ಗುರುವಿನೊಡನೆ ದೇವರಡಿಗೆ

Author : ಕುವೆಂಪು (ಕೆ.ವಿ. ಪುಟ್ಟಪ್ಪ)

Pages 444

₹ 110.00




Year of Publication: 2010
Published by: ಶ್ರೀರಾಮಕೃಷ್ಣ ಆಶ್ರಮ
Address: ಮೈಸೂರು

Synopsys

’ಗುರುವಿನೊಡನೆ ದೇವರಡಿಗೆ’ ಗ್ರಂಥವು ಎರಡು ಭಾಗಗಳಲ್ಲಿ ಪ್ರಕಟವಾಗಿತ್ತು. ಶ್ರೀರಾಮಕೃಷ್ಣರ ಪ್ರತ್ಯಕ್ಷ ಶಿಷ್ಯಶ್ರೇಷ್ಠರೂ ಶ್ರೀ ಕುವೆಂಪು ಅವರ ದೀಕ್ಷಾ ಗುರುಗಳೂ ಆದ ಶ್ರೀ ಸ್ವಾಮಿ ಶಿವಾನಂದರ ಮಾತು ಕತೆಗಳಿವೆ. ಕುವೆಂಪು ಅವರು ಈ ಕೃತಿಯನ್ನು ಅನುವಾದಿಸಿದ್ದರು. ಮೈಸೂರಿನ ರಾಮಕೃಷ್ಣಾಶ್ರಮವುಭಾಗ 1ನ್ನು 1960ರಲ್ಲಿ ಹಾಗೂ ಭಾಗ2 ನ್ನು 1964ರಲ್ಲಿ ಪ್ರಕಟಿಸಿತ್ತು.

About the Author

ಕುವೆಂಪು (ಕೆ.ವಿ. ಪುಟ್ಟಪ್ಪ)
(29 December 1904 - 11 November 1994)

ಕುವೆಂಪು ಎಂಬ ಕಾವ್ಯನಾಮದಿಂದ ಸಾಹಿತ್ಯ ರಚನೆ ಮಾಡಿದ ಕವಿ, ಪ್ರಖರ ವಿಚಾರವಾದಿ-ಚಿಂತಕ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ ಅವರು ಕನ್ನಡ ಸಾಹಿತ್ಯದ ಮೇರೆಗಳನ್ನು ವಿಸ್ತರಿಸಿದವರು. ತಂದೆ ವೆಂಕಟಪ್ಪಗೌಡ ತಾಯಿ ಸೀತಮ್ಮ. ತೀರ್ಥಹಳ್ಳಿ ತಾಲ್ಲೂಕಿನ ಕುಪ್ಪಳ್ಳಿಯವರಾದ ಪುಟ್ಟಪ್ಪ ಜನಿಸಿದ್ದು ಚಿಕ್ಕಮಗಳೂರು ಜಿಲ್ಲೆಯ ಹಿರೇಕೂಡಿಗೆಯಲ್ಲಿ 1904ರ ಡಿಸೆಂಬರ್ 29ರಂದು. ಮನೆಯಲ್ಲೇ ಖಾಸಗಿ ಮೇಷ್ಟರ ಮೂಲಕ ಪ್ರಾರಂಭಿಕ ವಿದ್ಯಾಭ್ಯಾಸದ ನಂತರ ತೀರ್ಥಹಳ್ಳಿಯಲ್ಲಿ ವಿದ್ಯಾಭ್ಯಾಸ ಮುಗಿಸಿ ಮೈಸೂರಿನಲ್ಲಿ ವೆಸ್ಲಿಯನ್ ಮಿಷನ್ ಹೈಸ್ಕೂಲ್, ಮಹಾರಾಜ ಕಾಲೇಜುಗಳಲ್ಲಿ ಓದಿ ಎಂ.ಎ. ಪದವಿ (1929) ಪಡೆದರು. ಮೈಸೂರು ಮಹಾರಾಜ ಕಾಲೇಜಿನಲ್ಲಿ ಅಧ್ಯಾಪಕ (1929) ಆಗಿ ಅನಂತರ ಕ್ರಮೇಣ ಉಪಪ್ರಾಧ್ಯಾಪಕ, ...

READ MORE

Related Books