ಹರಿಚಿತ್ತ ಸತ್ಯ

Author : ವಸುಧೇಂದ್ರ

Pages 192

₹ 126.00




Year of Publication: 2012
Published by: ಛಂದ ಪುಸ್ತಕ
Address: # ಐ-004, ಮಂತ್ರಿ ಪ್ಯಾರಾಡೈಸ್, ಬನ್ನೇರುಘಟ್ಟ ರಸ್ತೆ, ಬೆಂಗಳೂರು-560076
Phone: 9844422782

Synopsys

ಹರಿಚಿತ್ತ ಸತ್ಯ- ವಸುಧೇಂದ್ರ ಅವರ ಮೊದಲ ಕಾದಂಬರಿ. ಅತ್ಯಂತ ಸಂಯಮದಿಂದ ಕಾದಂಬರಿಯನ್ನು ಹೆಣೆದಿದ್ದು ಅವರ ಪ್ರೌಢಿಮೆಗೆ ಕನ್ನಡಿ ಹಿಡಿಯುತ್ತದೆ. ಸನ್ನಿವೇಶಗಳ ಜೋಡಣೆ, ಪಾತ್ರಗಳ ಸಂಭಾಷಣೆ, ನಿರೂಪಣೆ ಶೈಲಿ ಓದುಗರ ಗಮನ ಸೆಳೆಯುತ್ತದೆ. ಕಟ್ಟರ ಸಮಾಜ ಹಾಗೂ ಮುಕ್ತ ಸಮಾಜದ ಮಧ್ಯೆ ಇರುವ ವಿದ್ಯಮಾನಗಳು, ವೈಚಾರಿಕ ಪ್ರವಾಹ ಇಲ್ಲಿಯ ಪ್ರಮುಖ ವಸ್ತು. ಆದರೂ, ವಿಧಿಯ ಪಾತ್ರವನ್ನು ತಳ್ಳಿ ಹಾಕದೇ ಇದ್ದರಿಂದ ಅವರು ಹರಿಚಿತ್ತ ಸತ್ಯ ಎಂದೇ ಕಾದಂಬರಿಗೆ ಹಸರು ಇಟ್ಟಿದ್ದು ಸೂಕ್ತವೆನಿಸಿದೆ.

About the Author

ವಸುಧೇಂದ್ರ

ವಸುಧೇಂದ್ರ ಅವರು ಕನ್ನಡದ ಪ್ರಸಿದ್ಧ ಬರಹಗಾರರು ಹಾಗೂ ಪುಸ್ತಕ ಪ್ರಕಾಶಕರು. ಮುಖ್ಯವಾಗಿ ಕತೆ, ಕಾದಂಬರಿ, ಲಲಿತ ಪ್ರಬಂಧಗಳು ಇವರ ಬರವಣಿಗೆಯ ಪ್ರಕಾರಗಳು. ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ 1969ರಲ್ಲಿ ಜನಿಸಿದ ವಸುಧೇಂದ್ರ ಅಲ್ಲಿಯೇ ಪ್ರಾಥಮಿಕ ಶಿಕ್ಷಣವನ್ನು ಪೂರ್ಣಗೊಳಿಸಿದ್ದಾರೆ. ಆನಂತರ ಸುರತ್ಕಲ್ ನಿಂದ ಇಂಜಿನಿಯರಿಂಗ್ ಪದವಿ ಮತ್ತು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಯ್ ನಿಂದ ಎಂ.ಇ. ಪದವಿ ಪಡೆದಿದ್ದಾರೆ. ಸುಮಾರು 20 ವರ್ಷಗಳ ಕಾಲ ಸಾಫ್ಟ್ ವೇರ್ ಕ್ಷೇತ್ರದಲ್ಲಿ ಕೆಲಸ ಮಾಡಿರುವ ಅವರು ಸದ್ಯ ಬೆಂಗಳೂರಿನಲ್ಲಿ ವಾಸವಿದ್ದು, ಸದ್ಯಕ್ಕೆ ಸಾಹಿತ್ಯಿಕ ಕೆಲಸಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಮನೀಷೆ, ಯುಗಾದಿ, ಚೇಳು, ಹಂಪಿ ಎಕ್ಸ್ ...

READ MORE

Related Books