ಹಣತೆ

Author : ಜಿ.ಎಸ್. ಶಿವರುದ್ರಪ್ಪ

Pages 624

₹ 300.00




Year of Publication: 2001
Published by: ಲೋಹಿಯಾ ಪ್ರಕಾಶನ
Address: ಕ್ಷಿತಿಜ, ಕಪ್ಪಗಲ್ಲು, ಗಾಂಧಿ ನಗರ ಬಳ್ಳಾರಿ-583103.

Synopsys

'ಹಣತೆʼ ಎಂಬುದು ಕವಿ ಡಾ. ಜಿ.ಎಸ್.‌ ಶಿವರುದ್ರಪ್ಪ ಅವರಿಗೆ ಸಲ್ಲಿಸಿದ ಅಭಿನಂದನಾ ಗ್ರಂಥ.  ಅವರು ಕನ್ನಡದ ಹಿರಿಯ ಕವಿಗಳೂ, ಕಾವ್ಯ ಮೀಮಾಂಸಕರೂ, ಪ್ರಾಧ್ಯಾಪಕರು ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಇಂದಿನ ಕನ್ನಡ ಸಾಂಸ್ಕೃತಿಕ ಲೋಕದ ಎಲ್ಲ ಸೂಕ್ಷ್ಮ ಹಾಗೂ ಸಮತೋಲನಗಳ ಪ್ರಾತಿನಿಧಿಕ ಶಕ್ತಿಯೂ ಹೌದು. ಅವರಿಗೆ 75 ವರ್ಷಗಳ ಸಂದ ಸಂದರ್ಭದ ಆಚರಣೆಯ ಪ್ರತೀಕವಾಗಿ ಈ ಹಣತೆ. ಕನ್ನಡ ಸಾಂಸ್ಕೃತಿಕ ಲೋಕದಲ್ಲಿ ಡಾ. ಜಿ.ಎಸ್.ಎಸ್. ಅವರು ನಿರ್ವಹಿಸುತ್ತಾ ಬಂದಿರುವ ಪಾತ್ರದ ಪ್ರತೀಕವೂ ಆಗಿದೆ ಈ ಕೃತಿ.

About the Author

ಜಿ.ಎಸ್. ಶಿವರುದ್ರಪ್ಪ
(07 February 1926 - 23 December 2013)

ಸಮನ್ವಯ ಕವಿಗಳಲ್ಲಿ ಒಬ್ಬರು ಎಂದು ಗುರುತಿಸಲಾಗುವ ಡಾ.ಜಿ.ಎಸ್. ಶಿವರುದ್ರಪ್ಪ ಅವರು ವಿಮರ್ಶಕರಾಗಿಯೂ ಗಣನೀಯ ಸಾಧನೆ ಮಾಡಿದ್ದಾರೆ. ಗದ್ಯ-ಪದ್ಯಗಳೆರಡರಲ್ಲಿಯೂ ಮಾಗಿದ ಪ್ರತಿಭೆ ಅವರದು. ತಂದೆ ಗುಗ್ಗುರಿ ಶಾಂತವೀರಪ್ಪ ಮತ್ತು ತಾಯಿ ವೀರಮ್ಮ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ 1926ರ ಫೆಬ್ರುವರಿ 7ರಂದು ಜನಿಸಿದರು. ಶಾಲಾ ಉಪಾಧ್ಯಾಯರ ಮಗನಾದ ಜಿ.ಎಸ್.ಎಸ್ ಅವರು ಎಸ್.ಎಸ್.ಎಲ್.ಸಿ ಮುಗಿಯುತ್ತಿದ್ದಂತೆಯೇ ಬಡತನದ ಕಾರಣದಿಂದ ಸರಕಾರಿ ನೌಕರಿ ಹಿಡಿಯಬೇಕಾಯಿತು. ಗುಬ್ಬಿ ತಾಲ್ಲೂಕು ಕಚೇರಿಯಲ್ಲಿ ಗುಮಾಸ್ತರಾಗಿ ಸೇರಿದರು. ಆದರೆ ಓದಲೇಬೇಕೆಂಬ ಅದಮ್ಯ ಆಸೆಯಿಂದ ಕೆಲಸಕ್ಕೆ ವಿದಾಯ ಹೇಳಿ ಮೈಸೂರು ಮಹಾರಾಜ ಕಾಲೇಜಿನಲ್ಲಿ ಓದನ್ನು ಮುಂದುವರೆಸಿ ಬಿ.ಎ. ಪದವಿ (1949), ಸ್ವರ್ಣಪದಕದೊಂದಿಗೆ ...

READ MORE

Related Books