬ್ರಹ್ಮಣ್ಯ ಕಂಜರ್ಪಣೆ
(20 May 1954)

ಬಾಲಸುಬ್ರಹ್ಮಣ್ಯ ಕಂಜರ್ಪಣೆ- ಕಾವ್ಯನಾಮದಿಂದ ಸಾಹಿತ್ಯ ಲೋಕದಲ್ಲಿ ಗುರುತಿಸಿಕೊಂಡಿರುವ ಕೆ.ಪಿ.ಬಾಲಸುಬ್ರಮಣ್ಯ ಅವರು, ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಕಂಜರ್ಪಣೆ ಯಲ್ಲಿ (20-05-1954) ಜನಿಸಿದರು. ಕೃಷಿ ಹಿನ್ನೆಲೆಯ ಅವರು ಉತ್ತಮ ಬರಹಗಾರರು. ಪುತ್ತೂರಿನ ಸಂತ ಫಿಲೋಮಿನ ಕಾಲೇಜಿನಿಂದ ವಿಜ್ಞಾನದಲ್ಲಿ ಪದವಿ ಪಡೆದು, ಉಡುಪಿಯ ಲಾ ಕಾಲೇಜಿನಿಂದ ಕಾನೂನು ಪದವಿ ಹಾಗೂ ಮೈಸೂರು ವಿಶ್ವವಿದ್ಯಾಲಯದ ಅಂಚೆ ಮತ್ತು ತೆರಪಿನ ಶಿಕ್ಷಣ ಸಂಸ್ಥೆಯಿಂದ ಆಂಗ್ಲ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದುಕೊಂಡರು. ಮಡಿಕೇರಿಯ ಸರಕಾರಿ ಹಿರಿಯ ಕಾಲೇಜಿನಲ್ಲಿ ಆಂಗ್ಲ ಸಾಹಿತ್ಯದ ಉಪನ್ಯಾಸಕರಾಗಿಯೂ ಅನುಭವವಿದೆ. ಪ್ರಸ್ತುತ ಕೊಡಗಿನ ಮಡಿಕೇರಿಯಲ್ಲಿ ನ್ಯಾಯವಾದಿಯಾಗಿದ್ದಾರೆ. ಸ್ವಯಂಪ್ರಭೆ, ಒಡೆದ ಪ್ರತಿಮೆಗಳು (ಕವನ ಸಂಕಲನಗಳು), ಅದೃಷ್ಟದ ಹುಡುಗಿ (ಕಥಾ ...

READ MORE

Related Books