ಹಿಂದುತ್ವದ ಹಿಂದೆ-ಮುಂದೆ

Author : ಜಿ. ರಾಮಕೃಷ್ಣ

Pages 88

₹ 85.00




Year of Publication: 2023
Published by: ನವಕರ್ನಾಟಕ ಪ್ರಕಾಶನ
Address: 101, ಎಂಬೆಸಿ ಸೆಂಟರ್, ಕ್ರೆಸೆಂಟ್ ರಸ್ತೆ, ಕುಮಾರ ಪಾರ್ಕ್ ಈಸ್ಟ್, ಬೆಂಗಳೂರು - 560 001
Phone: 080 - 22161900 / 22161901 / 22161902

Synopsys

ಹಿಂದುತ್ವದ ಹಿಂದೆ-ಮುಂದೆ ಜಿ.ರಾಮಕೃಷ್ಣ ಅವರ ಕೃತಿಯಾಗಿದೆ. ಶಂಕರಾಚಾರ್ಯರಿಂದ ಹಿಡಿದು ಆಧುನಿಕ ಮಾರುಕಟ್ಟೆವರೆಗೆ ಖಚಿತವಾಗಿ ಬರೆಯಬಲ್ಲ ಜಿ.ರಾಮಕೃಷ್ಣ ನಮ್ಮ ನಡುವಣ ಬಹುದೊಡ್ಡ ಚಿಂತಕ ಎಂಬುದಕ್ಕೆ 'ಹಿಂದುತ್ವದ ಹಿಂದೆ-ಮುಂದೆ' ಹೆಸರಿನ ಪ್ರಸ್ತುತ ಪುಸ್ತಕವೇ ಸಾಕ್ಷಿ, ಈ ಪುಟ್ಟ ಪುಸ್ತಕದಲ್ಲಿ ಅವರು ವರ್ತಮಾನ ಕಾಲದ ಭಾರತದ ಗಂಭೀರ ಸಮಸ್ಯೆಗಳನ್ನು ಕರಾರುವಾಕ್ಕಾಗಿ ಹಿಡಿದಿಟ್ಟಿದ್ದಾರೆ. ಪುಸ್ತಕ ಚಿಕ್ಕದಾಗಿದ್ದರೂ ಇದು ಒಳಗೊಳ್ಳುವ ವಿಷಯಗಳು ಬೃಹತ್ತಾದುವು. ಜಗತ್ತು ವೇಗವಾಗಿ ಮುಂದಕ್ಕೆ ಚಲಿಸುತ್ತಿರುವಾಗ ತನ್ನದೇ ಪ್ರಜೆಗಳನ್ನು ಹಲವು ಶತಮಾನಗಳಷ್ಟು ಹಿಂದಕ್ಕೆ ಕೊಂಡೊಯ್ಯುವ ಬಿಜೆಪಿಯ ಕಾರ್ಯಸೂಚಿಗಳನ್ನು ಅವರು ಇಲ್ಲಿ ಗುರುತಿಸಿದ್ದಾರೆ. ನಾವ್ಯಾರೂ ಬದುಕಿರದ ಯಾವುದೋ ಒಂದು ಕಾಲಘಟ್ಟದ ಬಗ್ಗೆ ಅದಮ್ಯ ವ್ಯಾಮೋಹವನ್ನು ಪ್ರಕಟಪಡಿಸುವ 'ಹಿಂದುತ್ವ'ದ ರಾಜಕೀಯದ ಹುನ್ನಾರಗಳನ್ನು ಅವರು ದಿಟ್ಟವಾಗಿ ಬಯಲುಮಾಡಿದ್ದಾರೆ. ಬಿಜೆಪಿ ಮತ್ತು ಅದರ ಬೆನ್ನಿಗೆ ನಿಂತಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘವು ತಾವೇ ಕಲ್ಪಿಸಿಕೊಂಡ ಇತಿಹಾಸ ಮತ್ತು ಕಾಲಾತೀತ ಪುರಾಣಗಳ ಬಲೆಯಲ್ಲಿ ಸಿಲುಕಿಕೊಂಡಿರುವುದರಿಂದ ಅದಕ್ಕೆ ಸಮಕಾಲೀನ ಸಮಾಜದಲ್ಲಿರುವ ಜಾತೀಯತೆ, ದಲಿತರ ಸಮಸ್ಯೆ, ದಿನದಿಂದ ದಿನಕ್ಕೆ ಬೆಳೆಯುತ್ತಿರುವ ಸರ್ವಾಧಿಕಾರ, ಮಹಿಳಾ ಶೋಷಣೆ, ಧಾರ್ಮಿಕ ಡಂಭಾಚಾರ, ಹೆಚ್ಚುತ್ತಿರುವ ಮತಾಂಧತೆ, ಇತ್ಯಾದಿಗಳೆಲ್ಲ ತಿಳಿಯದೇ ಹೋಗುತ್ತಿವೆ ಎಂಬುದನ್ನು ಉದಾಹರಣೆಗಳ ಸಹಿತ ವಿವರಿಸಿದ್ದಾರೆ.

About the Author

ಜಿ. ರಾಮಕೃಷ್ಣ

ಜಿ. ರಾಮಕೃಷ್ಣ ಸಂಸ್ಕೃತದಲ್ಲಿ ಮೈಸೂರು ವಿಶ್ವವಿದ್ಯಾನಿಲಯದಿಂದ ಎಂ.ಎ. ಮತ್ತು ಪಿಎಚ್.ಡಿ. ಪದವಿಗಳನ್ನೂ, ಪುಣೆ ಹಾಗೂ ವೇಲ್ ವಿಶ್ವವಿದ್ಯಾನಿಲಯಗಳಿಂದ ಇಂಗ್ಲಿಷ್‌ನಲ್ಲಿ ಎಂ.ಎ. ಪದವಿಗಳನ್ನೂ ಪಡೆದಿದ್ದಾರೆ. ಮಹಾಡಿನ ಡಾ.ಅಂಬೇಡ್ಕರ್ ಕಾಲೇಜು ಮತ್ತು ಬೆಂಗಳೂರಿನ ಬಸವನಗುಡಿ ನ್ಯಾಷನಲ್ ಕಾಲೇಜುಗಳಲ್ಲಿ ಇಂಗ್ಲಿಷ್ ಅಧ್ಯಾಪಕರಾಗಿ ಸುಮಾರು ಮೂವತ್ತು ವರ್ಷ ಕೆಲಸ ಮಾಡಿದ್ದಾರೆ, ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಸಂದರ್ಶಕ ಪ್ರಾಧ್ಯಾಪಕರಾಗಿದ್ದುಕೊಂಡು “ಭಾರತೀಯ ವಿಜ್ಞಾನದ ಹಾದಿ” ಎಂಬ ಮೌಲಿಕ ಕೃತಿಯನ್ನು ರಚಿಸಿದ್ದಾರೆ. ಇವರ “ಮುನ್ನೋಟ' ಹಾಗೂ 'ಆಯತನ' ಗ್ರಂಥಗಳಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಬಹುಮಾನ ಲಭ್ಯವಾಗಿದೆ. ಮಾರ್ಕ್ಸ್‌ವಾದಿ ಅಧ್ಯಯನಗಳಲ್ಲಿ ವಿಶೇಷ ಆಸಕ್ತಿ ಹೊಂದಿದ್ದಾರೆ. ಭಗತ್‌ಸಿಂಗ್, ಚೆ ಗೆವಾರಾ, ...

READ MORE

Related Books