ಹರಿಗೋಲು

Author : ಎಚ್. ಎಸ್. ವೆಂಕಟೇಶಮೂರ್ತಿ

Pages 64

₹ 75.00




Year of Publication: 2019
Published by: ಅಭಿನವ ಪ್ರಕಾಶನ
Address: 17/18-2, 1ನೇ ಮುಖ್ಯರಸ್ತೆ, ಮಾರೇನಹಳ್ಳಿ, ವಿಜಯನಗರ, ಬೆಂಗಳೂರು-560040
Phone: 9448804905

Synopsys

‘ಹರಿಗೋಲು’ ಎಚ್.ಎಸ್. ವೆಂಕಟೇಶಮೂರ್ತಿ ಅವರ ಖಂಡ ಕಾವ್ಯ. ತೀಕ್ಷ್ಣವಾಗಿ ಮನಸ್ಸನ್ನು ಕಲಕುವಂಥ ಕಾವ್ಯ.  ಶ್ರೀನಿವಾಸನೆಂಬ ಮುಗ್ಧ ಹುಡುಗನ ಸುತ್ತ ಬಿಚ್ಚಿಕೊಳ್ಳುವ ಪ್ರಪಂಚ. ತನ್ನ ಕರಾಳಹಸ್ತಗಳಿಂದ ಬದುಕನ್ನು ಹಿಚುಕತೊಡಗುತ್ತದೆ. ಶ್ರೀನಿವಾಸನ ಮುಖಾಂತರ ಮೂಡುತ್ತಾ ಹೋಗುವ ವಿಸ್ಮಯ. ನಿಗೂಢ. ಭ್ರಾಮಕ ಚಿತ್ರಗಳು ಒಟ್ಟಿನಲ್ಲಿ ಇದೊಂಜು ದುರಂತಚಿತ್ರ. ಓದುಗರಿಗೆ ದಿಗ್ಭ್ರಮೆ ಹಿಡಿಸುತ್ತದೆ.

About the Author

ಎಚ್. ಎಸ್. ವೆಂಕಟೇಶಮೂರ್ತಿ
(23 June 1944)

ವೆಂಕಟೇಶ ಮೂರ್ತಿ ಅವರು ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ಹೊದಿಗೆರೆ ಎಂಬ ಸಣ್ಣ ಹಳ್ಳಿಯಲ್ಲಿ ಮಧ್ಯಮವರ್ಗದ ಕುಟುಂಬವೊಂದರಲ್ಲಿ 23-06-1944ರಲ್ಲಿ ಜನಿಸಿದರು. ಮೂವತ್ತು ವರ್ಷಗಳ ಕಾಲ ಗ್ರಾಮ್ಯಜೀವನ ನಡೆಸಿ ನಂತರ ಬೆಂಗಳೂರಿನ ಸೇಂಟ್ ಜೋಸೆಫ್ ವಾಣಿಜ್ಯ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕರಾಗಿ 1973ರಲ್ಲಿ ನೇಮಕಗೊಂಡರು. 2000 ರಲ್ಲಿ ನಿವೃತ್ತರಾದ ಅವರು ಈಗ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಪ್ರಾರಂಭದಲ್ಲಿ ಯಕ್ಷಗಾನ, ಬಯಲಾಟದಂಥ ರಂಗಪ್ರದರ್ಶನಗಳು ಇವರ ಮೇಲೆ ಗಾಢ ಪ್ರಭಾವ ಬೀರಿದವು. ಬಾಲ್ಯದಲ್ಲೇ ಕುಮಾರವ್ಯಾಸ, ಪುರಂದರ, ಲಕ್ಷ್ಮೀಶ ಮೊದಲಾದವರ ಕೃತಿಗಳ ನಿಕಟ ಸಂಪರ್ಕ ದೊರೆಯಿತು. ಮುಂದೆ ಕನ್ನಡ, ಸಂಸ್ಕೃತ, ಇಂಗ್ಲಿಷ್ ಸಾಹಿತ್ಯ ಪರಂಪರೆಯೊಂದಿಗೆ ನಡೆಸಲಾದ ...

READ MORE

Awards & Recognitions

Related Books