ಗುರುದೇವ (ಪುಸ್ತಕ-2)

Author : ಜಿ. ರಾಮನಾಥ್ ಭಟ್

Pages 156

₹ 110.00




Year of Publication: 2015
Published by: ನವಕರ್ನಾಟಕ ಪ್ರಕಾಶನ
Address: # 11, ಎಂಬೆಸಿ ಸೆಂಟರ್, ಕ್ರೆಸೆಂಟ್ ರಸ್ತೆ,  ಶಿಔಆನಂದ ವೃತ್ತ ಬಳಿ, ಕುಮಾರಪಾರ್ಕ್ ಪೂರ್ವ, ಬೆಂಗಳೂರು

Synopsys

ಲೇಖಕ ಜಿ. ರಾಮನಾಥ ಭಟ್ ಅವರು ರಚಿಸಿದ ಕೃತಿ-ಗುರುದೇವ, ಪುಸ್ತಕ -2. ರವೀಂದ್ರನಾಥ ಟ್ಯಾಗೋರ ಅವರ ಕುರಿತು ರವೀಂದ್ರ ಗದ್ಯಸಂಚಯ, ರವೀಂದ್ರ ಕಾವ್ಯಸಂಚಯ, ನವಯುಗದ ಚೈತನ್ಯ, ಗುರುದೇವ ಮತ್ತು ಮಹಾತ್ಮ, ಹೀಗೆ ರವೀಂದ್ರರ ಕುರಿತು ಸಾಹಿತ್ಯ ರಚಿಸಿರುವ ಲೇಖಕರು, ಗುರುದೇವ ಶೀರ್ಷಿಕೆಯಡಿ ಬರೆಯುತ್ತಿರುವ ಎರಡನೇ ಪುಸ್ತಕವಿದು. ಹದಿವಯಸ್ಸಿನಿಂದ ವೃದ್ಯಾಪ್ಯದವರೆಗಿನ ಪ್ರಮುಖ ಘಟನೆಗಳನ್ನು, ಮೈಲುಗಲ್ಲುಗಳೆಂದು ಪರಿಗಣಿಸಿ ದಾಖಲಿಸಿದ ಸಂಗತಿಗಳ ವಿವರಣೆಗಳನ್ನುಈ ಕೃತಿ ಒಳಗೊಂಡಿದೆ. ರವೀಂದ್ರನಾಥ ಠಾಕೂರರು ಯೌವನದಲ್ಲೇ ಕವಿಯಾಗಿ, ನಾಟಕಕಾರರಾಗಿ ಕಥೆಗಾರರಾಗಿ ತಮ್ಮ ಇರವನ್ನು ಸ್ಥಿರಪಡಿಸಿಕೊಂಡಿದ್ದರು. ರವೀಂದ್ರರ ವಿವಾಹ, ಮಕ್ಕಳು, ಕುಟುಂಬ ಜೀವನದೊಂದಿಗೆ ಅವರ ಸೃಜನಶೀಲತೆಯೂ ವಿಸ್ತಾರಗೊಂಡಿತು. ಕಾದಂಬರಿಗಳನ್ನು ರಚಿಸಿದರು, ನಾಟಕ ರಚಿಸಿ ಪ್ರದರ್ಶಿಸಿದರು. ಕವಿತೆಗಳು, ಪ್ರಬಂಧಗಳು ಪ್ರಕಟವಾದವು. ಶಾಂತಿನಿಕೇತನದ ಸ್ಥಾಪನೆ, ಸ್ವಾತಂತ್ರ್ಯ ಹೋರಾಟದಲ್ಲಿ ತೊಡಗಿಕೊಂಡೇ ತಮ್ಮ ಕಾವ್ಯ ಕೃಷಿಯನ್ನು ಮುಂದುವರಿಸಿದರು. ಹಿತಶತ್ರುಗಳ ಕಿರುಕುಳ, ಅಪಮಾನ ಸಹಿಸಿಕೊಂಡರು. ಪತ್ನಿ, ಮಕ್ಕಳ, ಬಂಧುವರ್ಗದವರ ಸಾವಿನ ನೋವು, ಜೊತೆಗೆ, ಬ್ರಿಟಿಷ್ ಸರಕಾರದ ವಕ್ರದೃಷ್ಟಿ. ಸ್ವಾತಂತ್ರ್ಯ ಹೋರಾಟಗಾರರೊಂದಿಗೆ ಸಂಪರ್ಕ, ಹಲವು ಬಾರಿ ವಿದೇಶ ಪ್ರವಾಸ, ಗೀತಾಂಜಲಿಗಾಗಿ ನೊಬೆಲ್ ಪಾರಿತೋಷಕ ಪುರಸ್ಕಾರ - ಹೀಗೆ ರವೀಂದ್ರರ ಬದುಕಿನ ಹಲವು ರೋಚಕ ವಿಷಯಗಳನ್ನು ಈ ಕೃತಿಯಲ್ಲಿ ಕಾಣಿಸಲಾಗಿದೆ.

 

About the Author

ಜಿ. ರಾಮನಾಥ್ ಭಟ್

ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರಾದ ಜಿ. ರಾಮನಾಥ ಭಟ್ ಅವರು ಮೈಸೂರು ನಿವಾಸಿಯಾಗಿದ್ದಾರೆ. ಮಂಗಳೂರಿನ ಕರ್ನಾಟಕ ಪಾಲಿಟೆಕ್ನಿಕ್‌ನಲ್ಲಿ ಸಿವಿಲ್ ಇಂಜಿನಿಯರಿಂಗ್‌ನಲ್ಲಿ ಡಿಪ್ಲೊಮ (1959) ಪಡೆದಿರುವ ಅವರು ಮೂರು ವರ್ಷ ಮಹಾರಾಷ್ಟ್ರದ ಕೊಯ್ನಾ ಜಲ ವಿದ್ಯುತ್ ಯೋಜನೆಯಲ್ಲಿ ಕಾರ್ಯ ನಿರ್ವಹಿಸಿದರು. 1962ರಿಂದ ಮೂವತ್ತೈದು ವರ್ಷ ಕರ್ನಾಟಕದ ಲೋಕೋಪಯೋಗಿ ಹಾಗೂ ನೀರಾವರಿ ಇಲಾಖೆಗಳಲ್ಲಿ ಸೇವೆ ಸಲ್ಲಿಸಿ 1997ರಲ್ಲಿ ಸ್ವಯಂ ನಿವೃತ್ತರಾದರು. 1986ರಿಂದ ಕೃಷ್ಣರಾಜಸಾಗರದಲ್ಲಿರುವ ಇಂಜಿನಿಯರಿಂಗ್ ಸಿಬ್ಬಂದಿ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರಾಗಿದ್ದಾರೆ. ಶಾಲಾ ದಿನಗಳಿಂದಲೂ ಸಾಹಿತ್ಯದಲ್ಲಿ ಆಸಕ್ತರಾಗಿದ್ದ ಅವರು ಅರುವತ್ತರ ದಶಕದಲ್ಲಿ ರವೀಂದ್ರನಾಥ ಠಾಕೂರರ ಸಾಹಿತ್ಯದತ್ತ ಆಕರ್ಷಿತರಾದರು. ಸರ್ಕಾರಿ ಕೆಲಸದಲ್ಲಿದ್ದರೂ ರವೀಂದ್ರನಾಥ ...

READ MORE

Related Books