ಹೃದಯ ಸಂಪನ್ನರು (ಜ್ಞಾಪಕ ಚಿತ್ರಶಾಲೆ-7)

Author : ಡಿ.ವಿ. ಗುಂಡಪ್ಪ (ಡಿ.ವಿ.ಜಿ.)

Pages 168

₹ 144.00

Buy Now


Year of Publication: 2018
Published by: ಸಾಹಿತ್ಯ ಪ್ರಕಾಶನ,
Address: ಕೊಪ್ಪೀಕರ್ ಬೀದಿ, ಹುಬ್ಬಳ್ಳಿ- 580020
Phone: 08362367676

Synopsys

‘ಮಂಕುತಿಮ್ಮನ ಕಗ್ಗ’ ದಂತಹ ಕೃತಿಯ ಮೂಲಕ ಸಂಸ್ಕೃತಿ, ಮೌಲ್ಯ, ಅಧ್ಯಾತ್ಮ, ತಾತ್ವಿಕ ಚಿಂತನೆ, ಜೀವನದರ್ಶನಗಳನ್ನು ಮಾಡಿಸಿದ ಸಾಹಿತಿ ಡಿ.ವಿ.ಜಿ. ಅವರು ಕನ್ನಡ ನಾಡು ನುಡಿಗೆ ದುಡಿದ ಸಾಹಿತಿಗಳನ್ನು ಪರಿಚಿಯಿಸಿದ್ದೇ ಈ ಕೃತಿ-ಸಾಹಿತ್ಯೋಪಾಸಕರು. ತಮ್ಮ ವ್ಯಕ್ತಿಗತ ಬದುಕನ್ನೂ ಮೀರಿ ಈ ಎಲ್ಲ ಮಹನೀಯರು ತಮ್ಮ ಕನ್ನಡ-ಕನ್ನಡಿಗರ ಅಭ್ಯುದಯಕ್ಕಾಗಿ ಕಳಕಳಿ ತೋರಿದವರು. ಕನ್ನಡ ಸಾಹಿತ್ಯದ ಮೂಲಕ ಹತ್ತು ಹಲವು ಕವಿ-ಸಾಹಿತಿಗಳನ್ನು ಪರಿಚಯಿಸಿದವರು. ಇಂತಹ ವ್ಯಕ್ತಿಗಳ ಪರಿಚಯವು ಕನ್ನಡ ನಾಡು-ನುಡಿಗೆ ಸಂದ ಗೌರವವಾಗಿದೆ. ಈ ಹಿನ್ನೆಲೆಯಲ್ಲಿ ಈ ಕೃತಿಯು ಕನ್ನಡ ಸಾಹಿತ್ಯಕ್ಕೆ ಒಂದು ಉತ್ತಮ ಸೇರ್ಪಡೆಯಾಗಿದೆ.

About the Author

ಡಿ.ವಿ. ಗುಂಡಪ್ಪ (ಡಿ.ವಿ.ಜಿ.)
(17 March 1887 - 07 October 1975)

ಮಂಕುತಿಮ್ಮನ ಕಗ್ಗ ಕಾವ್ಯದಿಂದ ಲೋಕವಿಖ್ಯಾತರಾದ ಡಿವಿಜಿ ಅವರು (ದೇವನಹಳ್ಳಿ ವೆಂಕಟರಮಣಯ್ಯ ಗುಂಡಪ್ಪ) ಲೇಖಕ- ಪತ್ರಕರ್ತ. ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ 1887ರ ಮಾರ್ಚ್ 17ರಂದು ಜನಿಸಿದ ಗುಂಡಪ್ಪ ಅವರು ಪ್ರೌಢಾಶಾಲಾ ಶಿಕ್ಷಣವನ್ನು ಮೈಸೂರು ಮಹಾರಾಜ ಪ್ರೌಢಶಾಲೆಯಲ್ಲಿ ಪಡೆದರು. ಮೆಟ್ರಿಕ್ ಪರೀಕ್ಷೆಯಲ್ಲಿ ಉತ್ತೀರ್ಣರಾಗದಿದ್ದರೂ ಸ್ವಂತ ಅಧ್ಯಯನದಿಂದ ಕನ್ನಡ, ಸಂಸ್ಕೃತ, ಇಂಗ್ಲಿಷ್ ಭಾಷೆಗಳಲ್ಲಿ ಪರಿಣತರಾಗಿದ್ದರು. ಮುಳುಬಾಗಿಲಿನ ಒಂದು ಶಾಲೆಯಲ್ಲಿ ಕೆಲವು ಕಾಲ ಬದಲಿ ಅಧ್ಯಾಪಕರಾಗಿ ಕಾರ್ಯ ನಿರ್ವಹಿಸಿದರು. ಅನಂತರ ಕೋಲಾರದ ಸೋಡಾ ಫ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡಿ ಬೇಸತ್ತು ಬೆಂಗಳೂರಿನಲ್ಲಿ ಜಟಕಾಬಂಡಿಗೆ ಬಣ್ಣ ಬಳಿಯುವ ಕಾರ್ಖಾನೆಯಲ್ಲಿ ಕೆಲಕಾಲ ಕೆಲಸ ಮಾಡಿದರು. ಅನಂತರ ಪತ್ರಿಕಾರಂಗ ...

READ MORE

Related Books