ಗ್ರಾಹಕ ಸಂರಕ್ಷಣಾ ಅಧಿನಿಯಮ, 2019 ಒಂದು ಪರಿಚಯ

Author : ವೈ.ಜಿ.ಮುರಳೀಧರನ್

₹ 60.00




Published by: ಅಮೂಲ್ಯ ಪುಸ್ತಕ
Address: ನಂ.64, `ಆಸರೆ\' 5ನೇ ಅಡ್ಡರಸ್ತೆ, 14ನೇ ಮುಖ್ಯರಸ್ತೆ, ಜ್ಯೋತಿನಗರ, ಚಂದ್ರಾಲೇಔಟ್, ಬೆಂಗಳೂರು - 560 072
Phone: 9448676770

Synopsys

"ಗ್ರಾಹಕ ಸಂರಕ್ಷಣಾ ಅಧಿನಿಯಮ" ಲೇಖಕ ವೈ.ಜಿ. ಮುರಳೀಧರನ್ ಅವರ ಲೇಖನಗಳ ಸಂಕಲನ. ಕಳೆದ ಒಂದೆರಡು ದಶಕದಿಂದೀಚೆಗೆ ಮಾರುಕಟ್ಟೆಯಲ್ಲಿ ಆಗಿರುವ ಬದಲಾವಣೆ ಹಾಗೂ ಮಾಹಿತಿ ತಂತ್ರಜ್ಞಾನದ ಹೊಸ ಆವಿಷ್ಕಾರಗಳು ಗ್ರಾಹಕರ ಮೇಲೆ ದಟ್ಟ ಪರಿಣಾಮ ಉಂಟುಮಾಡುತ್ತಿದೆ.  ಗ್ರಾಹಕರ ಮತ್ತು ಮಾರಾಟಗಾರರ ನಡುವಿನ ಸಂಬಂಧ ಮತ್ತಷ್ಟು ಕ್ಲಿಷ್ಟವಾಗಿದೆ. ಹೊಸ ತಂತ್ರಜ್ಞಾನದಿಂದ ಗ್ರಾಹಕರಿಗೆ ಸಾಕಷ್ಟು ಅನುಕೂಲಗಳಾಗಿದ್ದರೂ, ಅದರಿಂದ ಅಪಾಯಗಳೂ ಹೆಚ್ಚಾಗಿವೆ. ಈ ಹಿನ್ನೆಲೆಯಲ್ಲಿ ಗ್ರಾಹಕ ಸಂರಕ್ಷಣಾ ಅಧಿನಿಯಮವನ್ನು ಬದಲಿಸುವ ಅವಶ್ಯಕತೆಯನ್ನು ಗಮನಿಸಿ ಕೇಂದ್ರ ಸರ್ಕಾರವು 1986ರ ಅಧಿನಿಯಮವನ್ನು ಸಂಪೂರ್ಣವಾಗಿ ಪರಿಷ್ಕರಿಸಿ, ಅದರ ಬದಲಾಗಿ ಗ್ರಾಹಕ ಸಂರಕ್ಷಣಾ ಅಧಿನಿಯಮ 2019 ಜಾರಿಗೊಳಿಸಿದೆ.ಈ ಸಂಕಲನವು ಮುಖ್ಯವಾಗಿ ಅಧಿನಿಯಮದ ಮುಖ್ಯಾಂಶಗಳನ್ನುಪರಿಚಯಿಸುತ್ತದೆ.

About the Author

ವೈ.ಜಿ.ಮುರಳೀಧರನ್
(16 August 1956)

ವೈ.ಜಿ.ಮುರಳೀಧರನ್ ಅವರು [1956] ಬಿ ಕಾಂ ಪದವೀಧರರು ಮತ್ತು ಪತ್ರಿಕೋದ್ಯಮದಲ್ಲಿ ಪಿಜಿ ಡಿಪ್ಲೋಮ ಪಡೆದಿದ್ದಾರೆ. ಬಿ ಎಚ್ ಇ ಎಲ್ ಕಾರ್ಖಾನೆಯಲ್ಲಿ 20 ವರ್ಷ ಹಣಕಾಸು ವಿಭಾಗದಲ್ಲಿ ಕಾರ್ಯ ನಿರ್ವಹಿಸಿ ಸ್ವಯಂ ನಿವೃತ್ತಿ ಪಡೆದು ನಂತರ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದಲ್ಲಿ 12 ವರ್ಷ ಗ್ರಾಹಕ ವ್ಯವಹಾರಗಳ ಕಚೇರಿಯ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದ್ದಾರೆ. 1993ರಿಂದ ಗ್ರಾಹಕ ಹಕ್ಕುಗಳು, ಮಾಹಿತಿ ಹಕ್ಕು ಇತ್ಯಾದಿ ಸಾಮಾಜಿಕ ವಿಷಯಗಳಲ್ಲಿ ತೊಡಗಿಸಿಕೊಂಡಿದ್ದಾರೆ ಕೇಂದ್ರ ಸರಕಾರದ ವಿವಿಧ ಸಲಹಾ ಮಂಡಳಿಯ ಸದಸ್ಯರಾಗಿ ನಾಗರಿಕರನ್ನು ಪ್ರತಿನಿಧಿಸಿದ್ದಾರೆ. ರಾಜ್ಯ ಸರಕಾರದ ಆಡಳಿತ ತರಬೇತಿ ಸಂಸ್ಥೆ, ನ್ಯಾಷನಲ್ ಲಾ ಸ್ಕೂಲ್ ...

READ MORE

Related Books