ಇದನ್ನು ಬಯಸಿರಲಿಲ್ಲ

Author : ಟಿ.ಎನ್. ವಾಸುದೇವ ಮೂರ್ತಿ

Pages 188

₹ 144.00




Year of Publication: 2015
Published by: ಸಾಹಿತ್ಯ ಲೋಕ ಪಬ್ಲಿಕೇಷನ್ಸ್,
Address: ಬೆಂಗಳೂರು

Synopsys

ಲೇಖಕ ಹಾಗೂ ಅನುವಾದಕ ಟಿ.ಎನ್. ವಾಸುದೇವ ಮೂರ್ತಿ ಅವರು ಖ್ಯಾತ ತತ್ವಜ್ಞಾನಿ ‘ಯು.ಜಿ’ ಎಂದೇ ಹೆಸರಾಗಿದ್ದ ಯು.ಜಿ. ಕೃಷ್ಣಮೂರ್ತಿ (ಉಪ್ಪಲೂರಿ ಗೋಪಾಲ ಕೃಷ್ಣಮೂರ್ತಿ) ಅವರ ಕುರಿತು ಬರೆದ ಕೃತಿ-ಇದನ್ನು ಬಯಸಿರಲಿಲ್ಲ. ಬೆಸ್ಟ್ ಆಫ್ ಯು.ಜಿ ಎಂದೇ ಕೃತಿಗೆ ಉಪಶೀರ್ಷಿಕೆ ನೀಡಿದ್ದು, ಯು.ಜಿ. ಅವರ ಅತ್ಯುತ್ತಮ ವಿಚಾರಗಳನ್ನು, ಯೋಚನೆಗಳನ್ನು ಇಲ್ಲಿ ಸಂಗ್ರಹಿಸಿದ್ದು ಈ ಕೃತಿಯ ಹೆಗ್ಗಳಿಕೆ. ಹತ್ತು ಹಲವು ವಿಚಾರಗಳನ್ನು ಖಚಿತವಾಗಿ ಹೇಳಿರುವ ಖ್ಯಾತಿಯ ಯು.ಜಿ. ಅವರು ತಮ್ಮ ಇರುವಿನ ಸ್ಥಿತಿಯು ಸಹಜ ಎನ್ನುವ ಮೂಲಕ ಜನರಲ್ಲಿ ಹುಬ್ಬೇರಿಸುವಂತೆ ಮಾಡುತ್ತಿದ್ದರು. ವೈಚಾರಿಕವಾಗಿ ಅವರನ್ನು ಹಾಗೂ ಅವರ ವ್ಯಕ್ತಿತ್ವವನ್ನು ಪರಿಚಯಿಸುವ ಕೃತಿ ಇದು.

About the Author

ಟಿ.ಎನ್. ವಾಸುದೇವ ಮೂರ್ತಿ
(30 December 1974)

ಟಿ.ಎನ್.ವಾಸುದೇವ ಮೂರ್ತಿ ಅವರು ಕಿ.ರಂ.ನಾಗರಾಜ ಅವರ ಮಾರ್ಗದರ್ಶನದಲ್ಲಿ ಸಿದ್ಧಪಡಿಸಿದ ಅಲ್ಲಮ ಪ್ರಭುವಿನ ವಚನಗಳ ದಾರ್ಶನಿಕ ಮರುಚಿಂತನೆಯ ವಿಭಿನ್ನ ಸ್ವರೂಪಗಳು ಎಂಬ ಮಹಾಪ್ರಬಂಧಕ್ಕೆ ಹಂಪಿ ಕನ್ನದ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪ್ರಶಸ್ತಿ ಸಂದಿದೆ. ಬೆಂಗಳೂರು ವಿವಿಯಲ್ಲಿ ಕನ್ನಡ ಎಂ.ಎ (ತೌಲನಿಕ ಸಾಹಿತ್ಯ) ಪದವಿಯನ್ನು ಪಡೆದ ಮೇಲೆ ಬೆಂಗಳೂರಿನ ಹಲವು ಪ್ರಮುಖ ಕಾಲೇಜುಗಳಲ್ಲಿ ಕನ್ನಡ ಉಪನ್ಯಾಸಕರಾಗಿ ಕಾರ್ಯನಿರ್ವಹಿಸಿದರು. ನ್ಯಾಷನಲ್  ಕಾಲೇಜು, ಜೈನ್ ವಿಶ್ವವಿದ್ಯಾಲಯ ಕಾವ್ಯಮಂಡಲ ಮೊದಲಾದ ಕನ್ನಡ ಸ್ನಾತಕೋತ್ತರ ಕೇಂದ್ರಗಳಲ್ಲಿ ಕನ್ನಡ ಉಪನ್ಯಾಸಕರಾಗಿ ಎಂ.ಎ. ಹಾಗೂ ಎಂ.ಫಿಲ್ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದಾರೆ. ಓಶೋ ನೇರ ಶಿಷ್ಯರಾದ ಸ್ವಾಮಿ ಆನಂದ್ ಪ್ರಭಾವದಿಂದ ದೀಕ್ಷೆ ...

READ MORE

Related Books