ಹಿಂದೂ ಸಾಮ್ರಾಜ್ಯಶಾಹಿಯ ಇತಿಹಾಸ

Author : ಕೆ.ಎಸ್. ಭಗವಾನ್

Pages 212

₹ 225.00




Year of Publication: 2015
Published by: ಮಹಿಮಾ ಪ್ರಕಾಶನ
Address: # ನಂ. 1393/2, ಸಿ.ಎಚ್‌–31, 6ನೇ ಕ್ರಾಸ್, ಕೃಷ್ಣಮೂರ್ತಿಪುರಂ, ಮೈಸೂರು– 570004

Synopsys

ಸ್ವಾಮಿ ಧರ್ಮತೀರ್ಥ ಅವರು ಬರೆದ ಕೃತಿ -ಹಿಂದೂ ಸಾಮ್ರಾಜ್ಯಶಾಹಿಯ ಇತಿಹಾಸ’ ವನ್ನು ಪ್ರೊ.ಕೆ.ಎಸ್. ಭಗವಾನ್ ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ. ಹಿಂದೂ ಧರ್ಮದ ಹೆಸರಿನಲ್ಲಿ ಭಾರತದಲ್ಲಿದ್ದ ಅಸಂಖ್ಯ ಕೆಳವರ್ಗದ-ಜಾತಿಯ ಜನಾಂಗೀಯ ಮೇಲೆ ನದೆಸಿದ ದೌರ್ಜನ್ಯಗಳ ವಿವರಗಳನ್ನು ಈ ಕೃತಿಯು ದಾಖಲಿಸಿದೆ. ಹಿಂದೂ ವಿರೋಧಿ ಆಲೋಚನಾ ಧಾಟಿಯ ಕೃತಿಯು ಎಡಪಂಥೀಯ ವಲಯದಲ್ಲಿ ಹೆಚ್ಚು ಪ್ರಭಾವ ಬೀರಿದ್ದು ಸಂಚಲನ ಮೂಡಿಸಿದೆ.

About the Author

ಕೆ.ಎಸ್. ಭಗವಾನ್
(14 July 1945)

ವಿಮರ್ಶಕ, ಅನುವಾದಕರಾದ ಕೆ.ಎಸ್.ಭಗವಾನ್ ಅವರು 14-07-1945ರಂದು ಮೈಸೂರು ಜಿಲ್ಲೆಯ ಕಲ್ಲಹಳ್ಳಿಯಲ್ಲಿ ಜನಿಸಿದರು. ಮೈಸೂರು ವಿಶ್ವವಿದ್ಯಾಲಯದಲ್ಲಿ ಇಂಗ್ಲಿಷ್ ವಿಷಯದಲ್ಲಿ ಎಂ.ಎ ಪದವಿ ಪಡೆದಿರುವ ಅವರು ಅಮೆರಿಕಾದ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಿಂದ ಡಿ.ಲಿಟ್.ಪದವಿಯನ್ನೂ ಪಡೆದಿದ್ದಾರೆ. ಬಂಡಾಯ ವಿಮರ್ಶೆಯ ಮೊದಲ ಮತ್ತು ಮುಖ್ಯ ವಿಮರ್ಶಕರಾದ ಭಗವಾನ್ ವಿಮರ್ಶೆಯಲ್ಲಿ ಅಂತರ್ ಶಿಸ್ತೀಯ ಅಧ್ಯಯನಗಳನ್ನು ಪ್ರಾರಂಭಿಸಿದವರು.  ಮೈಸೂರಿನ ಕುವೆಂಪು ನಗರದಲ್ಲಿ ವಾಸವಾಗಿರುವ ಅವರು, ಮೈಸೂರಿನ ಮಹಾರಾಜ ಕಾಲೇಜಿನ ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದ್ದಾರೆ. ಅನುವಾದಕರಾಗಿ ಹೆಸರುವಾಸಿಯಾಗಿರುವ ಭಗವಾನ್ ಷೇಕ್ಸ್ ಪಿಯರ್ ನ ಒಂಬತ್ತು ಮಹತ್ವದ ನಾಟಕಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಅವರ ಕೃತಿ ಶಂಕರಾಚಾರ್ಯ ಮತ್ತು ಪ್ರತಿಗಾಮಿತನ ...

READ MORE

Related Books