ಇಂದಿರಾಗಾಂಧಿ ಹತ್ಯೆಯ ಬಳಿಕ

Author : ಕೆ.ಕೆ. ನಾಯರ್

Pages 304

₹ 90.00




Year of Publication: 2010

Synopsys

ಮಲಯಾಳಂ ಲೇಖಕ ಉಣ್ಣಿಕೃಷ್ಣನ್ ತಿರುವಾಯಿಯೋಡ್ ಅವರ 'ದೃಕ್ಸಾಕ್ಷಿ' ಕೃತಿಯನ್ನು ಕೆ.ಕೆ.ನಾಯರ್ ಕನ್ನಡಕ್ಕೆ ಅನುವಾದ ಮಾಡಿದ್ದಾರೆ.

1984ರಲ್ಲಿ ತನ್ನ ಅಂಗರಕ್ಷಕರಿಂದಲೇ ಅಂದಿನ ಪ್ರಧಾನಿ ಇಂದಿರಾಗಾಂಧಿ ದುರ್ಮರಣಕ್ಕೆ ಈಡಾದರು. ನಂತರ ಸ್ವತಂತ್ರ ಭಾರತದಲ್ಲಿ ಕಂಡು ಕೇಳರಿಯದ ಹತ್ಯಾಕಾಂಡ ನಡೆಯಿತು. ಅದಕ್ಕೆ ಕಾರಣವಾದ ಐತಿಹಾಸಿಕ, ಧಾರ್ಮಿಕ ವ್ಯವಸ್ಥೆಗಳ ವಿಶ್ಲೇಷಣೆ ಕೃತಿಯಲ್ಲಿದೆ. ಇದಕ್ಕೆ ಅಧಿಕಾರಿಗಳು ನೀಡಿದ ಕುಮ್ಮಕ್ಕು ಸರ್ಕಾರದ ನಿಷ್ಕ್ರಿಯತೆ, ಇವೆಲ್ಲಕ್ಕೂ ಸಾಕ್ಷಿಯಾಗಿದ್ದ ವ್ಯಕ್ತಿಯೊಬ್ಬನ ನೈಜ, ವಸ್ತುನಿಷ್ಠಾತ್ಮಕ ವಿವರಣೆಗಳನ್ನು ಈ ಕೃತಿಯಲ್ಲಿ ವಿವರಿಸಲಾಗಿದೆ.

About the Author

ಕೆ.ಕೆ. ನಾಯರ್ - 21 January 2014)

ಭಾಷಾಂತರಕ್ಕಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದಿದ್ದ ಲೇಖಕ ಕೆ. ಕೆ. ನಾಯರ್. ಕೆ. ಕೆ. ನಾಯರ್ ಅವರು ಜನಿಸಿದ್ದು ಉತ್ತರ ಕೇರಳದ ಪುಟ್ಟ ಗ್ರಾಮ ಅರತ್ತಿಲ್‌ನಲ್ಲಿ. ಬಡತನದ ಕಾರಣದಿಂದ ಬಾಲ್ಯದಲ್ಲಿಯೇ ಮಣಿಪಾಲಕ್ಕೆ ವಲಸೆ ಬಂದರು.  ಮಲಯಾಳಂನಿಂದ ಕನ್ನಡಕ್ಕೆ 16 ಕಾದಂಬರಿ, 7 ಕಾವ್ಯ, 5 ಸಣ್ಣ ಕಥೆಗಳ ಸಂಗ್ರಹ ಅನುವಾದಿಸಿದ್ದಾರೆ. ಅವರು ’ಒಂದು ಆತ್ಮ ಕಥನ’ (ಕುಂಞಪ್ಪ) ಮಾತ್ರ ಕನ್ನಡದಲ್ಲಿ ರಚಿಸಿದ್ದಾರೆ. ಕನ್ನಡದಿಂದ ಮಲಯಾಳಕ್ಕೆ ಐದು ಕಾದಂಬರಿ ಅನುವಾದಿಸಿರುವ ಅವರು ತಗಳಿ ಶಿವಶಂಕರ ಪಿಳ್ಳೈ ಅವರ ಮಲಯಾಳ ಕೃತಿ ‘ಕಯರ್ ’ಅನ್ನು ’ಹಗ್ಗ’ ಎಂದು ಭಾಷಾಂತರಿಸಿದ್ದರು. ಅದಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಭಾಷಾಂತರ ಪ್ರಶಸ್ತಿ ...

READ MORE

Related Books