ಹೃದಯ ಜ್ಯೋತಿ

Author : ಪಿ.ಎಸ್. ಶಂಕರ್

Pages 160

₹ 90.00




Year of Publication: 2012
Published by: ಕನ್ನಡ ಪುಸ್ತಕ ಪ್ರಾಧಿಕಾರ
Address: ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002
Phone: 080-22107704

Synopsys

ಹೃದಯದ ಬಗ್ಗೆ ನಿಮಗೇನು ಗೊತ್ತು? ಹೃದಯದ ಕಾರ್ಯವೈಖರಿ, ಹೃದಯಕ್ಕೆ ಬರುವ ಕಾಯಿಲೆಗಳು, ಮುಂತಾದ ವಿಷಯಗಳ ಕುರಿತು ಈ ಕೃತಿಯು ವಿವರಿಸುತ್ತದೆ. ಹೃದಯದ ಬಗ್ಗೆ ತಿಳಿದಿದ್ದರೂ ಹಲವಾರು ತಪ್ಪು ಮಾಹಿತಿಗಳನ್ನು ಅನುಸರಿಸಿ ಇಕ್ಕಟ್ಟಿಗೆ ಸಿಕ್ಕಿಕೊಳ್ಳುವುದರ ನಡುವೆ ಹೃದಯದ ಪಾಲನೆ, ಪೋಷಣೆ ಹಾಗೂ ಸಂರಕ್ಷಣೆ ಬಗ್ಗೆ ಈ ಕೃತಿಯು ಸಂಪೂರ್ಣ ಮಾಹಿತಿ ನೀಡುತ್ತದೆ. 

About the Author

ಪಿ.ಎಸ್. ಶಂಕರ್
(01 January 1936)

ವೃತ್ತಿಯಲ್ಲಿ ವೈದ್ಯರಾಗಿ ವೈದ್ಯ ಸಾಹಿತಿಯಾಗಿ ಪ್ರಸಿದ್ಧರಾಗಿರುವ ಡಾ.ಪಿ.ಎಸ್.ಶಂಕರ್ ಅವರು 1936 ಜನವರಿ 1ರಂದು ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕಿನ ಹಲಗೇರಿಯಲ್ಲಿ ಜನಿಸಿದರು. ಹುಟ್ಟೂರು ಹಾಗೂ ಚಿತ್ರದುರ್ಗದಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ಇವರು ಮೈಸೂರು ಮತ್ತು ದೆಹಲಿಯಲ್ಲಿ ವೈದ್ಯಕೀಯದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕಲಬುರ್ಗಿಯ ಎಂ.ಆರ್‌. ಮೆಡಿಕಲ್‌ ಕಾಲೇಜಿನಲ್ಲಿ ಅಧ್ಯಾಪಕರಾಗಿ, ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸಿ ನಿವೃತ್ತರಾಗಿದ್ದಾರೆ.  ವೃದ್ಧಾಪ್ಯದಲ್ಲಿನ ಕಾಯಿಲೆಗಳು, ಹೃದಯ ಜೋಪಾನ, ಕ್ಯಾನ್ಸರ್, ಹೃದಯ ರೋಗ ತಡೆಗಟ್ಟಿ, ಡಾ. ವಿಕ್ರಂ ಸಾರಾಭಾಯ್‌, ಮುಂತಾದ ಕೃತಿಗಳನ್ನು ರಚಿಸಿದ್ದಾರೆ.  ಸೋವಿಯತ್ ಲ್ಯಾಂಡ್ ನೆಹರು ಪ್ರಶಸ್ತಿ, ರಾಕ್ ಫೆಲ್ಲರ್ ಸ್ಕಾಲರ್ ಇನ್ ರೆಸಿಡೆನ್ಸ ಗೌರವ, ಭಾರತ ಸರ್ಕಾರದ ವಿಜ್ಞಾನ ತಂತ್ರಜ್ಞಾನ ಇಲಾಖೆಯ ...

READ MORE

Related Books