ಹೊಸಗನ್ನಡ ವ್ಯಾಕರಣ

Author : ಎನ್. ರಂಗನಾಥಶರ್ಮಾ

Pages 138

₹ 50.00




Year of Publication: 2010
Published by: ಕನ್ನಡ ಸಾಹಿತ್ಯ ಪರಿಷತ್ತು
Address: ಪಂಪ ಮಹಾಕವಿ ರಸ್ತೆ, ಚಾಮರಾಜ ಪೇಟೆ, ಬೆಂಗಳೂರು-560018

Synopsys

ಹೊಸಗನ್ನಡ ವ್ಯಾಕರಣ ಕುರಿತಂತೆ ವಿದ್ವಾಂಸ ಎನ್.ರಂಗನಾಥ ಶರ್ಮ ಅವರು ಬರೆದ ಕೃತಿ. 2010ರಲ್ಲಿ ಗದಗದಲ್ಲಿ ಜರುಗಿದ 76ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಪ್ರಕಟಿತ ಗ್ರಂಥವಿದು. ಬದಲಾಗುತ್ತಿರುವ ಸಾಹಿತ್ಯಕ ವೇಗಕ್ಕೆ ವ್ಯಾಕರಣವೂ ಪರಿವರ್ತನೆಗೊಳ್ಳಬೇಕು. ಆಗಲೇ ಭಾಷೆಗೂ ಹೊಸತನ ಲಭ್ಯವಾಗುತ್ತದೆ. ಅಕ್ಷರ ಪ್ರಕರಣ, ನಾಮ ಪ್ರಕರಣ, ಸಂಧಿ ಪ್ರಕರಣ, ಸ್ತ್ರೀ ಪ್ರತ್ಯಯಗಳು, ಕ್ರಿಯಾಪದ, ದ್ವಿರುಕ್ತಿ, ಸಮಾಸಗಳು, ಪ್ರಯೋಗ ಪ್ರಕರನ ಇತ್ಯಾದಿ ಅಂಶಗಳ ಬಗ್ಗೆ ವಿಸ್ತಾರವಾಗಿ ಚರ್ಚಿಸಲಾಗಿದೆ.

About the Author

ಎನ್. ರಂಗನಾಥಶರ್ಮಾ
(07 January 1916 - 25 January 2014)

ವಿದ್ವಾನ್ ಎನ್. ರಂಗನಾಥಶರ್ಮಾ ಅವರು 1916 ಜನವರಿ 07ರಂದು ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ನಡಹಳ್ಳಿ ಗ್ರಾಮದಲ್ಲಿ ಜನಿಸಿದರು. ತಂದೆ-ತಿಮ್ಮಪ್ಪ, ತಾಯಿ-ಜಾನಕಮ್ಮ. ಪ್ರಾಥಮಿಕ ವಿದ್ಯಾಭ್ಯಾಸ ನಡಹಳ್ಳಿಯಲ್ಲಿ, ಮಾಧ್ಯಮಿಕ ವಿದ್ಯಾಭ್ಯಾಸವು ಸೊರಬದಲ್ಲಿ ಮುಗಿಯಿತು. ಅಗಡಿಯ ಆನಂದವನ ಆಶ್ರಮದಲ್ಲಿ ಸಂಸ್ಕೃತ ಕಲಿತ ಅವರು ನಂತರ ಕೆಳದಿ ಸಂಸ್ಕೃತ ಪಾಠಶಾಲೆಗೆ ಸೇರಿದರು. ಇದರೊಂದಿಗೆ ಖಾಸಗಿಯಾಗಿ ಮದರಾಸಿನ ವಿಶ್ವವಿದ್ಯಾಲಯದ ಕನ್ನಡ ವಿದ್ವತ್ ಮತ್ತು ಮೈಸೂರಿನ ಕನ್ನಡ ಪಂಡಿತ ಪರೀಕ್ಷೆಗಳನ್ನೂ ಪಾಸ್ ಮಾಡಿದರು. ಡಿವಿಜಿ ಅವರ ಒಡನಾಡಿ ಆಗಿದ್ದ ಅವರು ಡಿವಿಜಿ ಮರಣಾ ನಂತರ ‘ಮರಳು ಮುನಿಯನ ಕಗ್ಗ’ದ ಕರಡು ತಿದ್ದಿದವರೇ ರಂಗನಾಥ ಶರ್ಮಾ.  ಸಂಸ್ಕೃತ ಕೃತಿಗಳು: ಬಾಹುಬಲಿ ವಿಜಯಂ (ಐತಿಹಾಸಿಕ ನಾಟಕ), ಏಕಚಕ್ರಂ (ಪೌರಾಣಿಕ ನಾಟಕ, ಗುರುಪಾರಮಿತ್ರ ಚರಿತಂ, ಗೊಮ್ಮಟೇಶ್ವರ ಸುಪ್ರಭಾತಂ, ಗೊಮ್ಮಟೇಶ ...

READ MORE

Related Books