ಹೈದರಾಬಾದ್ ಕರ್ನಾಟಕದ ವಿಮೋಚನಾ ಚಳುವಳಿ

Author : ಬಾಲಚಂದ್ರ ಜಯಶೆಟ್ಟಿ

Pages 114

₹ 40.00




Year of Publication: 2006
Published by: ಕನ್ನಡ ಸಾಹಿತ್ಯ ಪರಿಶತ್ತು
Address: ಬೆಂಗಳೂರು – 560 018

Synopsys

ಕಲ್ಯಾಣ ಕರ್ನಾಟಕವೆಂದು ಗುರುತಿಸಲಾಗುವ ಕಲಬುರಗಿ ಪ್ರದೇಶವನ್ನು ಕೆಲವು ವರ್ಷಗಳ ಹಿಂದಿನವರೆಗೂ “ಹೈದರಾಬಾದ ಕರ್ನಾಟಕ” ಎಂದು ಕರೆಯಲಾಗುತ್ತಿತ್ತು. 1948ರ ವರೆಗೆ ನಿಜಾಮನ ಆಳ್ವಿಕೆಗೆ ಒಳಪಟ್ಟಿದ್ದ ಈ ಪ್ರದೇಶದಲ್ಲಿ ಧರ್ಮಾಂಧರಾದ ರಜಾಕಾರರೆಂಬ ಒಂದು ಪಡೆಯವರ ಉಪಟಳದಿಂದ ಸಾವಿರಾರು ಜನರ ಹತ್ಯೆಯಾಗುತ್ತಿತ್ತು. ಅದಕ್ಕಾಗಿ ಒಂದು ದೊಡ್ಡ ಆಂದೋಲನವೇ ಮಾಡಬೇಕಾಯಿತು. ಆ ಹೋರಾಟದ ಚರಿತ್ರೆಯನ್ನು ಈ ಕೃತಿಯಲ್ಲಿ ನೀಡಿದ್ದಾರೆ ಲೇಖಕ ಪ್ರೊ. ಭಾಲಚಂದ್ರ ಜಯಶೆಟ್ಟಿ ಅವರು. 

About the Author

ಬಾಲಚಂದ್ರ ಜಯಶೆಟ್ಟಿ
(22 November 1939)

ಲೇಖಕ, ಅನುವಾದಕ ಭಾಲಚಂದ್ರ ಜಯಶೆಟ್ಟಿ ಅವರು ಮೂಲತಃ ಬೀದರ ಜಿಲ್ಲೆಯವರು. ಬೀದರ ಜಿಲ್ಲೆಯ ಬಸವ ಕಲ್ಯಾಣ ತಾಲೂಕಿನ ರಾಜೇಶ್ವರದಲ್ಲಿ  ಜನಿಸಿದ ಅವರು ಪ್ರಾಥಮಿಕ ಶಿಕ್ಷಣವನ್ನು ರಾಜೇಶ್ವರ, ಬಸವಕಲ್ಯಾಣದಲ್ಲಿ ಪಡೆದರು. ಆನಂತರ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಪ್ರಥಮ ಶ್ರೇಣಿಯಲ್ಲಿ ಎಂ.ಎ ಪದವಿ ಪಡೆದರು. ಕನ್ನಡ, ಹಿಂದಿ, ಮರಾಠಿ ಭಾಷೆಗಳಲ್ಲಿ ಪ್ರಭುತ್ವ ಪಡೆದಿದ್ದ ಅವರು ಶಿಕ್ಷಣ ಇಲಾಖೆಯಲ್ಲಿ ವೃತ್ತಿಯನ್ನು ಆರಂಭಿಸಿದರು.  ಸರಕಾರಿ ಪದವಿ ಮಹಾವಿದ್ಯಾಲಯ ಯಾದಗಿರಿ, ಸರಕಾರಿ ಮಹಾವಿದ್ಯಾಲಯ ಗುಲಬರ್ಗಾ, ಸರಕಾರಿ ಪ್ರಥಮ ದರ್ಜೆ ಕಾಲೇಜು ಬೀದರ ಮುಂತಾದೆಡೆ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ 1997ರಲ್ಲಿ ನಿವೃತ್ತಿಯಾದರು. ಹಲವಾರು ಶಿಕ್ಷಣ ಸಂಸ್ಥೆಗಳ ...

READ MORE

Related Books