
ಲೇಖಕಿ, ಕವಯಿತ್ರಿ ಜ್ಯೋತಿ ಗುರುಪ್ರಸಾದ್ ಅವರು 'ಸಂವಾದ' ಮಾಸ ಪತ್ರಿಕೆಯಲ್ಲಿ ಸುಮಾರು ಒಂದು ವರ್ಷಗಳ ಕಾಲ ಬರೆದ ಅಂಕಣಗಳು ಮತ್ತು ವಾರ್ತಾಭಾರತಿ ಪತ್ರಿಕೆಯಲ್ಲಿ ಬರೆದ ಅಂಕಣಗಳ ಸಂಗ್ರಹವೇ ‘ಹೊಸ ಪಕ್ಷಿ ರಾಗ'. ಧರ್ಮ, ಅರ್ಥ, ಕಾಮ, ರಾಜಕಾರಣ, ಶಿಕ್ಷಣ, ಸಮಾಜ, ಸಿನೆಮಾ ಮೊದಲಾದ ವೈವಿಧ್ಯ ವಿಷಯಗಳನ್ನು ಸಣ್ಣ ಚೌಕಟ್ಟಿನೊಳಗೆ ಹಂಚಿಕೊಳ್ಳುವ ಪ್ರಯತ್ನವನ್ನು ಲೇಖಕಿ ಇಲ್ಲಿ ಮಾಡಿದ್ದಾರೆ. ರಾಜಕೀಯದ ಕುರಿತಂತೆಯೂ ಯಾವ ಮಡಿಯನ್ನಿಟ್ಟುಕೊಳ್ಳದೆ ಲೇಖಕಿ ಇಲ್ಲಿ ಚರ್ಚಿಸುತ್ತಾರೆ. ಇಲ್ಲಿನ ಲೇಖನಗಳು ವರ್ತಮಾನದ ರಾಜಕೀಯದ ಜೊತೆಗೆ, ಹೇಗೆ ಹೆಣ್ಣು ರಾಜಕೀಯದಲ್ಲಿ ಸುಲಭದ ಬಲಿಪಶುವಾಗುತ್ತಾಳೆ ಎನ್ನುವುದನ್ನು ಹೇಳುತ್ತದೆ. ಅಕಾಲದಲ್ಲಿ ಬಲಿಯಾದ ತನ್ನ ಮಗು ಪೂರ್ಣನ ಕುರಿತಂತೆಯೂ ಹೃದಯಸ್ಪರ್ಶಿ ಬರಹವೊಂದು ಇಲ್ಲಿದೆ. ತನ್ನ ಮಗುವಿನ ಮೂಲಕ, ಜಗತ್ತನ್ನು ಮುಟ್ಟುವ ಪ್ರಯತ್ನವನ್ನು ಲೇಖಕಿ ಮಾಡುತ್ತಾರೆ. ನಾವು ಕಾಣದ್ದನ್ನು ಮಗು ಹೇಗೆ ಕಾಣ ಬಲ್ಲುದು ಎನ್ನುವುದನ್ನು ಈ ಲೇಖನ ಹೇಳುತ್ತದೆ.
©2025 Book Brahma Private Limited.