ಹಡೆದವರ ಹೃದಯ ಅಥವಾ ನೈತಿಕ ಬದುಕು

Author : ಸುಭಾಶ್ಚಂದ್ರ ಕಶೆಟ್ಟಿ ಬಾಚನಾಳ

Pages 92

₹ 100.00




Year of Publication: 2018
Published by: ಕಶೆಟ್ಟಿ ಪ್ರಕಾಶನ
Address: ಕಲಬುರಗಿ

Synopsys

ಲೇಖಕ ಸುಭಾಶ್ಚಂದ್ರ ಕಶೆಟ್ಟಿ, ಬಾಚನಾಳ ಅವರು ಬರೆದ ಸಾಮಾಜಿಕ ನಾಟಕ-ಹಡೆದವರ ಹೃದಯ ಅಥವಾ ನೈತಿಕ ಬದುಕು. ಕೌಟುಂಬಿಕ ಕಥಾವಸ್ತು ಚಿಕ್ಕದಾದರೂ ಚೊಕ್ಕವಾಗಿದೆ. ಎರಡು ಸುಸಂಸ್ಕೃತ ಮನೆತನದ ಮಧ್ಯೆ ಇರುವ ಕಥೆಯು ಆದರ್ಶಮಯ ಬದುಕಿನ ರೀತಿಗಳನ್ನು ಪ್ರತಿಪಾದಿಸುತ್ತವೆ. ಅಂತಿಮವಾಗಿ ಸುಖಾಂತ್ಯ ಕಾಣುವ ನಾಟಕವು ಸಾಮಾಜಿಕ ಹಾಗೂ ಸಾಂಪ್ರದಾಯಿಕ ಶಿಸ್ತು-ವರ್ತನೆಗಳನ್ನು ಮೀರುವುದಿಲ್ಲ ಎಂಬುದು ಇಲ್ಲಿಯ ಕಥೆಯ ಗಟ್ಟಿತನ.

About the Author

ಸುಭಾಶ್ಚಂದ್ರ ಕಶೆಟ್ಟಿ ಬಾಚನಾಳ
(04 July 1948)

ಲೇಖಕ ಸುಭಾಶ್ಚಂದ್ರ ಕಶೆಟ್ಟಿ ಬಾಚನಾಳ ಅವರು ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಬಾಚನಾಳ ಗ್ರಾಮದವರು. ಹುಟ್ಟೂರಿನಲ್ಲಿ ಪ್ರಾಥಮಿಕ ಶಿಕ್ಷಣ, ಕಮಲಾಪುರದಲ್ಲಿ ಪಿಯುಸಿ, ಕಲಬುರಗಿಯಲ್ಲಿ ಪದವಿ ಶಿಕ್ಷಣ ಪೂರೈಸಿದರು. ಸರ್ಕಾರದ ವಿವಿಧ ಇಲಾಖೆಯಲ್ಲಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ, ನಂತರ ಕಂದಾಯ ಇಲಾಖೆಯಲ್ಲಿ ಶಿರಸ್ತೇದಾರರಾಗಿ (2006) ನಿವೃತ್ತರಾದರು.  ಕಮಲಾಪುರ ಸುತ್ತಮುತ್ತಲಿನ ಸಾಧು-ಸಂತರ ಬಗ್ಗೆ, ಜಾನಪದ,ವಚನ ಸಾಹಿತ್ಯ,ನಾಟಕ, ಕವನ, ಜೀವನ ಚರಿತ್ರೆ,ಕುರಿತು 30ಕ್ಕಿಂತ ಹೆಚ್ಚು ಕೃತಿಯನ್ನು ರಚಿಸಿದ್ದಾರೆ. ಕೃತಿಗಳು: ಬದುಕಿನ ಪ್ರಜ್ಞೆ, ಕಾನನದ ಹೂಗಳು, ಸುಗಂಧ ಪುಷ್ಪಗಳು, ಸುಮಂಗಲ ಗೀತೆಗಳು (ಸಂ) ಜೇನುಹನಿ (ಕವನ ಸಂಕಲನ), ನಿತ್ಯಸತ್ಯ (ಚಿಂತನಗಳು), ಜನಮೆಚ್ಚಿದ ನಾಯಕ ಶ್ರೀ ಶಂಕರಶೆಟ್ಟಿ ಪಾಟೀಲರು ...

READ MORE

Related Books