ಹಿಮಾಲಯನ್ ಬ್ಲಂಡರ್

Author : ರವಿ ಬೆಳಗೆರೆ

Pages 216

₹ 150.00




Published by: ಭಾವನಾ ಪ್ರಕಾಶನ
Address: ನಂ. 2, 80 ಫೀಟ್ ರಸ್ತೆ, ಕದಿರೇನಹಳ್ಳಿ ಪೆಟ್ರೋಲ್ ಪಂಪ್ ಹತ್ತಿರ, ಬನಶಂಕರಿ 2ನೇ ಹಂತ ಬೆಂಗಳೂರು-560070
Phone: 080- 2679 0804

Synopsys

ಭಾರತೀಯ ಸೇನೆಯ ಇತಿಹಾಸದಲ್ಲಿ ಕರಾಳವಾಗಿ ನೆನೆಯಲ್ಪಡುವ ಘಟನೆಯೆಂದರೆ 1962ರಲ್ಲಿ ನಡೆದ ಇಂಡೋ-ಚೀನಾ ಯುದ್ಧ. ಭಾರತೀಯ ಸೇನೆಯಲ್ಲಿ ಬ್ರಿಗೇಡಿಯರ್ ಆಗಿ ಸೇವೆ ಸಲ್ಲಿಸುತ್ತಿದ್ದ ಬ್ರಿಗೇಡಿಯರ್ ಜಾನ್ ಪಿ ದಳವಿ ಅವರು ಇಂಗ್ಲೀಷ್‍ನಲ್ಲಿ ಬರೆದಂತಹ ‘ಹಿಮಾಲಯನ್ ಬ್ಲಂಡರ್’ ಕೃತಿಯ ಕನ್ನಡಾನುವಾದವನ್ನು ಲೇಖಕರು ಮತ್ತು ಪತ್ರಕರ್ತರಾದ ರವಿ ಬೆಳಗೆರೆಯವರು ಮಾಡಿದ್ದಾರೆ. ಯುದ್ಧದ ಕಾಲದಲ್ಲಿ ಭಾರತೀಯ ಸೈನಿಕರು ಪಟ್ಟ ಕಷ್ಟ ಕೋಟಲೆಗಳ ಕುರಿತು ಯಥಾವತ್ತಾಗಿ ವರ್ಣಿಸಿದ್ದಾರೆ ದಳವಿ ಅವರು. ಮೈ ಕೊರೆಯುವ ಚಳಿಯಲ್ಲಿ ಯೋಧರು, ಧರಿಸಲು ಸರಿಯಾದ ಉಡುಪುಗಳಿಲ್ಲದೆ, ಶೂಗಳಿಲ್ಲದೆ ಯಾವ ರೀತಿ ದೇಶಕ್ಕಾಗಿ ಪ್ರಾಣ ತ್ಯಜಿಸಿದರು ಎಂದು ಮನಕಲಕುವ ರೀತಿಯಲ್ಲಿ ದಳವಿ ಅವರು ವಿವರಿಸುತ್ತಾ ಹೋಗುತ್ತಾರೆ. ಯುದ್ಧದ ಸಮಯದಲ್ಲಿ ಭಾರತದಲ್ಲಿದ್ದ ರಾಜಕೀಯ ಪರಿಸ್ಥಿತಿ, ನೆಹರೂ ಅವರು ತೆಗೆದುಕೊಂಡಂತಹ ತಪ್ಪು ನಿರ್ಧಾರಗಳು, ಆ ನಿರ್ಧಾರಗಳಿಂದ ಭಾರತೀಯ ಸೇನೆ ಅನುಭವಿಸಿದಂತಹ ನಷ್ಟ ಹೀಗೆ ಯಾವ ರೀತಿ ರಾಜಕೀಯ ನಿರ್ಧಾರಗಳು ಸೇನೆಯನ್ನು ಭಾದಿಸುತ್ತವೆ ಎನ್ನುವುದರ ಅರಿವನ್ನು ಈ ಪುಸ್ತಕ ನೀಡುತ್ತದೆ. ಈ ಪುಸ್ತಕವು ಓದುಗರಲ್ಲಿ ಭಾರತೀಯ ಸೇನೆಯ ಕುರಿತಾದ ಹೆಮ್ಮೆಯ ಭಾವನೆಯನ್ನು ಹೆಚ್ಚಿಸುವುದರಲ್ಲಿ ಸಂಶಯವಿಲ್ಲ.

About the Author

ರವಿ ಬೆಳಗೆರೆ
(15 March 1958 - 13 November 2020)

ಕನ್ನಡದ ಪ್ರಮುಖ ಪತ್ರಕರ್ತರಲ್ಲಿ ಒಬ್ಬರಾದ ರವಿ ಬೆಳಗೆರೆ ಅವರು 15 ಮಾರ್ಚ್ 1958 ಬಳ್ಳಾರಿಯಲ್ಲಿ ಜನಿಸಿದರು. ಇತಿಹಾಸ ಮತ್ತು ಪ್ರಾಚ್ಯಶಾಸ್ತ್ರದಲ್ಲಿ ಎಂ.ಎ., ಮಾಡಿದ್ದ ಇವರು ಮೊದಲು ಪ್ರಧ್ಯಾಪಕರಾಗಿ ವೃತ್ತಿಜೀವನ ಆರಂಭಿಸಿದರು. ನಂತರ ಸಂಯುಕ್ತ ಕರ್ನಾಟಕ, ಕರ್ಮವೀರ ಪತ್ರಿಕೆಗಳಲ್ಲಿ ಪತ್ರಕರ್ತರಾಗಿ ಕಾರ್ಯ ನಿರ್ವಹಿಸಿದರು. ಲಂಕೇಶ್ ಪತ್ರಿಕೆಯಲ್ಲಿ ನಿಯಮಿತವಾಗಿ ಬರೆಯುತ್ತಿದ್ದ ಅವರು ಆಮೇಲೆ ತಾವೇ ಸ್ವತಃ ಹಾಯ್ ಬೆಂಗಳೂರು ಪತ್ರಿಕೆಯನ್ನು ಆರಂಭಿಸಿದರು. ಹಾಯ್ ಬೆಂಗಳೂರ್ ವಾರಪತ್ರಿಕೆಯು ಓದುಗರ ಮನಗೆದ್ದು ಕನ್ನಡ ಪತ್ರಿಕೋದ್ಯಮದಲ್ಲಿ ಹೊಸ ಸಂಚಲನ ಮೂಡಿಸಿತು. ಹಾಯ್ ಬೆಂಗಳೂರು ಪತ್ರಿಕೆಯ ಜೊತೆಗೆ ಓ ಮನಸೇ ಪಾಕ್ಷಿಕ ಪ್ರಾರಂಭಿಸಿದರು. ಶಿವರಾಮ ಕಾರಂತ ...

READ MORE

Related Books