ಹಡಪದ ಶರಣರ ವಚನಗಳಲ್ಲಿ ವೈಚಾರಿಕತೆ

Author : ಬಸವರಾಜ ಸಬರದ

Pages 56

₹ 40.00




Year of Publication: 2013
Published by: ಬಸವ ಧರ್ಮ ಪ್ರಸಾರ ಸಂಸ್ಥೆ
Address: ಹಿರೇಮಠ ಸಂಸ್ಥಾನ, ಭಾಲ್ಕಿ

Synopsys

‘ಹಡಪದ ಶರಣರ ವಚನಗಳಲ್ಲಿ ವೈಚಾರಿಕತೆ’ ಲೇಖಕ ಡಾ. ಬಸವರಾಜ ಸಬರದ ಅವರ ಉಪನ್ಯಾಸದ ಪಠ್ಯರೂಪ. ಗುಲಬರ್ಗಾ ವಿಶ್ವವಿದ್ಯಾಲಯದ ಹಡಪದಪ್ಪಣ್ಣ ಪೀಠದಿಂದ ಹಡಪದ ಶರಣ- ಶರಣೆಯರ ಕುರಿತು 04-04-2013 ರಂದು ರಾಜ್ಯಮಟ್ಟದ ವಿಚಾರ ಸಂಕಿರಣ ನಡೆಯಿತು. ಅದರಲ್ಲಿ ಒಂದು ಗೋಷ್ಠಿಯ ಅಧ್ಯಕ್ಷತೆಯನ್ನು ವಹಿಸಿ ನಾನು ಈ ವಿಷಯದ ಬಗ್ಗೆ ಮಾತಾಡಿದ್ದೆ. ಅದೇ ರೀತಿ 22-07-2013ರಂದು ಭಾಲ್ಕಿಯ ಹಿರೇಮಠ ಸಂಸ್ಥಾನವು ನಡೆಸಿದ ಹಡಪದಪ್ಪಣ ಲಿಂಗಮ್ಮನವರ ಜಯಂತಿ ಕಾರ್ಯಕ್ರಮದಲ್ಲಿ ನಾನು ಉಪನ್ಯಾಸ ನೀಡಲು ಪೂಜ್ಯ ಡಾ. ಬಸವಲಿಂಗ ಸ್ವಾಮೀಜಿಯವರು ಇದನ್ನೀಗ ಪುಸ್ತಕ ರೂಪದಲ್ಲಿ ಪ್ರಕಟಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ ಡಾ. ಬಸವರಾಜ ಸಬರದ.

About the Author

ಬಸವರಾಜ ಸಬರದ
(20 June 1954)

ಬಸವರಾಜ ಸಬರದ ಅವರು ಮೂಲತಃ ಕೊಪ್ಪಳ ಜಿಲ್ಲೆ ಯಲಬುರ್ಗ ತಾಲ್ಲೂಕಿನ ಕುಕನೂರಿನವರು. ಹುಟ್ಟಿದ್ದು 1954 ಜೂನ್‌ 20ರಂದು. ತಾಯಿ ಬಸಮ್ಮ, ತಂದೆ ಬಸಪ್ಪ ಸಬರದ. ಹುಟ್ಟೂರು ಕುಕನೂರಿನಲ್ಲಿಯೇ ಪ್ರಾಥಮಿಕ ಶಿಕ್ಷಣ ಪಡೆದ ಇವರು ಕರ್ನಾಟಕ ವಿಶ್ವವಿದ್ಯಾಲಯದಿಂದ ಕನ್ನಡ ಭಾಷೆಯಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿಎಚ್‌ಡಿ ಪದವಿ ಪಡೆದರು. ಉಪನ್ಯಾಸಕರಾಗಿ ವೃತ್ತಿ ಆರಂಭಿಸಿದ ಇವರು ಹಲವಾರು ಕಾಲೇಜುಗಳಲ್ಲಿ ಸೇವೆ ಸಲ್ಲಿಸಿದ್ದಾರೆ.  ಶೈಕ್ಷಣಿಕವಾಗಿ ಮಾತ್ರವಲ್ಲದೇ ದೇವದಾಸಿ ವಿಮೋಚನಾ ಹೋರಾಟ, ಅಂತರ್ಜಾತಿ ವಿವಾಹಗಳಿಗೆ ಪ್ರೋತ್ಸಾಹ, ಅಸ್ಪೃಶ್ಯತಾ ನಿವಾರಣೆ, ದಲಿತ-ಬಂಡಾಯ ಚಳವಳಿ ಮುಂತಾದ ಸಾಮಾಜಿಕ ಹೋರಾಟಗಳಲ್ಲಿಯೂ ತೊಡಗಿಸಿಕೊಂಡಿದ್ದಾರೆ.   ನನ್ನವರ ಹಾಡು, ಹೋರಾಟ, ...

READ MORE

Related Books