ಹೈದರಾಬಾದ ಕರ್ನಾಟಕದ ತತ್ತ್ವಪದಗಳು

Author : ಬಸವರಾಜ ಸಬರದ

Pages 252

₹ 150.00




Year of Publication: 2000
Published by: ಪ್ರಸಾರಾಂಗ
Address: ಕನ್ನಡ ವಿಶ್ವವಿದ್ಯಾಲಯ ವಿದ್ಯಾರಣ್ಯ, ಹಂಪಿ

Synopsys

ಹೈದ್ರಾಬಾದ-ಕರ್ನಾಟಕ ಪ್ರದೇಶವೆಂದರೆ ಸಾಂಸ್ಕೃತಿಕವಾಗಿ, ಸಾಹಿತ್ಯಕವಾಗಿ ತುಂಬಾ ಶ್ರೀಮಂತಿಕೆಯ ನಾಡು. ದಾಸರು, ಸೂಫಿ- ಸಂತರು, ಶರಣರು ಈ ಭಾಗದಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಕಾಣಸಿಗುವರು. ಕನ್ನಡ ಸಾಹಿತ್ಯಕ್ಕೆ ಸಂಬಂಧಿಸಿದಂತೆ  ಹತ್ತು ಹಲವು ಪ್ರಥಮಗಳು ಇದೇ ಹೈದ್ರಾಬಾದ-ಕರ್ನಾಟಕ ಪ್ರದೇಶದಲ್ಲಿವೆ. ಹೀಗಾಗಿ ಶ್ರೀಮಂತ ಇತಿಹಾಸದ ಈ ಪ್ರದೇಶವು ತತ್ವಪದಗಳ ದೃಷ್ಟಿಯಿಂದಲೂ ಅತ್ಯಂತ ಸಮೃದ್ಧ ಎಂಬುದನ್ನು ಡಾ. ಬಸವರಾಜ ಸಬರದ ಅವರ ‘ಹೈದರಾಬಾದ-ಕರ್ನಾಟಕದ ತತ್ವಪದಗಳು; ಕೃತಿ ತೆರೆದು ತೋರುತ್ತದೆ. ಹೈ-ಕ ಭಾಗದ ತತ್ವಪದಕಾರರ ಬದುಕು, ಸಂದೇಶಗಳ ದೃಷ್ಟಿಕೋನ, ಉದ್ದೇಶಗಳೊಂದಿಗೆ ವ್ಯಕ್ತಿಗತ ಹಾಗೂ ಸಾಮಾಜಿಕ ಮೌಲ್ಯಗಳನ್ನು ಪರಿಚಯಿಸುತ್ತದೆ.    

About the Author

ಬಸವರಾಜ ಸಬರದ
(20 June 1954)

ಬಸವರಾಜ ಸಬರದ ಅವರು ಮೂಲತಃ ಕೊಪ್ಪಳ ಜಿಲ್ಲೆ ಯಲಬುರ್ಗ ತಾಲ್ಲೂಕಿನ ಕುಕನೂರಿನವರು. ಹುಟ್ಟಿದ್ದು 1954 ಜೂನ್‌ 20ರಂದು. ತಾಯಿ ಬಸಮ್ಮ, ತಂದೆ ಬಸಪ್ಪ ಸಬರದ. ಹುಟ್ಟೂರು ಕುಕನೂರಿನಲ್ಲಿಯೇ ಪ್ರಾಥಮಿಕ ಶಿಕ್ಷಣ ಪಡೆದ ಇವರು ಕರ್ನಾಟಕ ವಿಶ್ವವಿದ್ಯಾಲಯದಿಂದ ಕನ್ನಡ ಭಾಷೆಯಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿಎಚ್‌ಡಿ ಪದವಿ ಪಡೆದರು. ಉಪನ್ಯಾಸಕರಾಗಿ ವೃತ್ತಿ ಆರಂಭಿಸಿದ ಇವರು ಹಲವಾರು ಕಾಲೇಜುಗಳಲ್ಲಿ ಸೇವೆ ಸಲ್ಲಿಸಿದ್ದಾರೆ.  ಶೈಕ್ಷಣಿಕವಾಗಿ ಮಾತ್ರವಲ್ಲದೇ ದೇವದಾಸಿ ವಿಮೋಚನಾ ಹೋರಾಟ, ಅಂತರ್ಜಾತಿ ವಿವಾಹಗಳಿಗೆ ಪ್ರೋತ್ಸಾಹ, ಅಸ್ಪೃಶ್ಯತಾ ನಿವಾರಣೆ, ದಲಿತ-ಬಂಡಾಯ ಚಳವಳಿ ಮುಂತಾದ ಸಾಮಾಜಿಕ ಹೋರಾಟಗಳಲ್ಲಿಯೂ ತೊಡಗಿಸಿಕೊಂಡಿದ್ದಾರೆ.   ನನ್ನವರ ಹಾಡು, ಹೋರಾಟ, ...

READ MORE

Related Books