ಗುಡಿಮಲ್ಲಮ್

Author : ಕೆ.ಎನ್. ಗಣೇಶಯ್ಯ

Pages 136

₹ 130.00




Year of Publication: 2021
Published by: ಅಂಕಿತ ಪುಸ್ತಕ
Address: 53, ಶ್ಯಾಮ್‍ಸಿಂಗ್ ಕಾಂಪ್ಲೆಕ್ಸ್, ಗಾಂಧಿಬಜಾರ್ ಮುಖ್ಯರಸ್ತೆ, ಬಸವನಗುಡಿ, ಬೆಂಗಳೂರು - 560 004
Phone: 080- 2661 7100

Synopsys

‘ಗುಡಿಮಲ್ಲಮ್’ ಖ್ಯಾತ ಕಥೆಗಾರ ಡಾ.ಕೆ.ಎನ್. ಗಣೇಶಯ್ಯ ಅವರ ಕಥಾ ಸಂಕಲನ. ತಿರುಪತಿಗೆ ಕೇವಲ 30 ಕಿ.ಮೀ. ದೂರದಲ್ಲಿರುವ ಅತ್ಯಂತ ಪುರಾತನವಾದ ದೇವಾಲಯದ ಲಿಂಗದ ಮೇಲೆ ಇರುವ ಕೆತ್ತನೆ ಒಬ್ಬ ಬೇಡನ ಪ್ರತಿರೂಪವೇ? ಹಾಗಿದ್ದಲ್ಲಿ ಆ ಲಿಂಗಕ್ಕೂ ಆ ಬೇಡನಿಗೂ ಯಾವ ಸಂಬಂಧ?. ಮೆಹರ್ಗಂಜ್ ಬಲ್ಗಾಡಿಯ ಅರಮನೆಯನ್ನು ರಾಜ ತನ್ನ ಪ್ರೇಯಸಿಗೆ ಕಟ್ಟಿಸಿದ್ದು ಎಂದು ಹೇಳಲಾಗುತ್ತದೆ ಆದರೆ ಆಕೆ ಏಕೆ ಅಲ್ಲಿ ನೆಲೆಸಲಿಲ್ಲ? ಪಶ್ಚಿಮ ಬಂಗಾಳದ ಮಾಲ್ಡದ ಬಳಿ ಆಳುತ್ತಿದ್ದ ರಾಜ ಗಣೇಶ್ ಗೆ ಮುಸ್ಲಿಮ್ ರಾಜಕುವರ ಇರಲು ಹೇಗೆ ಸಾಧ್ಯ, ಆತ ಕಟ್ಟಿಸಿದ್ದ ಎನ್ನಲಾದ ಮುಸೋಲಿಯಮ್ ನ ಮೂರು ಸಮಾಧಿಗಳಲ್ಲಿ ಒಂದು ಹಿಂದೂ ರಾಜನದ್ದೇ, ಆತ ಸಾಯುವ ಮುನ್ನವೇ ಏಕೆ ಅದನ್ನು ಕಟ್ಟಲಾಯಿತು? ಇತ್ತೀಚೆಗೆ ಎರಡನೇ ಮಹಾಯುದ್ಧದ ಪರಿಣಿತರ ಅಭಿಪ್ರಾಯವನ್ನು ಸಂಗ್ರಹಿಸಿ ಪ್ರಪಂಚದಾದ್ಯಂತ ನಡೆಸಿದ ಸಮೀಕ್ಷೆಯಲ್ಲಿ, ಆ ಇಡೀ ಮಹಾಯುದ್ಧದಲ್ಲಿಯೇ ಅತೀ ಭೀಕರ ಕಾಳಗ ನಡೆದದ್ದು ಭಾರತದ ಈಶಾನ್ಯದಲ್ಲಿ ಎಂದು ತೀರ್ಮಾನಿಸಲಾಯಿತು. ಹಾಗಾದರೆ ಆ ಕಾಳಗ ನಡೆದದ್ದಾದರೂ ಎಲ್ಲಿ, ಏಕೆ, ಯಾರ ನಡುವೆ ಇದರ ಪರಿಣಾಮಗಳ ಅರಿವು ನಮಗಿದೆಯೇ ಇಂತಹ ಕುತೂಹಲಕರ ಚಾರಿತ್ರಿಕ ವಿಷಯಗಳ ಸುತ್ತ ಡಾ. ಗಣೇಶಯ್ಯ ಹೆಣೆದ ಕತೆಗಳ ಸಂಗ್ರಹವೇ ಈ ಕೃತಿ. ಇಲ್ಲಿ ಗುಡಿಮಲ್ಲಮ್, ಸುಚಾರು ದೇವಿ, ಏಕ್ ಲಾಖಿ ಮುಸೋಲಿಯಮ್, ಯುದ್ಧಬಂಧ ಎಂಬ ನಾಲ್ಕು ಕಥೆಗಳು ಸಂಕಲನಗೊಂಡಿವೆ.

About the Author

ಕೆ.ಎನ್. ಗಣೇಶಯ್ಯ

ವೃತ್ತಿಯಿಂದ ಕೃಷಿ ವಿಜ್ಞಾನಿ ಆಗಿರುವ ಕೆ.ಎನ್. ಗಣೇಶಯ್ಯ ಅವರು ಮೂಲತಃ ಕೋಲಾರ ಜಿಲ್ಲೆಯವರು. ಕಳೆದ ೩೦ ವರ್ಷಗಳಿಂದ ತಳಿ ಅಭಿವೃದ್ಧಿಯಲ್ಲಿ ತೊಡಗಿಸಿಕೊಂಡಿರುವ ಅವರು  ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರು. ಪ್ರಾಣಿ ಮತ್ತು ಸಸ್ಯಗಳ ವರ್ತನೆಗೆ ಮೂಲಭೂತವಾದ ಜೀವವಿಕಾಸದ ತತ್ವಗಳನ್ನು ಅನ್ವೇಷಿಸುವುದು ಇವರ ಮತ್ತೊಂದು ಸಂಶೋಧನಾಸಕ್ತಿ. ಭಾರತದ ಪ್ರಮುಖ ಜೀವ ವೈವಿಧ್ಯ ತಾಣಗಳಲ್ಲಿನ ಸಸ್ಯಗಳ ಮತ್ತು ದೇಶದ ಜೀವ ಸಂಪತ್ತಿನ ಬಗ್ಗೆ ಇವರು ತಯಾರಿಸಿರುವ ಮಾಹಿತಿಯ ಖಜಾನೆಯ ಸಿ.ಡಿ.ಗಳು ಮತ್ತು ಅಂತರ್ಜಾಲ ಒಂದು ಅಪೂರ್ವ ಹೆಜ್ಜೆ. ಇನ್ನೂರಕ್ಕೂ ಹೆಚ್ಚು ವೈಜ್ಞಾನಿಕ ಪ್ರಬಂಧ ಬರೆದಿರುವ ಅವರು ಆರು ವೈಜ್ಞಾನಿಕ ಕೃತಿಗಳನ್ನು ...

READ MORE

Related Books