ಹೊಸಗನ್ನಡ ಸಾಹಿತ್ಯದ ಉದಯಕಾಲ

Author : ರಾ.ಯ. ಧಾರವಾಡಕರ

Pages 688

₹ 710.00




Year of Publication: 2013
Published by: ಕನ್ನಡ ಸಾಹಿತ್ಯ ಪರಿಷತ್ತು
Address: ಪಂಪಮಹಾಕವಿ ರಸ್ತೆ, ಚಾಮರಾಜಪೇಟೆ, ಬೆಂಗಳೂರು- 560018

Synopsys

‘ಹೊಸಗನ್ನಡ ಸಾಹಿತ್ಯದ ಉದಯಕಾಲ’ ಉತ್ತರ ಕರ್ನಾಟಕವನ್ನು ಅನುಲಕ್ಷಿಸಿ ರಾ.ಯ. ಧಾರವಾಡಕರ ಅವರ ಕೃತಿ. ಕನ್ನಡ ಪುಸ್ತಕ ಪ್ರಕಾಶನೋದ್ಯಮ ಇಂದು ಹುಲುಸಾಗಿ ಬೆಳೆದಿದೆ. ಅಧ್ಯಕ್ಷೀಯ ನುಡಿಯಲ್ಲಿ ಕೃತಿಯ ಕುರಿತು ಬರೆಯುತ್ತಾ. ವರ್ಷಕ್ಕೆ ಪ್ರಥಮಾವೃತ್ತಿಯ ಸುಮಾರು ಮೂರು ಸಾವಿರದಷ್ಟು ಪುಸ್ತಕಗಳು ಪ್ರಕಟವಾಗುತ್ತಿವೆ. ಅವಲ್ಲದೆ ಸಹಸ್ರಾರು ಮರುಮುದ್ರಣಗಳು ಹಾಗೂ ಲೆಕ್ಕಕ್ಕೆ ಬಾರದ ಸಾವಿರಾರು ಪುಸ್ತಕಗಳು ಪ್ರಕಟಣೆಯಾಗುತ್ತಿವೆ. ಈ ಉದ್ಯಮಕ್ಕೆ ಸಾರ್ವಜನಿಕ ಕ್ಷೇತ್ರದ ಕೊಡುಗೆಯೂ ಕಡಿಮೆಯಲ್ಲ. ರಾಜ್ಯದ ವಿವಿಧ ವಿಶ್ವವಿದ್ಯಾನಿಲಯಗಳು, ವಿವಿಧ ಅಕಾಡೆಮಿಗಳು, ಪುಸ್ತಕ ಪ್ರಾಧಿಕಾರ, ಸಾಹಿತ್ಯ ಪರಿಷತ್ತಿನಂಥ ಸಾರ್ವಜನಿಕ ಸಂಸ್ಥೆಗಳು ನಿರಂತರವಾಗಿ ಪುಸ್ತಕಗಳನ್ನು ಪ್ರಕಟಿಸುತ್ತಲಿವೆ. ಖಾಸಗಿ ಪ್ರಕಾಶನ ಸಂಸ್ಥೆಗಳಂತೂ ಪೈಪೋಟಿಯಿಂದಲೇ ಪುಸ್ತಕ ಪ್ರಕಾಶನದಲ್ಲಿ ತೊಡಗಿವೆ. ಈ ಎಲ್ಲಾ ಪ್ರಕಾಶನ ಸಂಸ್ಥೆಗಳು ಬಹುಮಟ್ಟಿಗೆ ಸಮಕಾಲೀನ ಕನ್ನಡ ಸಾಹಿತ್ಯ ಹಾಗೂ ವಿವಿಧ ಪ್ರಕಾರದ ಬರವಣಿಗೆಗಳ ಪ್ರಕಟಣೆಗೆ ಒತ್ತು ನೀಡುತ್ತಿರುವುದು ಸಹಜವೇ ಆಗಿದೆ. ಆದರೆ ಸಮಕಾಲೀನ ಹೊಸ ಚಿಗುರಿಗೆ ಆಗಿಂದಾಗ್ಗೆ ಹಳೇ ಬೇರುಗಳ ರಸ ಹಾಗೂ ಶಕ್ತಿಯ ಸ್ಪರ್ಶವಾಗಬೇಕಾದುದು ಅತ್ಯಗತ್ಯ. ಈ ದಿಸೆಯಲ್ಲಿ ಪರಿಷತ್ತು, ಕನ್ನಡ ಓದುಗರು ಮತ್ತು ಸಾಹಿತ್ಯಾಸಕ್ತರು ಎಂದಿಗೂ ಮರೆಯಬಾರದ ಲೇಖಕರು ಹಾಗೂ ಕೃತಿಗಳನ್ನು ಮತ್ತೆ ಮರುಮುದ್ರಿಸಿ, ಅವರ ಮುಂದಿರುವ ಮೂಲಕ, ಒಂದು ನೂತನ ಪರಂಪರೆಯನ್ನು ಪ್ರಾರಂಭಿಸಿರುತ್ತದೆ. ಈ ಕಾರ್ಯಕ್ಕೆ ವಿಜಾಪುರದ 79ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಒಂದು ಸುಸಂದರ್ಭವಾಗಿ ಒದಗಿ ಬಂದಿದೆ. ಈ ಸರಣಿಯಲ್ಲಿ ಕನ್ನಡ ಸಾಹಿತ್ಯ ಪರಂಪರೆಯಲ್ಲಿ ಮಹತ್ತ್ವದ ಸ್ಥಾನವನ್ನು ಪಡೆದಿರುವ ಇಪ್ಪತ್ತೈದು ಕೃತಿಗಳನ್ನು ಆಯ್ದು ಪ್ರಕಟಿಸಲಾಗುತ್ತಿದೆ. ಇದೊಂದು ಪುಟ್ಟ ಪ್ರಯತ್ನವೆಂಬ ನಮ್ರ ಭಾವನೆ ನನಗಿದೆ ಎಂದು ತಿಳಿಸಿದ್ದಾರೆ.

