ಹೈದರಾಬಾದ ಕರ್ನಾಟಕದ ತತ್ತ್ವಪದಗಳು

Author : ಬಸವರಾಜ ಸಬರದ

Pages 252

₹ 150.00




Year of Publication: 2000
Published by: ಪ್ರಸಾರಾಂಗ
Address: ಕನ್ನಡ ವಿಶ್ವವಿದ್ಯಾಲಯ, ಹಂಪಿ.

Synopsys

ಹೈದರಾಬಾದ್ ಕರ್ನಾಟಕ ಪ್ರದೇಶಕ್ಕೆ ಸೇರಿದ ಗುಲ್ಬರ್ಗ, ರಾಯಚೂರ, ಬೀದರ, ಕೊಪ್ಪಳ ಜಿಲ್ಲೆಯ ಸಾಹಿತ್ಯ ಸಮುದಾಯದಿಂದ ಸಂಪಾದಿಸಲ್ಪಟ್ಟ ಪ್ರಾತಿನಿಧಿಕ ತತ್ತ್ವಪದಗಳ ಸಂಕಲನವಿದಾಗಿದ್ದು. ತತ್ವಪದ ಸಾಹಿತ್ಯದ ಸುವರ್ಣಯುಗವೆಂದು ಕರೆಯಬಹುದಾದ ೧೮೧೯ನೇಶತಮಾನದ ತತ್ತ್ವಪದಕಾರರ ಹಾಗೂ ಸ್ವಾತಂತ್ರ್ಯ ಪೂರ್ವದಲ್ಲಿ ಜನಿಸಿದ ಕೆಲವು ತತ್ವಪದಕಾರರ ತತ್ತ್ವಪದಗಳನ್ನು ಇಲ್ಲಿ ಸಂಗ್ರಹಿಸಲಾಗಿದ್ದು ೬೪ ಪದಗಳನ್ನೊಳಗೊಂಡಿದೆ. ಈ ಕೃತಿಯು ಒಳಗೊಂಡಿರುವ ಭಾಗಗಳೆಂದರೆ; ಗುಲ್ಬರ್ಗಾ ಜಿಲ್ಲೆಯ ತತ್ವಪದಗಳು , ರಾಯಚೂರು ಜಿಲ್ಲೆಯ ತತ್ವಪದಗಳು , ಬೀದರ ಜಿಲ್ಲೆಯ ತತ್ವಪದಗಳು , ಕೊಪ್ಪಳ ಜಿಲ್ಲೆಯ ತತ್ವಪದಗಳು

About the Author

ಬಸವರಾಜ ಸಬರದ
(20 June 1954)

ಬಸವರಾಜ ಸಬರದ ಅವರು ಮೂಲತಃ ಕೊಪ್ಪಳ ಜಿಲ್ಲೆ ಯಲಬುರ್ಗ ತಾಲ್ಲೂಕಿನ ಕುಕನೂರಿನವರು. ಹುಟ್ಟಿದ್ದು 1954 ಜೂನ್‌ 20ರಂದು. ತಾಯಿ ಬಸಮ್ಮ, ತಂದೆ ಬಸಪ್ಪ ಸಬರದ. ಹುಟ್ಟೂರು ಕುಕನೂರಿನಲ್ಲಿಯೇ ಪ್ರಾಥಮಿಕ ಶಿಕ್ಷಣ ಪಡೆದ ಇವರು ಕರ್ನಾಟಕ ವಿಶ್ವವಿದ್ಯಾಲಯದಿಂದ ಕನ್ನಡ ಭಾಷೆಯಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿಎಚ್‌ಡಿ ಪದವಿ ಪಡೆದರು. ಉಪನ್ಯಾಸಕರಾಗಿ ವೃತ್ತಿ ಆರಂಭಿಸಿದ ಇವರು ಹಲವಾರು ಕಾಲೇಜುಗಳಲ್ಲಿ ಸೇವೆ ಸಲ್ಲಿಸಿದ್ದಾರೆ.  ಶೈಕ್ಷಣಿಕವಾಗಿ ಮಾತ್ರವಲ್ಲದೇ ದೇವದಾಸಿ ವಿಮೋಚನಾ ಹೋರಾಟ, ಅಂತರ್ಜಾತಿ ವಿವಾಹಗಳಿಗೆ ಪ್ರೋತ್ಸಾಹ, ಅಸ್ಪೃಶ್ಯತಾ ನಿವಾರಣೆ, ದಲಿತ-ಬಂಡಾಯ ಚಳವಳಿ ಮುಂತಾದ ಸಾಮಾಜಿಕ ಹೋರಾಟಗಳಲ್ಲಿಯೂ ತೊಡಗಿಸಿಕೊಂಡಿದ್ದಾರೆ.   ನನ್ನವರ ಹಾಡು, ಹೋರಾಟ, ...

READ MORE

Related Books