ಹತ್ತರಲ್ಲೊಂದು ಮುತ್ತು

Author : ಹೆಚ್.ಜಿ. ರಾಧಾದೇವಿ



Published by: ಶ್ರೀ ಲಕ್ಷ್ಮಿ ವೆಂಕಟೇಶ್ವರ ಪ್ರಕಾಶನ

Synopsys

ಲೇಖಕಿ ಹೆಚ್ ಜಿ ರಾಧಾದೇವಿ ಅವರ ಸಾಮಾಜಿಕ ಕಾದಂಬರಿ ‘ಹತ್ತರಲ್ಲೊಂದು ಮುತ್ತು’. ಹೊಗಳಿಕೆಯ ಹೊನ್ನಶೂಲಕ್ಕೆ ಮರುಳಾಗಿ ತನ್ನ ವ್ಯಕ್ತಿತ್ವವನ್ನೇ ಬಲಿಗೊಡುವ ಪಾತ್ರವೊಂದನ್ನು ಈ ಕಾದಂಬರಿಯಲ್ಲಿ ಚಿತ್ರಿಸಿದ್ದಾರೆ . ಹಾಗೆಯೇ ಎದುರಿನವರ ಒಳ್ಳೆಯತನವನ್ನು ದುರುಪಯೋಗ ಪಡಿಸಿಕೊಳ್ಳುವ ಮತ್ತೊಂದು ಪಾತ್ರವೂ ಇಲ್ಲಿದೆ . ಯಾರೂ ತಾವು ಶೋಷಿತರಾಗುವಷ್ಟು ಒಳ್ಳೆಯತನ ತೋರುವುದು ಬೇಡ , ಮತ್ತೊಬ್ಬರ ಸ್ವಾರ್ಥಕ್ಕೆ ಬಲಿಯಾಗದೆ , ಸ್ವಂತಿಕೆ ಉಳಿಸಿಕೊಳ್ಳಿ ಎನ್ನುವ ಸಂದೇಶ ಲೇಖಕಿ ಇಲ್ಲಿ ನೀಡುತ್ತಾರೆ .

About the Author

ಹೆಚ್.ಜಿ. ರಾಧಾದೇವಿ
(30 January 1952 - 09 November 2006)

ಕನ್ನಡ ಕಾದಂಬರಿಗಾರ್ತಿ ಹೆಚ್. ಜಿ.ರಾಧಾದೇವಿ ಅವರು ತಮ್ಮ ವೃತ್ತಿ ಜೀವನದಲ್ಲಿ 30ಕ್ಕೂ ಹೆಚ್ಚು ಕಾದಂಬರಿಗಳನ್ನು ರಚಿಸಿದ್ದಾರೆ. ಹುಟ್ಟಿದ್ದು ಕೋಲಾರ ಜಿಲ್ಲೆಯ ಶಿಡ್ಲಘಟ್ಟದಲ್ಲಿ. ತಂದೆ ಗೋಪಿನಾಥಾಚಾರ್‌. ಪ್ರಾಥಮಿಕ ಶಾಲಾ ಶಿಕ್ಷಕರು.ಕೋಲಾರದಲ್ಲಿ ಸರಕಾರಿ ಪ್ರೌಢಶಾಲೆಯಲ್ಲಿ ಎಸ್.ಎಸ್.ಎಲ್.ಸಿ.-ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದರು.  ಮುಂದಿನ ಓದಿಗೆ ತಡೆಯುಂಟಾಗಿ, ಮನೆ ಪಾಠ ಆರಂಭಿಸಿದರು.ಈ  ಅನುಭವವೇ ಶಾಲಾ ಶಿಕ್ಷಕಿಯಾಗುವ ಅವಕಾಶಕ್ಕೆ ದಾರಿಯಾಯಿತು. ದುಡಿಯುವ ಮಹಿಳಾ ವರ್ಗ ಕುರಿತ ಅನೆಕ ಸಮಸ್ಯೆಗಳನ್ನು ತಮ್ಮ ಕತೆ ಕಾದಂಬರಿಗಳ ಮೂಲಕ ಬೆಳಕು ಚೆಲ್ಲಿದ್ದು, ಈ ಬಗ್ಗೆ ಹಲವಾರು ಲೇಖನಗಳನ್ನು ಸಹ ಬರೆದಿದ್ದಾರೆ. ‘ಅನುರಾಗ ಅರಳಿತು, ಒಲವಿನ ಸುಧೆ ಒಲಿದು ಬಂದ ಅಪ್ಸರೆ, ಕತ್ತಲಲ್ಲಿ ಕಂಡ ಮಿಂಚು, ...

READ MORE

Related Books