ಜಾಗರ

Author : ಎಂ. ಪ್ರಭಾಕರ ಜೋಷಿ

Pages 154

₹ 15.00




Year of Publication: 1984
Published by: ಸುಮನಸಾ ವಿಚಾರ ವೇದಿಕೆ ಚೊಕ್ಕಾಡಿ
Address: ಚೊಕ್ಕಾಡಿ, ದ.ಕ.

Synopsys

ಲೇಖಕ ಎಂ. ಪ್ರಭಾಕರ ಜೋಶಿ ಅವರು ಬರೆದ ವಿಮರ್ಶಾತ್ಮಕ ಕೃತಿ ʻಜಾಗರʼ. ಪುಸ್ತಕದ ಮುನ್ನುಡಿಯಲ್ಲಿ ಲೇಖಕ ಲಕ್ಷ್ಮೀಶ ತೋಳ್ಪಾಡಿ ಅವರು, “ಇತ್ತ ದಟ್ಟವಾದ; ವಿವರ ವಿವರಕ್ಕೆ ಕಣ್ಣು ಹಾಯಿಸಬಲ್ಲ ಎಚ್ಚರವಲ್ಲ. ಅತ್ತ ಎಲ್ಲದಕ್ಕು ಕರಿಮುಸುಕು ಎಳೆದಂತೆ ಗಾಢ ಸುಷುಪ್ತಿಯಲ್ಲ. ನಡುವಣ ಸ್ವಪ್ನ, ರಮ್ಯ; ಅರ್ಧನಿಮೀಲಿತ ಮಾಯಾಲೋಕವೊಂದರ ಸೃಷ್ಟಿಗಾಗಿ ಕಲೆ ಕೆಲಸ ಮಾಡುತ್ತದೆ. ನಮ್ಮ ಸಂಗೀತ, ಚಿತ್ರ, ಶಿಲ್ಪ, ನಾಟ್ಯ ಎಲ್ಲೆ ಲ್ಲಿಯೂ ಈ ಅರೆತೆರೆದ ಅಂದರೆ ಅರೆಮುಚ್ಚಿದ, ವ್ಯಂಗ್ಯದ ಸೋಂಕಿಲ್ಲದೆ ಹೇಳುವೆ - ಈ ನಿಸ್ತರಂಗ ಧ್ಯಾನ ಸ್ಥಿತಿ. ಈ ಸಂಗ್ರಹದ ಅತ್ಯುತ್ತಮ ಬರಹವನ್ನು ಹುಡುಕಿದೆ. ಇಲ್ಲಿ ತಾಳ ಮದ್ದಳೆಯ ಒಳಹೊರಗನ್ನು ಹಿಡಿದ ʻತಾಳಮದ್ದಳೆ' ಎಂಬ ಬರಹ ಇದೆ. ಯಕ್ಷಗಾನ ಮೇಳಗಳನ್ನು ಕುರಿತಂತೆ ಅಪಾರ ಮಾಹಿತಿ, ವ್ಯಾಖ್ಯಾನ ಇದೆ. ಅರ್ಥಗಾರಿಕೆಯ ಸಮೀಕ್ಷೆ ಇದೆ. ಎಲ್ಲದರಲ್ಲು ಜೋಶಿಯವರ ಸೂಕ್ಷ್ಮ ಗ್ರಹಣ ಶಕ್ತಿ, ಪಾಂಡಿತ್ಯ, ಪ್ರತಿಭೆ ಹರಿದಾಡಿದೆ. ನನಗೆ ತೀರ-ತೀರ ಮೆಚ್ಚುಗೆಯಾದ ಬರಹ ʻಯಕ್ಷಗಾನ ಫರಂಪರೆ` ಮತ್ತು ʻನಾಲ್ಕು ವೇಷಗಳುʼ. ಆಲೋಚನೆ ಮತ್ತು ಒಳನೋಟ ಇಲ್ಲಿ ಹದವರಿತು ಸೇರಿವೆ. 73ರಷ್ಟು ಹಿಂದೆಯೇ ನಾಲ್ಕು ವೇಷಗಳು ಎಂಬ ಬರಹ ಜೋಶಿ ಬರೆದರೇ ಎಂದು ವಿಸ್ಮಯವಾಗುತ್ತದೆ” ಎಂದು ಹೇಳಿದರು.

About the Author

ಎಂ. ಪ್ರಭಾಕರ ಜೋಷಿ

ಎಂ. ಪ್ರಭಾಕರ್ ಜೋಷಿಯವರು ದಕ್ಷಿಣ ಕನ್ನಡ ಜಿಲ್ಲೆಯ ಕಾರ್ಕಳ ತಾಲ್ಲೂಕಿನ ಮಾಳದಲ್ಲಿ 1946 ರಲ್ಲಿ ಜನಿಸಿದರು. ಇವರ ತಂದೆ ನಾರಾಯಣ ಜೋಷಿ; ಪ್ರಸಿದ್ದ  ವಿದ್ವಾಂಸರು ಹಾಗೂ ವಾಗ್ಮಿಗಳು. ಅನಿರುದ್ಧ ಭಟ್ಟರು ಯಕ್ಷಗಾನದ ಅರ್ಥಧಾರಿಗಳು. ಜೋಷಿಯವರು ಇವರಲ್ಲೇ ಯಕ್ಷಗಾನ ಕಲಿತರು. ಎಂ.ಕಾಂ.ಪದವೀಧರರಾದ ಜೋಷಿ, ಹಿಂದಿ ಸಾಹಿತ್ಯ ರತ್ನ ಹಾಗೂ "ಯಕ್ಷಗಾನದಲ್ಲಿ ’ಕೃಷ್ಣ ಸಂಧಾನ`ಪ್ರಸಂಗ" ವಿಷಯದಲ್ಲಿ ಸಂಶೋಧನೆ ಮಾಡಿ ಡಾಕ್ಟರೇಟ್ ಪಡೆದವರು. ಯಕ್ಷಗಾನ ಪರಂಪರೆ, ಅದು ನಡೆದು ಬಂದ ದಾರಿ,ಇತ್ತೀಚೆಗೆ ಬದಲಾವಣೆಗೊಂಡಿರುವ ಕೆಲವು ಸಂಪ್ರದಾಯಗಳ ಸಾಧಕ-ಬಾಧಕಗಳ ಜ್ಞಾನ ಇರುವ ಜೋಷಿ, ಶ್ರೇಷ್ಠ ವಿಮರ್ಶಕರೂ ಹೌದು. ವಿದೇಶಗಳಲ್ಲೂ ಯಕ್ಷಗಾನದ ನೂರಾರು ಕಮ್ಮಟಗಳಲ್ಲಿ ಭಾಗವಹಿಸಿದ್ದಾರೆ. ನೂರಾರು ಕೃತಿಗಳನ್ನು ರಚಿಸಿದ್ದಾರೆ. ಅವುಗಳಲ್ಲಿ ಕೃಷ್ಣ ಸಂಧಾನ: ಪ್ರಸಂಗ ...

READ MORE

Related Books