About the Author

ರಾ.ಯ. ಧಾರವಾಡಕರ
(15 July 1919 - 12 April 1991)

ಭಾಷಾಶಾಸ್ತ್ರ, ರಾಜಕಾರಣ, ಅರ್ಥಶಾಸ್ತ್ರ, ಪತ್ರಿಕೋದ್ಯಮ ಹಾಗೂ ಕನ್ನಡ ಭಾಷಾ ಸಾಹಿತ್ಯದ ಕುರಿತು ಅಧ್ಯಯನ ನಡೆಸಿದವರಲ್ಲಿ ಪ್ರಮುಖರು ರಾ, ಯ. ಧಾರವಾಡಕರ್ ಅವರು. ಇವರು ಜನಿಸಿದ್ದು 1919 ಜುಲೈ 15ರಂದು. ತಂದೆ ಯಲಗುರ್ದರಾವ್‌, ತಾಯಿ ಗಂಗಾಬಾಯಿ. ಬಾಗಲಕೋಟೆಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ಇವರು ಮುಂಬೈ ವಿಶ್ವವಿದ್ಯಾಲಯದ ಮೆಟ್ರಿಕ್ಯುಲೇಷನ್‌ ಪರೀಕ್ಷೆಯಲ್ಲಿ ತೇರ್ಗಡೆಯಾದ ನಂತರ ಸಾಂಗ್ಲಿಯ ವಿಲ್ಲಿಂಗ್‌ಡನ್‌ನಲ್ಲಿ ಬಿ.ಎ. ಪದವಿ ಪಡೆದರು. ಕನ್ನಡ ಹಾಗೂ ಇಂಗ್ಲಿಷ್‌ ಅಧ್ಯಾಪಕರಾಗಿ ವೃತ್ತಿ ಆರಂಭಿಸಿ ಪ್ರಿನ್ಸಿಪಾಲರಾಗಿ ಕಾರ್ಯನಿರ್ವಹಿಸಿ ನಿವೃತ್ತರಾದರು. ಸಾಹಿತ್ಯ ಕೃಷಿಯಲ್ಲಿಯೂ ತೊಡಗಿಕೊಂಡಿರುವ ಇವರು ಪತ್ರಿಕಾ ವ್ಯವಸಾಯ, ಕರ್ನಾಟಕದಲ್ಲಿ ವೃತ್ತ ಪತ್ರಿಕೆಗಳು, ಸಾಹಿತ್ ಸಮೀಕ್ಷೆ, ಕನ್ನಡ ಭಾಷಾ ಶಾಸ್ತ್ರ, ಧೂಮ್ರವಲಯಗಳು, ತೂರಿದ ಚಿಂತನೆಗಳು, ನವಿಲುಗರಿ ...

READ MORE

Related Books