ಹೊಸಗನ್ನಡ ಸಾಹಿತ್ಯದ ಉಗಮ ಮತ್ತು ವಿಕಾಸ

Author : ಹರಿಕೃಷ್ಣ ಭರಣ್ಯ

Pages 258

₹ 295.00




Year of Publication: 2016
Published by: ಸಪ್ನ ಬುಕ್ ಹೌಸ್
Address: ಆರ್.ಓ. #11, 3ನೇ ಮುಖ್ಯರಸ್ತೆ, ಗಾಂಧಿನಗರ, ಬೆಂಗಳೂರು-9

Synopsys

‘ಹೊಸಗನ್ನಡ ಸಾಹಿತ್ಯದ ಉಗಮ ಮತ್ತು ವಿಕಾಸ’ ಲೇಖಕ ಡಾ. ಹರಿಕೃಷ್ಣ ಭರಣ್ಯ ಅವರ ಕೃತಿ. ಹೊಸಗನ್ನಡ ಸಾಹಿತ್ಯದ ಪ್ರತಿಯೊಂದು ಪ್ರಕಾರದಲ್ಲೂ ಮೊದಲು ವ್ಯವಸ್ಥಿತವಾಗಿ ಹುಡುಕುವ ಕೆಲಸ, ಲೇಖಕರ ಅಸಾದ್ಯ ಪರಿಶ್ರಮಗಳು ಇದರಲ್ಲಿ ಎದ್ದುಕಾಣುವ ಅಂಶಗಳಾಗಿವೆ. ಅಲ್ಲದೆ ಹೊಸಗನ್ನಡ ಸಾಹಿತ್ಯದ ಆರಂಭದ ಚರಿತ್ರೆಯನ್ನು ಹಾಗೂ ಹಿನ್ನೆಲೆಗಳನ್ನು ವ್ಯವಸ್ಥಿತವಾಗಿ ಅಷ್ಟೇ ಅಧಿಕೃತವಾಗಿ ಹೇಳುವಲ್ಲಿ ಈ ಕೃತಿಗೆ ಪ್ರತ್ಯೇಕವಾದ ಹಾಗೂ ಗಮನಾರ್ಹ ಸ್ಥಾನವಿದೆಯೆನ್ನುವುದರಲ್ಲಿ ಸಂದೇಹವೇ ಇಲ್ಲ. ಹೊಸ ವಿಧಾನದ ಮೂಲಕ ಲೇಖಕರು ಹೇಳಲು ಹೊರಟ ಈ ಸಂಶೋದನೆಯು ಹೊಸಗನ್ನಡ ಸಾಹಿತ್ಯದ ಚರಿತ್ರೆಯ ಪುನರ್ನಿರ್ಮಾಣದಲ್ಲಿ ಒಂದು ಉಪಯುಕ್ತ ಕೃತಿಯಾಗಿದೆ.

About the Author

ಹರಿಕೃಷ್ಣ ಭರಣ್ಯ

ಡಾ. ಹರಿಕೃಷ್ಣ ಭರಣ್ಯರು (ಜನನ 1951) ತಮಿಳುನಾಡಿನ ಮದುರೈ ಕಾಮರಾಜ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಪ್ರಾಧ್ಯಾಪಕ ಹಾಗೂ ವಿಭಾಗ ಮುಖ್ಯಸ್ಥರಾಗಿ ನಿವೃತ್ತರಾಗಿದ್ದಾರೆ. ಸದ್ಯ ಕುಂಬಳೆಯ ನಾರಾಯಣ ಮಂಗಲದಲ್ಲಿ ನೆಲೆಸಿದ್ದಾರೆ. ಅವರ ಹುಟ್ಟು ದಕ್ಷಿಣ ಕನ್ನಡ ಜಿಲ್ಲೆಯ ಪಾಣಾಜೆಯ ಭರಣ್ಯ. ಹವಿಗನ್ನಡ ಮಾತೃಭಾಷೆಯ ಭರಣ್ಯರು ಕನ್ನಡವಲ್ಲದೆ ಇಂಗ್ಲಿಷ್, ತಮಿಳು, ತುಳು, ಮಲಯಾಳಂ ಮತ್ತು ಹಿಂದಿ ಭಾಷೆಗಳನ್ನು ಬಲ್ಲರು. ಸಂಶೋಧನೆ - ಪ್ರವೇಶ, ಸಂಶೋಧನ ವಿಧಾನ, ಹೊಸಗನ್ನಡ ಸಾಹಿತ್ಯದ ಉಗಮ ಮತ್ತು ವಿಕಾಸ, ಹವ್ಯಕಾಧ್ಯಯನ, ಕಾವೇರಿಕಾನ ಕೃಷ್ಣ ಭಟ್ಟರ ಬದುಕು ಇತ್ಯಾದಿ ಅವರ ಕೃತಿಗಳು. ಭರಣ್ಯರು 'ಮೂಡು ಮಜಲು' ಮತ್ತು ...

READ MORE

Related Books