ಹಿಂದೂ ಆದರ್ಶಗಳು

Author : ಟಿ.ಎಸ್. ವೆಂಕಣ್ಣಯ್ಯ

Pages 140

₹ 10.00




Year of Publication: 2010
Published by: ಕುವೆಂಪು ಭಾಷಾ ಭಾರತಿ ಪ್ರಾಧಿಕಾರ
Address: ಕಲಾಗ್ರಾಮ, ಬೆಂಗಳೂರು ವಿಶ್ವವಿದ್ಯಾನಿಲಯ ಹಿಂಬಾಗ, ಮಲ್ಲತ್ತಹಳ್ಳಿ, ಬೆಂಗಳೂರು - 560056
Phone: 080 - 23183311, 23183312

Synopsys

ಸನಾತನ ಧರ್ಮದ ಸಾರಾಂಶವು, ನಿಜವಾದ ಅರ್ಥದಲ್ಲಿ ಜಗದ್ಗುರುಗಳಾಗಿದ್ದ ಶ್ರೀ ಚಂದ್ರಶೇಖರ ಭಾರತೀ ಸ್ವಾಮಿಗಳವರ ಉಪದೇಶಗಳು ಹಲವೆಡೆ ಚದುರಿಹೋಗಿದ್ದು, ಅವುಗಳನ್ನು ಒಟ್ಟುಗೂಡಿಸಿ ಈ ಕೃತಿಯಲ್ಲಿ ಕೊಟ್ಟಿದ್ದಾರೆ. ಧರ್ಮ ಹೇಗೆ ಅನುಷ್ಠಾನಧರ್ಮವಾಗಿದೆ, ಇಚ್ಛಾನಿಗ್ರಹದಿಂದ ನಮ್ಮ ಸಂಕೀರ್ಣ ಸ್ವಭಾವವನ್ನು ಹೇಗೆ ಹತೋಟಿಯಲ್ಲಿಟ್ಟುಕೊಂಡು ಅದನ್ನು ಸದುಪಯೋಗಪಡಿಸಿಕೊಳ್ಳಬಹುದು. ಜೀವನದಲ್ಲಿ ನಮ್ಮ ಹೊಣೆಗಾರಿಕೆ ಎಂತಹುದು, ಕರ್ಮವಾದದ ಆವಶ್ಯಕತೆ, ಜ್ಞಾನಾರ್ಜನೆಯು ಪರಮತತ್ತ್ವವನ್ನು ಅರಿಯಲು ಹೇಗೆ ಸಹಾಯಮಾಡುತ್ತದೆ, ಈ ಮೊದಲಾದ ಮಾರ್ಗದರ್ಶಿ ಸೂತ್ರಗಳನ್ನು ಶ್ರೀಗಳವರು ಅನುಗ್ರಹಪೂರ್ವಕವಾದ ವಿವರಣೆಯನ್ನು ನೀಡಿದ್ದಾರೆ. ಈ ಕೃತಿಯನ್ನು ಟಿ.ಎಸ್.ವೆಂಕಣ್ಣಯ್ಯ ರು ಕನ್ನಡಕ್ಕೆ ಅನುವಾದ ಮಾಡಿದ್ದಾರೆ.

About the Author

ಟಿ.ಎಸ್. ವೆಂಕಣ್ಣಯ್ಯ
(01 October 1885 - 28 February 1939)

ಲೇಖಕ, ಅನುವಾದಕ ಟಿ.ಎಸ್. ವೆಂಕಣ್ಣಯ್ಯನವರು (ಜನನ:01-10-1885) ಹುಟ್ಟಿದ್ದು ಚಿತ್ರದುರ್ಗ ಜಿಲ್ಲೆಯ ಚಳ್ಳೇಕೆರೆ ತಾಲ್ಲೂಕಿನ ತಳಕು ಗ್ರಾಮದಲ್ಲಿ. ಮೈಸೂರಿನಲ್ಲಿ ಕನ್ನಡ, ತೆಲುಗು ಸಾಹಿತ್ಯಾಧ್ಯಯನ ಮಾಡಿ, ಮದರಾಸು ವಿಶ್ವವಿದ್ಯಾಲಯದಿಂದ 1914ರಲ್ಲಿ ಎಂ.ಎ. ಪದವಿ ಪಡೆದರು. ಉದ್ಯೋಗಕ್ಕಾಗಿ ಸೇರಿದ್ದು ಧಾರವಾಡದ ಬಾಸೆಲ್ ಮಿಷನ್ ಹೈಸ್ಕೂಲಿನಲ್ಲಿ ಉಪಾಧ್ಯಾಯರಾಗಿ. ಬೆಂಗಳೂರು ಸೇಂಟ್ ಜೋಸೆಫ್ ಕಾಲೇಜು, ದೊಡ್ಡಬಳ್ಳಾಪುರ ಮುಂತಾದೆಡೆ ಶಿಕ್ಷಕ ವೃತ್ತಿ. ಬಹುಭಾಷಾ ವಿಶಾರದರು ಅವರು ಕನ್ನಡ, ತೆಲುಗು, ತಮಿಳು, ಸಂಸ್ಕೃತ, ಬಂಗಾಳಿ ಭಾಷೆಗಳಲ್ಲಿ ಪ್ರಾವೀಣ್ಯತೆ ಪಡೆದಿದ್ದಾರೆ. ’ಶ್ರೀ ರಾಮಕೃಷ್ಣ ಲೀಲಾ ಪ್ರಸಂಗದ ಭಾಗ, ರವೀಂದ್ರರ ಪ್ರಬಂಧಗಳನ್ನಾಧರಿಸಿ ಬರೆದ ‘ಪ್ರಾಚೀನ ಸಾಹಿತ್ಯ’ ಅನುವಾದ ಕೃತಿಗಳು. ’ಹರಿಹರನ ...

READ MORE

Related Books