ಜಾಡಮಾಲಿಯ ಜೀವ ಕೇಳುವುದಿಲ್ಲ

Author : ರಾಜಶೇಖರ ಮಠಪತಿ (ರಾಗಂ)

Pages 168

₹ 200.00




Published by: ಯಾಜಿ ಪ್ರಕಾಶನ

Synopsys

ಹಿಂದೂ- ಮುಸ್ಲಿಂ ಬದುಕನ್ನು ಅನುಭಾವದ ನೆಲೆಯಲ್ಲಿ ನೊಡುವ ಯತ್ನ ’ಜಾಡಮಾಲಿಯ ಜೀವ ಕೇಳುವುದಿಲ್ಲ’. ಇದು ಧರ್ಮದ ಎಲ್ಲೆಗಳನ್ನು ಮೀರಿದ ಒಟ್ಟು ೪೭ ಕವಿಗಳ  ಜೀವನ ದೃಷ್ಟಿಯನ್ನು ಹಿಡಿದಿಡುತ್ತದೆ. 

ಮಾನವೀಯತೆಯನ್ನೇ ಸೂಸುವಂತಿರುವ ಈ ಕವಿತೆಗಳು ಸಾಹಿತ್ಯದ ಅಧ್ಯಯನದ ದೃಷ್ಟಿಯಿಂದ ಮಾತ್ರವಲ್ಲದೆ ಸಮಾಜದ ಅಸ್ವಸ್ಥತೆ ಕಾರಣಕ್ಕೂ ಮಹತ್ವದ್ದಾಗಿವೆ. 

ಸಾಹಿತ್ಯ ಕಾರ್ಯಕ್ರಮವೊಂದರಲ್ಲಿ ಕೃತಿ ಚರ್ಚೆಗೆ ಒಳಗಾಗಿದ್ದು’ಕನ್ನಡದ ಕಿಟಕಿಯಿಂದ ಜಗತ್ತಿನ ಸಾಹಿತ್ಯ ಲೋಕವನ್ನು ನೋಡುವ ಅದ್ಭುತ ಪ್ರಯತ್ನದ ಫಲ’ ಎಂದು ಉಪನ್ಯಾಸಕ ಸಂಗಮೇಶ ಗಣಿ ಅಭಿಪ್ರಾಯಪಟ್ಟಿದ್ದಾರೆ. 

About the Author

ರಾಜಶೇಖರ ಮಠಪತಿ (ರಾಗಂ)

ಸಾಹಿತಿ, ಚಿಂತಕ, ಕನ್ನಡ ಸಾಹಿತ್ಯ ಆಕಾಡೆಮಿ ಸದಸ್ಯರಾದ  ರಾಜಶೇಖರ ಮಠಪತಿ (ರಾಗಂ) ಅವರು ಹುಟ್ಟಿದ್ದು ಬೆಳಗಾಂವ ಜಿಲ್ಲೆಯ ತೆಲಸಂಗದಲ್ಲಿ. ಕರ್ನಾಟಕದ ಗಡಿಯ ಊರಾದ ಚಡಚಣದಲ್ಲಿ ಪ್ರಾಥಮಿಕದಿಂದ ಪದವಿಪೂರ್ವದ ಶಿಕ್ಷಣ, ನಂತರ ಬಿಜಾಪೂರ ಮತ್ತು ಸೊಲ್ಲಾಪುಗಳಲ್ಲಿ ಪದವಿ ಹಾಗೂ ಸ್ನಾತಕೋತ್ತರ ಶಿಕ್ಷಣ, ಕ.ವಿ.ವಿ ಧಾರವಾಡದಿಂದ ಆಂಗ್ಲ ಸಾಹಿತಿ, ಸಿನಿಮಾ ನಿರ್ದೇಶಕ,ಪತ್ರಕರ್ತ, ಕೆ.ಎ.ಅಬ್ಬಾಸರನ್ನು ಕುರಿತು ಪಿ.ಹೆಚ್.ಡಿ - ಹೀಗೆ ಶೈಕ್ಷಣಿಕ ಬದುಕಿನ ಹಲವು ಹಂತಗಳನ್ನು ಗಳಿಸಿದ್ದಾರೆ. ಇದುವರೆಗೆ ಅವರು ಕನ್ನಡ, ಇಂಗ್ಲಿಷ್ ಎರಡೂ ಭಾಷೆಗಳಲ್ಲಿ ಬರೆದ ಕೃತಿಗಳ ಸಂಖ್ಯೆ ಅರವತ್ತು ಅಂಕಿಯನ್ನು ದಾಟುತ್ತದೆ. ಕಾವ್ಯ, ಕತೆ, ನಾಟಕ, ಪ್ರಬಂಧ, ಅಂಕಣ, ಸಂಶೋಧನೆ, ...

READ MORE

Related Books