ಹೊಸಗನ್ನಡ ಪ್ರಬಂಧ ಸಂಕಲನ

Author : ಗೊರೂರು ರಾಮಸ್ವಾಮಿ ಅಯ್ಯಂಗಾರ್

Pages 232

₹ 185.00




Year of Publication: 2019
Published by: ಕೇಂದ್ರ ಸಾಹಿತ್ಯ ಅಕಾಡೆಮಿ
Address: ರವೀಂದ್ರ ಭವನ, ನವದೆಹಲಿ.

Synopsys

ಹಿರಿಯ ಸಾಹಿತಿ ಹಾಗೂ ಪ್ರಬಂಧಕಾರ ಡಾ. ಗೊರೂರು ರಾಮಸ್ವಾಮಿ ಅಯ್ಯಂಗಾರ್ ಅವರು ಸಂಪಾದಿಸಿದ ಕೃತಿ-ಹೊಸಗನ್ನಡ ಪ್ರಬಂಧ ಸಂಕಲನ. ಪ್ರಬಂಧಗಳು ಲೇಖಕರ ವಿಚಾರ ಲಹರಿಯನ್ನು ಅವಲಂಬಿಸಿರುತ್ತವೆ. ಅವು ತೀರಾ ವ್ಯಕ್ತಿಗತವಾಗಿರಬಹುದು ಇಲ್ಲವೇ ಸಾಮಾಜಿಕ ಆಯಾಮವನ್ನು ಹೊಂದಿರಬಹುದು. ಓದಿಸಿಕೊಂಡು ಹೋಗುವ ಗುಣವನ್ನು ಹೊಂದಿರುವ ಸಾಹಿತ್ಯ ಬರಹಗಳಿವು. ಹೊಸಗನ್ನಡ ಸಾಹಿತ್ಯದಲ್ಲಿ ಬಂದಿವೆ ಎನ್ನಲಾದ ವಿವಿಧ ಲೇಖಕರ ಪ್ರಬಂಧಗಳನ್ನು ಸಂಗ್ರಹಿಸಿ, ಸಂಪಾದಿಸಿರುವುದು ಈ ಕೃತಿಯ ಹೆಗ್ಗಳಿಕೆ. ಹೊಸಗನ್ನಡ ಪ್ರಬಂಧ ಸಾಹಿತ್ಯದ ಬೆಳವಣಿಗೆ ಹಾಗೂ ಅದು ಪಡೆದುಕೊಂಡ ಸ್ವರೂಪ ಇತ್ಯಾದಿ ಕುರಿತು ಅಧ್ಯಯನ ನಡೆಸಲು ಈ ಕೃತಿಯು ಯೋಗ್ಯ ಆಕರವಾಗಿದೆ.

About the Author

ಗೊರೂರು ರಾಮಸ್ವಾಮಿ ಅಯ್ಯಂಗಾರ್
(04 July 1904 - 28 September 1991)

ಗಾಂಧಿವಾದಿ ಮತ್ತು ಸ್ವಾತಂತ್ರ್ಯ ಹೋರಾಟಗಾರರಾದ ಗೊರೂರು ರಾಮಸ್ವಾಮಿ ಅಯ್ಯಂಗಾರ್ ಅವರು ಕನ್ನಡದ ಜನಪ್ರಿಯ ಸಾಹಿತಿಗಳಲ್ಲಿ ಒಬ್ಬರಾಗಿದ್ದರು. ಗೊರೂರು ಗ್ರಾಮದಲ್ಲಿ 1904ರ ಜುಲೈ 4ರಂದು ಜನಿಸಿದರು. ತಂದೆ ಶ್ರೀನಿವಾಸ ಅಯ್ಯಂಗಾರ್ ತಾಯಿ ಲಕ್ಷ್ಮಮ್ಮ. ಗೊರೂರಿನಲ್ಲಿ ಪ್ರಾಥಮಿಕ ಶಾಲಾ ಶಿಕ್ಷಣವನ್ನು ಮುಗಿಸಿದ ಮೇಲೆ ಹಾಸನದಲ್ಲಿ ಪ್ರೌಢಶಾಲಾ ಶಿಕ್ಷಣ ಪಡೆಯುತ್ತಿದ್ದಾಗಲೇ ಸ್ವಾತಂತ್ರ್ಯ ಚಳುವಳಿಯಲ್ಲಿ ಭಾಗವಹಿಸಿದರು. ಅನಂತರ ಗುಜರಾತ್ ಗಾಂಧಿ ಆಶ್ರಮದಲ್ಲಿದ್ದ ವಿದ್ಯಾ ಪೀಠದಲ್ಲಿ ಓದು ಮುಂದುವರೆಸಿದರು. ಅನಂತರ ಪತ್ರಿಕಾರಂಗ ಪ್ರವೇಶಿಸಿದರು. ಮದರಾಸಿನ `ಲೋಕಮಿತ್ರ’ ಆಂಧ್ರ ಪತ್ರಿಕೆ `ಭಾರತಿ’ ಪತ್ರಿಕೆಗಳಲ್ಲಿ ಉಪಸಂಪಾದಕರಾಗಿ, ಸಂಪಾದಕರಾಗಿ ಸೇವೆ ಸಲ್ಲಿಸಿದರು. 1952ರಲ್ಲಿ ವಿಧಾನಸಭೆಗೆ ನಾಮಕರಣಗೊಂಡಿದ್ದ ಅವರು ಅದಕ್ಕೂ ...

READ MORE

Related Books