ಇಪ್ಪತ್ತನೆಯ ಶತಮಾನದ ಕನ್ನಡ ಸಾಹಿತ್ಯ ಘಟ್ಟಗಳು

Author : ಬಸವರಾಜ ಸಾದರ

Pages 380

₹ 350.00




Year of Publication: 2019
Published by: ಪಲ್ಲವ ಪ್ರಕಾಶನ
Address: ಪಲ್ಲವ ಪ್ರಕಾಶನ ಚನ್ನಪಟ್ಟಣ ಅಂಚೆ, ಎಮ್ಮಿಗನೂರು (ವಯಾ) ಬಳ್ಳಾರಿ-583113
Phone: 9480728393

Synopsys

ತೀವ್ರತರ ಹಾಗೂ ಪ್ರತಿಕ್ರಿಯಾತ್ಮಕ ಪ್ರಕ್ರಿಯೆ ಗಳಿಂದ ಕೂಡಿದ ಇಪ್ಪತ್ತನೆಯ ಶತಮಾನದ ಕನ್ನಡ ಸಾಹಿತ್ಯವನ್ನು ಅದರ ವಿಭಿನ್ನ ಧೋರಣೆಗಳ ಹಿನ್ನೆಲೆಯಲ್ಲಿ ವಿಮರ್ಶಾತ್ಮಕ ಅವಲೋಕನ ಮಾಡುವ ಉದ್ದೇಶದಿಂದ ಆಕಾಶವಾಣಿ ಗುಲ್ಬರ್ಗ ಕೇಂದ್ರವು 2001ರ ಅಗಸ್ಟ್-ಸೆಪ್ಟಂಬರ್ ತಿಂಗಳಲ್ಲಿ “ಇಪ್ಪತ್ತನೆಯ ಶತಮಾನದ ಕನ್ನಡ ಸಾಹಿತ್ಯ ಘಟ್ಟಗಳು” ಎಂಬ ಏಳು ದಿನಗಳ ವಿಚಾರ ಸಂಕಿರಣವನ್ನು ಹಮ್ಮಿಕೊಂಡು ನೇರಪ್ರಸಾರ ಮಾಡಿತು.

ಈ ವಿಚಾರ ಸಂಕಿರಣದಲ್ಲಿ ಮಂಡಿತವಾದ ಕನ್ನಡದ ಹಿರಿಯ ವಿದ್ವಾಂಸರ ಉಪನ್ಯಾಸಗಳನ್ನೇ ಪ್ರಬಂಧಗಳ ರೂಪದಲ್ಲಿ ಸಿದ್ದಪಡಿಸಿ, 2002ರಲ್ಲಿ ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಹಯೋಗ ದೊಂದಿಗೆ ಪ್ರಕಟಿಸಲಾದ ಗ್ರಂಥವೇ “ಇಪ್ಪತ್ತನೆಯ ಶತಮಾನದ ಕನ್ನಡ ಸಾಹಿತ್ಯ ಘಟ್ಟಗಳು".

ಹೊಸಗನ್ನಡ ಸಾಹಿತ್ಯದ ಇತಿಹಾಸವನ್ನುವಿವಿಧ ಘಟ್ಟಗಳಲ್ಲಿ ವಿಂಗಡಿಸಿ ಕಟ್ಟಕೊಡುವ ಈ ಕೃತಿಯು ಕನ್ನಡ ಸಾಹಿತ್ಯಾಸಕ್ತ ವಿದ್ಯಾರ್ಥಿಗಳಿಗೆ ಹಾಗೂ ಅಧ್ಯಾಪಕರಿಗೆ ಉಪಯುಕ್ತ.

About the Author

ಬಸವರಾಜ ಸಾದರ
(20 July 1955)

ಕವಿ, ಕಥೆಗಾರ ಹಾಗೂ ಹೆಸರಾಂತ ಪ್ರಸಾರತಜ್ಞ ಡಾ. ಬಸವರಾಜ ಸಾದರ ಹುಟ್ಟಿದ್ದು 1955 ರ ಜುಲೈ 20 ರಂದು,  ಧಾರವಾಡ ಜಿಲ್ಲೆಯ ಕುಂದಗೋಳದಲ್ಲಿ. ಮೂಲತಃ ಕಲಘಟಗಿ ತಾಲೂಕಿನ ಹುಲ್ಲಂಬಿಯವರಾದ ಇವರು ಧಾರವಾಡದ ಕರ್ನಾಟಕ ಕಾಲೇಜಿನಿಂದ ಉನ್ನತ ಶ್ರೇಣ ಯಲ್ಲಿ ಬಿ.ಎ. ಹಾಗೂ ಕರ್ನಾಟಕ ವಿಶ್ವವಿದ್ಯಾಲಯದಿಂದ ರ್ಯಾಂಕ್ ಮತ್ತು ಚಿನ್ನದ ಪದಕದೊಂದಿಗೆ  ಎಂ. ಎ. ಪದವಿ ಪಡೆದಿದ್ದಾರೆ. ’ಬಸವರಾಜ ಕಟ್ಟೀಮನಿಯವರ ಕಾದಂಬರಿಗಳು’ ಎಂಬ ವಿಷಯ ಕುರಿತ ಅಧ್ಯಯನಕ್ಕೆ ಪಿಎಚ್.ಡಿ ಪದವಿ ಪಡೆದಿರುವ ಇವರು, ರ್ಯಾಂಕ್ ಹಾಗೂ ಮತ್ತೊಂದು ಚಿನ್ನದ ಪದಕದೊಂದಿಗೆ ಡಿಪ್ಲೋಮಾ-ಇನ್-ಬಸವ ಸ್ಟಡೀಜ್‍ನ್ನೂ ಪೂರೈಸಿದ್ದಾರೆ. 1984 ರಲ್ಲಿ ಕಾರ್ಯಕ್ರಮ ನಿರ್ವಾಹಕನೆಂದು ...

READ MORE

Excerpt / E-Books

http://kanaja.in/ebook/images/PDF/%E0%B2%87%E0%B2%AA%E0%B3%8D%E0%B2%AA%E0%B2%A4%E0%B3%8D%E0%B2%A4%E0%B2%A8%E0%B3%86%E0%B2%AF_%E0%B2%B6%E0%B2%A4%E0%B2%AE%E0%B2%BE%E0%B2%A8%E0%B2%A6_%E0%B2%95%E0%B2%A8%E0%B3%8D%E0%B2%A8%E0%B2%A1_%E0%B2%B8%E0%B2%BE%E0%B2%B9%E0%B2%BF%E0%B2%A4%E0%B3%8D%E0%B2%AF_%E0%B2%98%E0%B2%9F%E0%B3%8D%E0%B2%9F%E0%B2%97%E0%B2%B3%E0%B3%81.pdf

Related Books